<p><strong>ಅಡಿಲೇಡ್:</strong> ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಭಾರತ ಕ್ರಿಕೆಟ್ ತಂಡದ ಕಪ್ತಾನ ವಿರಾಟ್ ಕೊಹ್ಲಿ, ಆಸ್ಟ್ರೇಲಿಯಾ ವಿರುದ್ಧ ಸಾಗುತ್ತಿರುವ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೊದಲ ಟೆಸ್ಟ್ ಪಂದ್ಯದ ಬಳಿಕ ತವರಿಗೆ ಮರಳಲಿದ್ದಾರೆ.</p>.<p>ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿರಾಟ್ ಕೊಹ್ಲಿ, ಯಾವುದೇ ಬೆಲೆ ತೆತ್ತಾದರೂ ಆ ಕ್ಷಣ ಅಲ್ಲಿರಲು ಬಯಸುತ್ತೇನೆ ಎಂದು ಹೇಳಿದರು.</p>.<p>ರಾಷ್ಟ್ರೀಯ ಕರ್ತವ್ಯವನ್ನು ಬದಿಗೊತ್ತಿ ವಿರಾಟ್ ಕೊಹ್ಲಿ, ವೈಯಕ್ತಿಕ ಬದ್ಧತೆಗಳಿಗೆ ಹೆಚ್ಚಿನ ಆದತ್ಯೆ ನೀಡುತ್ತಾರೆ ಎಂಬ ಬಗ್ಗೆ ಆಕ್ರೋಶಗಳು ಎದ್ದಿದ್ದವು. ಈ ಬಗ್ಗೆ ಆಸ್ಟ್ರೇಲಿಯಾದ ಸ್ಟಾರ್ ಆಟಗಾರ ಸ್ಟೀವನ್ ಸ್ಮಿತ್ ಜೊತೆ ನಡೆಸಿದ ಸಂವಾದದಲ್ಲಿ ವಿರಾಟ್ ಕೊಹ್ಲಿ ತಮ್ಮ ನಿಲುವನ್ನು ಸ್ಪಷ್ಟಪಡಿಸಿದರು.</p>.<p>ಇದನ್ನೂ ಓದಿ:<a href="https://www.prajavani.net/sports/cricket/india-vs-australia-1st-test-team-india-41-for-2-at-lunch-day-1-at-adelaide-787973.html" itemprop="url">IND vs AUS Test:ಪೃಥ್ವಿ, ಮಯಂಕ್ ವಿಕೆಟ್ ಪತನ; ವಿರಾಮಕ್ಕೆ ಭಾರತ 41/2 </a></p>.<p>ನನ್ನ ಮನಸ್ಸಿನಲ್ಲಿ ಸ್ಪಷ್ಟ ನಿರ್ಧಾರವಿದೆ. ದೇಶಕ್ಕಾಗಿ ಆಡಲು ನೀವು ಬದ್ಧವಾಗಿರುವಂತೆಯೇ ಇದು ಜೀವನದ ಬಹಳ ವಿಶೇಷವಾದ ಕ್ಷಣವಾಗಿದ್ದು, ಯಾವುದೇ ಬೆಲೆ ತೆತ್ತಾದರೂ ಆ ಕ್ಷಣ ಅಲ್ಲಿರಲು ಬಯಸುತ್ತೇನೆ ಎಂದು ಹೇಳಿದರು.</p>.<p>ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾವನ್ನು ಕೊನೆಯ ಮೂರು ಪಂದ್ಯಗಳಲ್ಲಿ ಅಜಿಂಕ್ಯ ರಹಾನೆ ಮುನ್ನಡೆಸಲಿದ್ದಾರೆ.</p>.<p><strong>ವ್ಯಕ್ತಿಯನ್ನು ವೈಯಕ್ತಿಕವಾಗಿ ಗುರಿಯಾಗಿಸುವುದು ಸರಿಯಲ್ಲ...</strong><br />ಬಾಲ್ ಟ್ಯಾಂಪರಿಂಗ್ ಪ್ರಕರಣದಲ್ಲಿ ಸಿಕ್ಕಿಬಿದ್ದು ಒಂದು ವರ್ಷ ನಿಷೇಧ ಶಿಕ್ಷೆ ಬಳಿಕ ಕಳೆದ ವರ್ಷ ಅಂತರ ರಾಷ್ಟ್ರೀಯ ಕ್ರಿಕೆಟ್ಗೆ ಮರಳಿದ್ದ ಸ್ಟೀವನ್ ಸ್ಮಿತ್ ಅವರನ್ನು ಅಭಿಮಾನಿಗಳು ಅಸಭ್ಯ ಮಾತುಗಳಿಂದ ನಿಂದಿಸಿದ್ದರು.</p>.<p>ಇದನ್ನೂ ಓದಿ:<a href="https://www.prajavani.net/sports/cricket/mathes-of-sayyad-mushtaq-ali-t20-will-be-held-in-bangaluru-787968.html" itemprop="url">ಬೆಂಗಳೂರಿನಲ್ಲಿ ಸೈಯ್ಯದ್ ಮುಷ್ತಾಕ್ ಅಲಿ ಟಿ20 ಪಂದ್ಯಗಳು </a></p>.<p>ಆಸ್ಟ್ರೇಲಿಯಾ ವಿರುದ್ಧ ಏಕದಿನ ವಿಶ್ವಕಪ್ ಪಂದ್ಯದ ವೇಳೆ ಸ್ಮಿತ್ ವಿರುದ್ಧ ಅಭಿಮಾನಿಗಳು ಘೋಷಣೆ ಕೂಗಿದರು. ತಕ್ಷಣ ಎಚ್ಚೆತ್ತುಕೊಂಡ ವಿರಾಟ್ ಕೊಹ್ಲಿ, ಅಭಿಮಾನಿಗಳಲ್ಲಿ ಉತ್ತಮ ವರ್ತನೆ ತೋರುವಂತೆ ಮನವಿ ಮಾಡಿಕೊಂಡರು. ವಿರಾಟ್ ಕೊಹ್ಲಿ ಕ್ರೀಡಾಸ್ಫೂರ್ತಿಯು ವ್ಯಾಪಕ ಮನ್ನಣೆಗೆ ಪಾತ್ರವಾಗಿತ್ತು. ಈ ಬಗ್ಗೆ ಸ್ವತಃ ಸ್ಟೀವನ್ ಸ್ಮಿತ್ ಧನ್ಯವಾದವನ್ನು ಸಲ್ಲಿಸಿದರು.</p>.<p>ತಾಜಾ ಸಂವಾದದಲ್ಲಿ ಸ್ಮಿತ್ ಜೊತೆಗಿನ ಈ ಘಟನೆಯನ್ನು ನೆನಪಿಸಿಕೊಂಡಿರುವ ವಿರಾಟ್ ಕೊಹ್ಲಿ, ಆಟಗಾರರನ್ನು ವೈಯಕ್ತಿಕವಾಗಿ ಗುರಿಯಾಗಿಸುವುದು ಸರಿಯಲ್ಲ ಎಂದರು.</p>.<p>ಜನರು ತಪ್ಪುಗಳನ್ನು ಮಾಡುತ್ತಾರೆ ಮತ್ತು ಅದರಿಂದ ಕಲಿತುಕೊಳ್ಳುತ್ತಾರೆ. ಜೀವನದಲ್ಲಿ ಯಾವುದೂ ಶಾಶ್ವತವಲ್ಲ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಡಿಲೇಡ್:</strong> ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಭಾರತ ಕ್ರಿಕೆಟ್ ತಂಡದ ಕಪ್ತಾನ ವಿರಾಟ್ ಕೊಹ್ಲಿ, ಆಸ್ಟ್ರೇಲಿಯಾ ವಿರುದ್ಧ ಸಾಗುತ್ತಿರುವ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೊದಲ ಟೆಸ್ಟ್ ಪಂದ್ಯದ ಬಳಿಕ ತವರಿಗೆ ಮರಳಲಿದ್ದಾರೆ.</p>.<p>ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿರಾಟ್ ಕೊಹ್ಲಿ, ಯಾವುದೇ ಬೆಲೆ ತೆತ್ತಾದರೂ ಆ ಕ್ಷಣ ಅಲ್ಲಿರಲು ಬಯಸುತ್ತೇನೆ ಎಂದು ಹೇಳಿದರು.</p>.<p>ರಾಷ್ಟ್ರೀಯ ಕರ್ತವ್ಯವನ್ನು ಬದಿಗೊತ್ತಿ ವಿರಾಟ್ ಕೊಹ್ಲಿ, ವೈಯಕ್ತಿಕ ಬದ್ಧತೆಗಳಿಗೆ ಹೆಚ್ಚಿನ ಆದತ್ಯೆ ನೀಡುತ್ತಾರೆ ಎಂಬ ಬಗ್ಗೆ ಆಕ್ರೋಶಗಳು ಎದ್ದಿದ್ದವು. ಈ ಬಗ್ಗೆ ಆಸ್ಟ್ರೇಲಿಯಾದ ಸ್ಟಾರ್ ಆಟಗಾರ ಸ್ಟೀವನ್ ಸ್ಮಿತ್ ಜೊತೆ ನಡೆಸಿದ ಸಂವಾದದಲ್ಲಿ ವಿರಾಟ್ ಕೊಹ್ಲಿ ತಮ್ಮ ನಿಲುವನ್ನು ಸ್ಪಷ್ಟಪಡಿಸಿದರು.</p>.