<p><strong>ಬೆಂಗಳೂರು</strong>: ಕಲಿಕೇಶ್ ನಾರಾಯಣಸಿಂಗ್ ದೇವ್ ಭಾರತ ರಾಷ್ಟ್ರೀಯ ರೈಫಲ್ ಸಂಸ್ಥೆ (ಎನ್ಆರ್ಎಐ) ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ.</p>.<p>ಹಿರಿಯ ಉಪಾಧ್ಯಕ್ಷರಾಗಿದ್ದ ದೇವ್ ಅವರು ನಿಕಟಪೂರ್ವ ಅಧ್ಯಕ್ಷ ರಣಿಂದರ್ ಸಿಂಗ್ ಅವರು ‘ದೀರ್ಘ ರಜೆ’ಗೆ ತೆರಳಿದ್ದರಿಂದ ಖಾಲಿಯಾಗಿರುವ ಸ್ಥಾನಕ್ಕೇರಿದ್ದಾರೆ.</p>.<p>ನೂತನ ರಾಷ್ಟ್ರೀಯ ಕ್ರೀಡಾ ನೀತಿಯ ಪ್ರಕಾರ ರಾಷ್ಟ್ರೀಯ ಕ್ರೀಡಾ ಫೆಡರೇಷನ್ಗಳ (ಎನ್ಎಸ್ಎಫ್) ಪದಾಧಿಕಾರಿಗಳು 12 ವರ್ಷಗಳಿಗಿಂತಲೂ ಹೆಚ್ಚು ಅಧಿಕಾರ ನಡೆಸುವಂತಿಲ್ಲ.</p>.<p>ರಣೀಂದರ್ ಅವರು 2021ರಲ್ಲಿ ಮರುಆಯ್ಕೆ ಆಗಿದ್ದರು. ಆದರೆ 2010 ರಿಂದ 2022ರವರೆಗೆ ಅವರು ಕಾರ್ಯನಿರ್ವಹಿಸಿದ್ದರಿಂದ ಈ ವರ್ಷ ಅವರು ಸ್ಥಾನ ಬಿಡಬೇಕಿತ್ತು. ಆದ್ದರಿಂದ ‘ಸುದೀರ್ಘ ರಜೆ’ ತೆಗೆದುಕೊಂಡಿದ್ದಾರೆ.</p>.<p>‘ಗುರುವಾರ ನಡೆದ ವರ್ಚುವಲ್ ಸಭೆಯಲ್ಲಿ ಸಿಂಗ್ ದೇವ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ’ ಎಂದು ಎನ್ಆರ್ಎಐ ಪ್ರಕಟಣೆಯಲ್ಲಿ ತಿಳಿಸಿದೆ.</p>.<p>‘ನಾನು ಹೊಣೆಯನ್ನು ಸ್ವೀಕರಿಸುತ್ತಿದ್ದೇನೆ. ಆಡಳಿತ ಸಮಿತಿಯು ನನ್ನ ಮೇಲೆ ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಂಡು ಕಾರ್ಯನಿರ್ವಹಿಸುವೆ. ಮುಂಬರುವ ಏಷ್ಯನ್ ಗೇಮ್ಸ್ ಹಾಗೂ ವಿಶ್ವ ಚಾಂಪಿಯನ್ಷಿಪ್ಗಳಿಗಾಗಿ ಸಿದ್ಧತೆಗಳನ್ನು ನಡೆಸಲು ಗಮನ ನೀಡುತ್ತೇನೆ’ ಎಂದು ಸಿಂಗ್ ದೇವ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕಲಿಕೇಶ್ ನಾರಾಯಣಸಿಂಗ್ ದೇವ್ ಭಾರತ ರಾಷ್ಟ್ರೀಯ ರೈಫಲ್ ಸಂಸ್ಥೆ (ಎನ್ಆರ್ಎಐ) ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ.</p>.<p>ಹಿರಿಯ ಉಪಾಧ್ಯಕ್ಷರಾಗಿದ್ದ ದೇವ್ ಅವರು ನಿಕಟಪೂರ್ವ ಅಧ್ಯಕ್ಷ ರಣಿಂದರ್ ಸಿಂಗ್ ಅವರು ‘ದೀರ್ಘ ರಜೆ’ಗೆ ತೆರಳಿದ್ದರಿಂದ ಖಾಲಿಯಾಗಿರುವ ಸ್ಥಾನಕ್ಕೇರಿದ್ದಾರೆ.</p>.<p>ನೂತನ ರಾಷ್ಟ್ರೀಯ ಕ್ರೀಡಾ ನೀತಿಯ ಪ್ರಕಾರ ರಾಷ್ಟ್ರೀಯ ಕ್ರೀಡಾ ಫೆಡರೇಷನ್ಗಳ (ಎನ್ಎಸ್ಎಫ್) ಪದಾಧಿಕಾರಿಗಳು 12 ವರ್ಷಗಳಿಗಿಂತಲೂ ಹೆಚ್ಚು ಅಧಿಕಾರ ನಡೆಸುವಂತಿಲ್ಲ.</p>.<p>ರಣೀಂದರ್ ಅವರು 2021ರಲ್ಲಿ ಮರುಆಯ್ಕೆ ಆಗಿದ್ದರು. ಆದರೆ 2010 ರಿಂದ 2022ರವರೆಗೆ ಅವರು ಕಾರ್ಯನಿರ್ವಹಿಸಿದ್ದರಿಂದ ಈ ವರ್ಷ ಅವರು ಸ್ಥಾನ ಬಿಡಬೇಕಿತ್ತು. ಆದ್ದರಿಂದ ‘ಸುದೀರ್ಘ ರಜೆ’ ತೆಗೆದುಕೊಂಡಿದ್ದಾರೆ.</p>.<p>‘ಗುರುವಾರ ನಡೆದ ವರ್ಚುವಲ್ ಸಭೆಯಲ್ಲಿ ಸಿಂಗ್ ದೇವ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ’ ಎಂದು ಎನ್ಆರ್ಎಐ ಪ್ರಕಟಣೆಯಲ್ಲಿ ತಿಳಿಸಿದೆ.</p>.<p>‘ನಾನು ಹೊಣೆಯನ್ನು ಸ್ವೀಕರಿಸುತ್ತಿದ್ದೇನೆ. ಆಡಳಿತ ಸಮಿತಿಯು ನನ್ನ ಮೇಲೆ ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಂಡು ಕಾರ್ಯನಿರ್ವಹಿಸುವೆ. ಮುಂಬರುವ ಏಷ್ಯನ್ ಗೇಮ್ಸ್ ಹಾಗೂ ವಿಶ್ವ ಚಾಂಪಿಯನ್ಷಿಪ್ಗಳಿಗಾಗಿ ಸಿದ್ಧತೆಗಳನ್ನು ನಡೆಸಲು ಗಮನ ನೀಡುತ್ತೇನೆ’ ಎಂದು ಸಿಂಗ್ ದೇವ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>