<p><strong>ನವದೆಹಲಿ:</strong> ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಇದೇ ವಾರ ಘೋಷಿಸಲಿದೆ. </p><p>ಏಕದಿನ ವಿಶ್ವಕಪ್ಗೂ ಮೊದಲು ನಡೆಯಲಿರುವ ಕೊನೆಯ ಸರಣಿ ಇದಾಗಿರಲಿದೆ. ಆದರೆ ಬೆನ್ನು ನೋವಿನ ಆತಂಕದಲ್ಲಿರುವ ಶ್ರೇಯಸ್ ಅಯ್ಯರ್ ಸರಣಿಗೆ ಲಭ್ಯರಾಗುವರೇ ಎಂಬುದನ್ನು ಕಾದು ನೋಡಬೇಕಿದೆ. </p><p>ಬೆನ್ನು ನೋವಿಗೆ ಶಸ್ತ್ರಚಿಕಿತ್ಸೆಗೊಳಗಾಗಿ ದೀರ್ಘಕಾಲದಿಂದ ತಂಡದಿಂದ ಹೊರಗುಳಿದಿದ್ದ ಅಯ್ಯರ್, ಸಂಪೂರ್ಣ ಫಿಟ್ ಆದ ಬಳಿಕ ಏಷ್ಯಾ ಕಪ್ಗಾಗಿ ತಂಡವನ್ನು ಸೇರಿಕೊಂಡಿದ್ದರು. </p><p>ಆದರೆ ಸೂಪರ್ 4 ಹಂತದಲ್ಲಿ ಮತ್ತೆ ಬೆನ್ನು ನೋವಿನ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಪಾಕಿಸ್ತಾನ ಹಾಗೂ ಶ್ರೀಲಂಕಾ ವಿರುದ್ಧದ ಪಂದ್ಯಗಳಲ್ಲಿ ಆಡಿರಲಿಲ್ಲ. ಈಗ ನಾಳೆ (ಶುಕ್ರವಾರ) ನಡೆಯಲಿರುವ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಆಡುವರೇ ಎಂಬುದು ತಿಳಿದು ಬಂದಿಲ್ಲ. </p><p>ಮುಂಬರುವ ಏಕದಿನ ವಿಶ್ವಕಪ್ಗೆ ಬಿಸಿಸಿಐ ಈಗಾಗಲೇ ತಂಡ ಪ್ರಕಟಿಸಿದ್ದು, ಶ್ರೇಯಸ್ ಅಯ್ಯರ್ ಸ್ಥಾನ ಪಡೆದಿದ್ದಾರೆ. </p><p>ಆಸ್ಟ್ರೇಲಿಯಾ ವಿರುದ್ಧ ಭಾರತ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾಗವಹಿಸಲಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಇದೇ ವಾರ ಘೋಷಿಸಲಿದೆ. </p><p>ಏಕದಿನ ವಿಶ್ವಕಪ್ಗೂ ಮೊದಲು ನಡೆಯಲಿರುವ ಕೊನೆಯ ಸರಣಿ ಇದಾಗಿರಲಿದೆ. ಆದರೆ ಬೆನ್ನು ನೋವಿನ ಆತಂಕದಲ್ಲಿರುವ ಶ್ರೇಯಸ್ ಅಯ್ಯರ್ ಸರಣಿಗೆ ಲಭ್ಯರಾಗುವರೇ ಎಂಬುದನ್ನು ಕಾದು ನೋಡಬೇಕಿದೆ. </p><p>ಬೆನ್ನು ನೋವಿಗೆ ಶಸ್ತ್ರಚಿಕಿತ್ಸೆಗೊಳಗಾಗಿ ದೀರ್ಘಕಾಲದಿಂದ ತಂಡದಿಂದ ಹೊರಗುಳಿದಿದ್ದ ಅಯ್ಯರ್, ಸಂಪೂರ್ಣ ಫಿಟ್ ಆದ ಬಳಿಕ ಏಷ್ಯಾ ಕಪ್ಗಾಗಿ ತಂಡವನ್ನು ಸೇರಿಕೊಂಡಿದ್ದರು. </p><p>ಆದರೆ ಸೂಪರ್ 4 ಹಂತದಲ್ಲಿ ಮತ್ತೆ ಬೆನ್ನು ನೋವಿನ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಪಾಕಿಸ್ತಾನ ಹಾಗೂ ಶ್ರೀಲಂಕಾ ವಿರುದ್ಧದ ಪಂದ್ಯಗಳಲ್ಲಿ ಆಡಿರಲಿಲ್ಲ. ಈಗ ನಾಳೆ (ಶುಕ್ರವಾರ) ನಡೆಯಲಿರುವ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಆಡುವರೇ ಎಂಬುದು ತಿಳಿದು ಬಂದಿಲ್ಲ. </p><p>ಮುಂಬರುವ ಏಕದಿನ ವಿಶ್ವಕಪ್ಗೆ ಬಿಸಿಸಿಐ ಈಗಾಗಲೇ ತಂಡ ಪ್ರಕಟಿಸಿದ್ದು, ಶ್ರೇಯಸ್ ಅಯ್ಯರ್ ಸ್ಥಾನ ಪಡೆದಿದ್ದಾರೆ. </p><p>ಆಸ್ಟ್ರೇಲಿಯಾ ವಿರುದ್ಧ ಭಾರತ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾಗವಹಿಸಲಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>