ರಣಜಿ ಟ್ರೋಫಿ 'ಚಾಂಪಿಯನ್' ಕೋಚ್ ಪಂಡಿತ್ ಕೆಕೆಆರ್ ತರಬೇತುದಾರಾಗಿ ನೇಮಕ

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿಯಲ್ಲಿ ಆಡುವ ಕೋಲ್ಕತ್ತ ನೈಟ್ ರೈಡರ್ಸ್ (ಕೆಕೆಆರ್) ತಂಡವು ಚಂದ್ರಕಾಂತ್ ಪಂಡಿತ್ ಅವರನ್ನು ಕೋಚ್ ಆಗಿ ನೇಮಿಸಿಕೊಂಡಿದೆ.
ಈ ಹಿಂದೆ ಕೋಚ್ ಆಗಿದ್ದ ಬ್ರೆಂಡನ್ ಮೆಕಲಂ, ಇಂಗ್ಲೆಂಡ್ ಟೆಸ್ಟ್ ತಂಡಕ್ಕೆ ನೇಮಕವಾದ ಕಾರಣ ಅವರ ಸ್ಥಾನಕ್ಕೆ ಚಂದ್ರಕಾಂತ್ ಅವರನ್ನು ನೇಮಿಸಲಾಗಿದೆ.
ಚಂದ್ರಕಾಂತ್ ತರಬೇತಿಯಲ್ಲಿ ಇತ್ತೀಚೆಗೆ ಮಧ್ಯಪ್ರದೇಶ ತಂಡವು ರಣಜಿ ಟ್ರೋಫಿ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.