ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ನಲ್ಲಿ ಆಡಿದ ಭಾರತ ತಂಡ ಇಂಗ್ಲೆಂಡ್ ಎದುರಿನ ಟೆಸ್ಟ್ ಸರಣಿಗಾಗಿ ಇಂಗ್ಲೆಂಡ್ನಲ್ಲೇ ಉಳಿದುಕೊಂಡಿದೆ. ತಂಡದ ಆರಂಭಿಕ ಬ್ಯಾಟ್ಸ್ಮನ್ ಶುಭಮನ್ ಗಿಲ್ ಕಳೆದ ವಾರ ಗಾಯಗೊಂಡ ಕಾರಣ ಅವರ ಬದಲಿಗೆ ಬಂಗಾಳದ ಅಭಿಮನ್ಯು ಈಶ್ವರನ್ ಅವರನ್ನು ಕರೆಸಿಕೊಳ್ಳಲು ನಿರ್ಧರಿಸಲಾಗಿತ್ತು. 2019–20ನೇ ಸಾಲಿನ ರಣಜಿ ಟೂರ್ನಿಯಲ್ಲೂ ನ್ಯೂಜಿಲೆಂಡ್ ಪ್ರವಾಸದಲ್ಲೂ ನೀರಸ ಆಟವಾಡಿದ ಅಭಿಮನ್ಯುಗೆ ಅವಕಾಶ ನೀಡಿದ್ದು ಕ್ರಿಕೆಟ್ ವಲಯದ ಅಚ್ಚರಿಗೆ ಕಾರಣವಾಗಿತ್ತು.