<p><strong>ಕೋಲ್ಕತ್ತ:</strong> ತಂಡದ ಬ್ಯಾಟರ್ ಶ್ರೇಯಸ್ ಅಯ್ಯರ್ ಅವರು ಐಪಿಎಲ್ನಲ್ಲಿ ಆಡಲಿರುವ ಕೋಲ್ಕತ್ತ ನೈಟ್ ರೈಡರ್ಸ್ ತಂಡವನ್ನು ಸೇರಿಕೊಂಡಿದ್ದಾರೆ. ಭಾನುವಾರ ಅವರು ನೆಟ್ಸ್ನಲ್ಲಿ ಅಭ್ಯಾಸ ಕೂಡ ಮಾಡಿದರು.</p>.<p>ಈ ಆವೃತ್ತಿಯಲ್ಲಿ ಅವರು ಕೋಲ್ಕತ್ತ ತಂಡವನ್ನು ಮುನ್ನಡೆಸಲಿದ್ದಾರೆ. </p>.<p>ಈಚೆಗೆ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಮುಂಬೈ ತಂಡದಲ್ಲಿ ಅವರು ಆಡಿದ್ದರು. ಅದರಲ್ಲಿ ಕೊನೆಯ ಎರಡು ದಿನ ಅವರು ಬೆನ್ನುನೋವಿನಿಂದಾಗಿ ಫೀಲ್ಡಿಂಗ್ ಮಾಡಿರಲಿಲ್ಲ. ಆದ್ದರಿಂದ ಅವರು ಐಪಿಎಲ್ನಲ್ಲಿ ಆಡುವುದು ಅನುಮಾನವಿತ್ತು. </p>.<p>ಶನಿವಾರ ರಾತ್ರಿ ಶ್ರೇಯಸ್ ಅವರು ಕೋಲ್ಕತ್ತ ನಗರಕ್ಕೆ ಬಂದಿಳಿದ ಚಿತ್ರಗಳನ್ನು ನೈಟ್ ರೈಡರ್ಸ್ ತಂಡವು ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಹಾಕಿದೆ. </p>.<p>ಶ್ರೇಯಸ್ ಅವರು ಹೋದ ವರ್ಷದ ಏಪ್ರಿಲ್ನಲ್ಲಿ ಬೆನ್ನಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಪಡೆದಿದ್ದರು. ಅದರಿಂದಾಗಿ ಐಪಿಎಲ್ನಲ್ಲಿ ಆಡಿರಲಿಲ್ಲ. ಸೆಪ್ಟೆಂಬರ್ನಲ್ಲಿ ಕ್ರಿಕೆಟ್ಗೆ ಮರಳಿದ್ದರು. ಆದರೂ ಬೆನ್ನು ನೋವು ಮತ್ತೆ ಕಾಡಿತ್ತು. ನಂತರ ಚೇತರಿಸಿಕೊಂಡ ಅವರು ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಆಡಿದ್ದರು. </p>.<p>ಈಚೆಗೆ ಇಂಗ್ಲೆಂಡ್ ವಿರುದ್ಧದ ಸರಣಿಯ ಎರಡು ಟೆಸ್ಟ್ಗಳಲ್ಲಿ ಆಡಿದ್ದರು. ಮತ್ತೆ ಬೆನ್ನುನೋವಿನ ಸಮಸ್ಯೆಯಿಂದ ಹೊರಗುಳಿದಿದ್ದರು. ರಣಜಿ ಟ್ರೋಫಿ ಕ್ವಾರ್ಟರ್ಫೈನಲ್ನಲ್ಲಿ ಕೂಡ ಆಡಿರಲಿಲ್ಲ. </p>.