ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿಯು ಸಕಾರಾತ್ಮಕ ಭಾವ ಹರಡಲಿದ್ದು, ಲಾಕ್ಡೌನ್ನ ನಂತರ ಉಂಟಾಗುವ ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ಜನರ ಮನಸ್ಥಿತಿ ಬದಲಾಯಿಸಲಿದೆ ಎಂದು ಭಾರತ ಕ್ರಿಕೆಟ್ ತಂಡದ ಆರಂಭದ ಬ್ಯಾಟ್ಸ್ಮನ್ ಶಿಖರ್ ಧವನ್ ಅಭಿಪ್ರಾಯಪಟ್ಟಿದ್ದಾರೆ. ಟೂರ್ನಿಯು ಇದೇ ವರ್ಷ ನಡೆಯಲಿದೆ ಎಂಬ ವಿಶ್ವಾಸವನ್ನೂ ಅವರು ವ್ಯಕ್ತಪಡಿಸಿದ್ದಾರೆ.