<p><strong>ನವದೆಹಲಿ:</strong> ಮುಂಬೈ ಮೂಲದ ಕ್ರಿಕೆಟಿಗ ಸರ್ಫರಾಜ್ ಖಾನ್ ಅವರನ್ನು ಉಪನಾಮದ ಕಾರಣದಿಂದಾಗಿ ಭಾರತ ಎ ತಂಡದಿಂದ ಕೈಬಿಡಲಾಗಿದೇ ಎಂದು ಕಾಂಗ್ರೆಸ್ ವಕ್ತಾರೆ ಶಮಾ ಮೊಹಮ್ಮದ್ ಅವರು ಬುಧವಾರ ಪ್ರಶ್ನಿಸಿದ್ದಾರೆ. </p><p>ಈ ವಿಷಯದ ಕುರಿತು ಭಾರತ ಕ್ರಿಕೆಟ್ ತಂಡದ ಕೋಚ್ ಗೌತಮ್ ಗಂಭೀರ್ ಅವರ ನಿಲುವು ಕೂಡ ನಮಗೆ ತಿಳಿದಿದೆ ಎಂದು ಶಮಾ ಮೊಹಮ್ಮದ್ ಅವರು ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ. </p><p>ಕಾಂಗ್ರೆಸ್ ವಕ್ತಾರೆಯ ಹೇಳಿಕೆಗೆ ಬಿಜೆಪಿಯು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. </p><p>'ನಿಮ್ಮ ಕೊಳಕು ರಾಜಕೀಯ ಕೋಮುವಾದವನ್ನು ಕ್ರಿಕೆಟ್ನಿಂದ ದೂರವಿಡಿ. ಅದೇ ತಂಡದಲ್ಲಿ ಮೊಹಮ್ಮದ್ ಸಿರಾಜ್, ಖಲೀಲ್ ಅಹ್ಮದ್ ಕೂಡ ಆಡುತ್ತಿದ್ದಾರೆ. ಭಾರತವನ್ನು ಕೋಮು ಮತ್ತು ಜಾತಿ ಆಧಾರದ ಮೇಲೆ ವಿಭಜಿಸುವುದನ್ನು ನಿಲ್ಲಿಸಿ' ಎಂದು ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲ ಅವರು ಕಿಡಿಕಾರಿದ್ದಾರೆ. </p><p>ದಕ್ಷಿಣ ಆಫ್ರಿಕಾ ಎ ವಿರುದ್ಧದ ಎರಡು 'ಟೆಸ್ಟ್' ಪಂದ್ಯಗಳಿಗೆ ಮಂಗಳವಾರ ಭಾರತ ಎ ತಂಡವನ್ನು ಆಯ್ಕೆ ಮಾಡಲಾಗಿತ್ತು. ರಿಷಭ್ ಪಂತ್ ನಾಯಕತ್ವದ ತಂಡದಲ್ಲಿ ಸರ್ಫರಾಜ್ ಖಾನ್ ಅವರಿಗೆ ಸ್ಥಾನ ಲಭಿಸಿಲ್ಲ. </p><p>ದೇಶಿ ಕ್ರಿಕೆಟ್ನಲ್ಲಿ ಉತ್ತಮ ಲಯದಲ್ಲಿದ್ದ ಸರ್ಫರಾಜ್ ಖಾನ್ ಅವರನ್ನು ತಂಡದಿಂದ ಕೈಬಿಟ್ಟಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. </p><p>ಮಾರ್ಚ್ನಲ್ಲಿ ಶಮಾ ಮೊಹಮ್ಮದ್ ಅವರು 'ರೋಹಿತ್ ಶರ್ಮಾ ಅವರು ಒಬ್ಬ ಕ್ರೀಡಾಪಟುವಿಗಿಂತ ದಪ್ಪವಾಗಿದ್ದಾರೆ' ಎಂದಿದ್ದು ವಿವಾದಕ್ಕೆ ಕಾರಣವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮುಂಬೈ ಮೂಲದ ಕ್ರಿಕೆಟಿಗ ಸರ್ಫರಾಜ್ ಖಾನ್ ಅವರನ್ನು ಉಪನಾಮದ ಕಾರಣದಿಂದಾಗಿ ಭಾರತ ಎ ತಂಡದಿಂದ ಕೈಬಿಡಲಾಗಿದೇ ಎಂದು ಕಾಂಗ್ರೆಸ್ ವಕ್ತಾರೆ ಶಮಾ ಮೊಹಮ್ಮದ್ ಅವರು ಬುಧವಾರ ಪ್ರಶ್ನಿಸಿದ್ದಾರೆ. </p><p>ಈ ವಿಷಯದ ಕುರಿತು ಭಾರತ ಕ್ರಿಕೆಟ್ ತಂಡದ ಕೋಚ್ ಗೌತಮ್ ಗಂಭೀರ್ ಅವರ ನಿಲುವು ಕೂಡ ನಮಗೆ ತಿಳಿದಿದೆ ಎಂದು ಶಮಾ ಮೊಹಮ್ಮದ್ ಅವರು ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ. </p><p>ಕಾಂಗ್ರೆಸ್ ವಕ್ತಾರೆಯ ಹೇಳಿಕೆಗೆ ಬಿಜೆಪಿಯು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. </p><p>'ನಿಮ್ಮ ಕೊಳಕು ರಾಜಕೀಯ ಕೋಮುವಾದವನ್ನು ಕ್ರಿಕೆಟ್ನಿಂದ ದೂರವಿಡಿ. ಅದೇ ತಂಡದಲ್ಲಿ ಮೊಹಮ್ಮದ್ ಸಿರಾಜ್, ಖಲೀಲ್ ಅಹ್ಮದ್ ಕೂಡ ಆಡುತ್ತಿದ್ದಾರೆ. ಭಾರತವನ್ನು ಕೋಮು ಮತ್ತು ಜಾತಿ ಆಧಾರದ ಮೇಲೆ ವಿಭಜಿಸುವುದನ್ನು ನಿಲ್ಲಿಸಿ' ಎಂದು ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲ ಅವರು ಕಿಡಿಕಾರಿದ್ದಾರೆ. </p><p>ದಕ್ಷಿಣ ಆಫ್ರಿಕಾ ಎ ವಿರುದ್ಧದ ಎರಡು 'ಟೆಸ್ಟ್' ಪಂದ್ಯಗಳಿಗೆ ಮಂಗಳವಾರ ಭಾರತ ಎ ತಂಡವನ್ನು ಆಯ್ಕೆ ಮಾಡಲಾಗಿತ್ತು. ರಿಷಭ್ ಪಂತ್ ನಾಯಕತ್ವದ ತಂಡದಲ್ಲಿ ಸರ್ಫರಾಜ್ ಖಾನ್ ಅವರಿಗೆ ಸ್ಥಾನ ಲಭಿಸಿಲ್ಲ. </p><p>ದೇಶಿ ಕ್ರಿಕೆಟ್ನಲ್ಲಿ ಉತ್ತಮ ಲಯದಲ್ಲಿದ್ದ ಸರ್ಫರಾಜ್ ಖಾನ್ ಅವರನ್ನು ತಂಡದಿಂದ ಕೈಬಿಟ್ಟಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. </p><p>ಮಾರ್ಚ್ನಲ್ಲಿ ಶಮಾ ಮೊಹಮ್ಮದ್ ಅವರು 'ರೋಹಿತ್ ಶರ್ಮಾ ಅವರು ಒಬ್ಬ ಕ್ರೀಡಾಪಟುವಿಗಿಂತ ದಪ್ಪವಾಗಿದ್ದಾರೆ' ಎಂದಿದ್ದು ವಿವಾದಕ್ಕೆ ಕಾರಣವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>