<p>ಈ ಬಾರಿ ಕೆಕೆಆರ್ ತಂಡವು ಇದೇ 23ರಂದು ತನ್ನ ಮೊದಲ ಪಂದ್ಯ ಆಡಲಿದೆ. ಈಡನ್ ಗಾರ್ಡನ್ನಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ತಂಡದ ಬ್ಯಾಟರ್ ಶ್ರೇಯಸ್ ಅಯ್ಯರ್ ಅವರು ಐಪಿಎಲ್ನಲ್ಲಿ ಆಡಲಿರುವ ಕೋಲ್ಕತ್ತ ನೈಟ್ ರೈಡರ್ಸ್ ತಂಡವನ್ನು ಸೇರಿಕೊಂಡಿದ್ದಾರೆ. ಭಾನುವಾರ ಅವರು ನೆಟ್ಸ್ನಲ್ಲಿ ಅಭ್ಯಾಸ ಕೂಡ ಮಾಡಿದರು.</p>.<p>ಈ ಆವೃತ್ತಿಯಲ್ಲಿ ಅವರು ಕೋಲ್ಕತ್ತ ತಂಡವನ್ನು ಮುನ್ನಡೆಸಲಿದ್ದಾರೆ. </p>.<p>ಈಚೆಗೆ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಮುಂಬೈ ತಂಡದಲ್ಲಿ ಅವರು ಆಡಿದ್ದರು. ಅದರಲ್ಲಿ ಕೊನೆಯ ಎರಡು ದಿನ ಅವರು ಬೆನ್ನುನೋವಿನಿಂದಾಗಿ ಫೀಲ್ಡಿಂಗ್ ಮಾಡಿರಲಿಲ್ಲ. ಆದ್ದರಿಂದ ಅವರು ಐಪಿಎಲ್ನಲ್ಲಿ ಆಡುವುದು ಅನುಮಾನವಿತ್ತು. </p>.<p>ಶನಿವಾರ ರಾತ್ರಿ ಶ್ರೇಯಸ್ ಅವರು ಕೋಲ್ಕತ್ತ ನಗರಕ್ಕೆ ಬಂದಿಳಿದ ಚಿತ್ರಗಳನ್ನು ನೈಟ್ ರೈಡರ್ಸ್ ತಂಡವು ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಹಾಕಿದೆ. </p>.<p>ಶ್ರೇಯಸ್ ಅವರು ಹೋದ ವರ್ಷದ ಏಪ್ರಿಲ್ನಲ್ಲಿ ಬೆನ್ನಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಪಡೆದಿದ್ದರು. ಅದರಿಂದಾಗಿ ಐಪಿಎಲ್ನಲ್ಲಿ ಆಡಿರಲಿಲ್ಲ. ಸೆಪ್ಟೆಂಬರ್ನಲ್ಲಿ ಕ್ರಿಕೆಟ್ಗೆ ಮರಳಿದ್ದರು. ಆದರೂ ಬೆನ್ನು ನೋವು ಮತ್ತೆ ಕಾಡಿತ್ತು. ನಂತರ ಚೇತರಿಸಿಕೊಂಡ ಅವರು ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಆಡಿದ್ದರು. </p>.<p>ಈಚೆಗೆ ಇಂಗ್ಲೆಂಡ್ ವಿರುದ್ಧದ ಸರಣಿಯ ಎರಡು ಟೆಸ್ಟ್ಗಳಲ್ಲಿ ಆಡಿದ್ದರು. ಮತ್ತೆ ಬೆನ್ನುನೋವಿನ ಸಮಸ್ಯೆಯಿಂದ ಹೊರಗುಳಿದಿದ್ದರು. ರಣಜಿ ಟ್ರೋಫಿ ಕ್ವಾರ್ಟರ್ಫೈನಲ್ನಲ್ಲಿ ಕೂಡ ಆಡಿರಲಿಲ್ಲ. </p>.<p>ಈ ಬಾರಿ ಕೆಕೆಆರ್ ತಂಡವು ಇದೇ 23ರಂದು ತನ್ನ ಮೊದಲ ಪಂದ್ಯ ಆಡಲಿದೆ. ಈಡನ್ ಗಾರ್ಡನ್ನಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>