ಮಂಗಳೂರಿನ ಪದವಿನಂಗಡಿ ದೇವಿ ಕಟ್ಟೆಯಿಂದ ಸೋಮವಾರ ಬೆಳಿಗ್ಗೆ 9 ಗಂಟೆಗೆ ಗೋಪಾಲನಾಥ್ ಅವರ ಪಾರ್ಥಿವ ಶರೀರದ ಮೆರವಣಿಗೆ ಆರಂಭವಾಗಲಿದೆ. 10 ಗಂಟೆಗೆ ಮೆರವಣಿಗೆ ಪುರಭವನ ತಲುಪಲಿದೆ. ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು. ನಂತರ ಪಾರ್ಥಿವ ಶರೀರವನ್ನು ಸಜಿಪಕ್ಕೆ ಕೊಂಡೊಯ್ಯಲಾಗುವುದು ಎಂದು ಮಾಹಿತಿ ನೀಡಿದರು.