<p>ಇದನ್ನೂ ಓದಿ:<a href="https://www.prajavani.net/sports/cricket/india-vs-australia-1st-test-team-india-41-for-2-at-lunch-day-1-at-adelaide-787973.html" itemprop="url">IND vs AUS Test:ಪೃಥ್ವಿ, ಮಯಂಕ್ ವಿಕೆಟ್ ಪತನ; ವಿರಾಮಕ್ಕೆ ಭಾರತ 41/2 </a></p>.<p>ನನ್ನ ಮನಸ್ಸಿನಲ್ಲಿ ಸ್ಪಷ್ಟ ನಿರ್ಧಾರವಿದೆ. ದೇಶಕ್ಕಾಗಿ ಆಡಲು ನೀವು ಬದ್ಧವಾಗಿರುವಂತೆಯೇ ಇದು ಜೀವನದ ಬಹಳ ವಿಶೇಷವಾದ ಕ್ಷಣವಾಗಿದ್ದು, ಯಾವುದೇ ಬೆಲೆ ತೆತ್ತಾದರೂ ಆ ಕ್ಷಣ ಅಲ್ಲಿರಲು ಬಯಸುತ್ತೇನೆ ಎಂದು ಹೇಳಿದರು.</p>.<p>ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾವನ್ನು ಕೊನೆಯ ಮೂರು ಪಂದ್ಯಗಳಲ್ಲಿ ಅಜಿಂಕ್ಯ ರಹಾನೆ ಮುನ್ನಡೆಸಲಿದ್ದಾರೆ.</p>.<p><strong>ವ್ಯಕ್ತಿಯನ್ನು ವೈಯಕ್ತಿಕವಾಗಿ ಗುರಿಯಾಗಿಸುವುದು ಸರಿಯಲ್ಲ...</strong><br />ಬಾಲ್ ಟ್ಯಾಂಪರಿಂಗ್ ಪ್ರಕರಣದಲ್ಲಿ ಸಿಕ್ಕಿಬಿದ್ದು ಒಂದು ವರ್ಷ ನಿಷೇಧ ಶಿಕ್ಷೆ ಬಳಿಕ ಕಳೆದ ವರ್ಷ ಅಂತರ ರಾಷ್ಟ್ರೀಯ ಕ್ರಿಕೆಟ್ಗೆ ಮರಳಿದ್ದ ಸ್ಟೀವನ್ ಸ್ಮಿತ್ ಅವರನ್ನು ಅಭಿಮಾನಿಗಳು ಅಸಭ್ಯ ಮಾತುಗಳಿಂದ ನಿಂದಿಸಿದ್ದರು.</p>.<p>ಇದನ್ನೂ ಓದಿ:<a href="https://www.prajavani.net/sports/cricket/mathes-of-sayyad-mushtaq-ali-t20-will-be-held-in-bangaluru-787968.html" itemprop="url">ಬೆಂಗಳೂರಿನಲ್ಲಿ ಸೈಯ್ಯದ್ ಮುಷ್ತಾಕ್ ಅಲಿ ಟಿ20 ಪಂದ್ಯಗಳು </a></p>.<p>ಆಸ್ಟ್ರೇಲಿಯಾ ವಿರುದ್ಧ ಏಕದಿನ ವಿಶ್ವಕಪ್ ಪಂದ್ಯದ ವೇಳೆ ಸ್ಮಿತ್ ವಿರುದ್ಧ ಅಭಿಮಾನಿಗಳು ಘೋಷಣೆ ಕೂಗಿದರು. ತಕ್ಷಣ ಎಚ್ಚೆತ್ತುಕೊಂಡ ವಿರಾಟ್ ಕೊಹ್ಲಿ, ಅಭಿಮಾನಿಗಳಲ್ಲಿ ಉತ್ತಮ ವರ್ತನೆ ತೋರುವಂತೆ ಮನವಿ ಮಾಡಿಕೊಂಡರು. ವಿರಾಟ್ ಕೊಹ್ಲಿ ಕ್ರೀಡಾಸ್ಫೂರ್ತಿಯು ವ್ಯಾಪಕ ಮನ್ನಣೆಗೆ ಪಾತ್ರವಾಗಿತ್ತು. ಈ ಬಗ್ಗೆ ಸ್ವತಃ ಸ್ಟೀವನ್ ಸ್ಮಿತ್ ಧನ್ಯವಾದವನ್ನು ಸಲ್ಲಿಸಿದರು.</p>.<p>ತಾಜಾ ಸಂವಾದದಲ್ಲಿ ಸ್ಮಿತ್ ಜೊತೆಗಿನ ಈ ಘಟನೆಯನ್ನು ನೆನಪಿಸಿಕೊಂಡಿರುವ ವಿರಾಟ್ ಕೊಹ್ಲಿ, ಆಟಗಾರರನ್ನು ವೈಯಕ್ತಿಕವಾಗಿ ಗುರಿಯಾಗಿಸುವುದು ಸರಿಯಲ್ಲ ಎಂದರು.</p>.<p>ಜನರು ತಪ್ಪುಗಳನ್ನು ಮಾಡುತ್ತಾರೆ ಮತ್ತು ಅದರಿಂದ ಕಲಿತುಕೊಳ್ಳುತ್ತಾರೆ. ಜೀವನದಲ್ಲಿ ಯಾವುದೂ ಶಾಶ್ವತವಲ್ಲ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>