<p><strong>ನವದೆಹಲಿ</strong>: ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿ ಮತ್ತು ಸದ್ಯ ಆಸ್ಟ್ರೇಲಿಯಾ ಪ್ರವಾಸದಲ್ಲೂ ಕಳಪೆ ಬ್ಯಾಟಿಂಗ್ ಮೂಲಕ ಟೀಕೆಗೆ ಗುರಿಯಾಗಿರುವ ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಬೆಂಬಲಕ್ಕೆ ಮಾಜಿ ಕ್ರಿಕೆಟಿಗ ಕಪಿಲ್ ದೇವ್ ನಿಂತಿದ್ದಾರೆ.</p><p>ತಮ್ಮ ವೃತ್ತಿಜೀವನದ ಈ ಹಂತದಲ್ಲಿ ರೋಹಿತ್ ಶರ್ಮಾ ಏನನ್ನೂ ಸಾಬೀತುಮಾಡುವ ಅಗತ್ಯವಿಲ್ಲ ಎಂದಿದ್ಧಾರೆ. ಕಮ್ಬ್ಯಾಕ್ ಆಗುವ ರೋಹಿತ್ ಶರ್ಮಾ ಅವರ ಸಾಮರ್ಥ್ಯದ ಬಗ್ಗೆ ಅನುಮಾನಪಡುವುದು ಬೇಡ ಎಂದು ಅವರು ಹೇಳಿದ್ದಾರೆ.</p><p>ಅಡಿಲೇಡ್ ಟೆಸ್ಟ್ನಲ್ಲಿ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ದ ರೋಹಿತ್, ಎರಡೂ ಇನಿಂಗ್ಸ್ಗಳಲ್ಲಿ ಕ್ರಮವಾಗಿ 3 ಮತ್ತು 6 ರನ್ ಗಳಿಸಿದ್ದರು. ಎರಡೂವರೆ ದಿನಗಳಲ್ಲಿ ಮುಗಿದ ಈ ಪಂದ್ಯದಲ್ಲಿ ಭಾರತ 10 ವಿಕೆಟ್ಗಳ ಹೀನಾಯ ಸೋಲು ಕಂಡಿತ್ತು. ಹೀಗಾಗಿ, ರೋಹಿತ್ ಶರ್ಮಾ ಅವರ ಕಳಪೆ ಪ್ರದರ್ಶನ ಭಾರಿ ಟೀಕೆಗೆ ಗುರಿಯಾಗಿತ್ತು.</p><p>‘ರೋಹಿತ್ ಏನನ್ನೂ ಸಾಬೀತುಮಾಡುವ ಅಗತ್ಯವಿಲ್ಲ. ಹಲವು ವರ್ಷಗಳಿಂದ ಅವರು ತಂಡಕ್ಕಾಗಿ ಆಡಿದ್ದಾರೆ. ಕಮ್ಬ್ಯಾಕ್ ಆಗುವ ಅವರ ಸಾಮರ್ಥ್ಯದ ಬಗ್ಗೆ ಅನುಮಾನಪಡುವುದು ಬೇಡ. ಅವರು ಫಾರ್ಮ್ಗೆ ಮರಳಲಿದ್ದಾರೆ ಎಂಬ ನಂಬಿಕೆ ಇದೆ. ಅದುವೇ ಮುಖ್ಯ’ಎಂದಿದ್ದಾರೆ.</p><p>2ನೇ ಮಗುವಿನ ತಂದೆಯಾಗಿರುವ ರೋಹಿತ್ ಶರ್ಮಾ, ಪಿತೃತ್ವ ರಜೆಯಲ್ಲಿದ್ದ ಕಾರಣ ಪರ್ತ್ ಡೆಸ್ಟ್ನಲ್ಲಿ ಆಡಿರಲಿಲ್ಲ. ವೇಗಿ ಜಸ್ಪ್ರೀತ್ ಬೂಮ್ರಾ ತಂಡ ಮುನ್ನಡೆಸಿದ್ದರು.</p><p> ಓಪನರ್ ಆಗಿ ಆಡುತ್ತಿದ್ದ ರೋಹಿತ್, ಪರ್ತ್ ಟೆಸ್ಟ್ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಕೆ.ಎಲ್. ರಾಹುಲ್ ಅವರಿಗೆ ಅಡಿಲೇಡ್ ಟೆಸ್ಟ್ನಲ್ಲಿ ಓಪನರ್ ಸ್ಥಾನ ಬಿಟ್ಟುಕೊಟ್ಟು 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು.</p><p>‘6 ತಿಂಗಳ ಹಿಂದೆ ಟಿ–20 ವಿಶ್ವಕಪ್ ಗೆದ್ದದ್ದನ್ನು ನೋಡಿರುವವರು ಒಂದೆರಡು ಪ್ರದರ್ಶನಗಳಿಂದ ನಾಯಕತ್ವದ ಬಗ್ಗೆ ಅನುಮಾನ ವ್ಯಕ್ತಪಡಿಸಲಾರರು. ಅವರು ಕಮ್ಬ್ಯಾಕ್ ಮಾಡುತ್ತಾರೆ. ಅವರ ಆಟದ ಬಗ್ಗೆ ನಂಬಿಕೆ ಇಡೋಣ’ಎಂದಿದ್ದಾರೆ.</p><p>ಹರ್ಷಿತ್ ರಾಣಾ ಸೇರ್ಪಡೆ ತಪ್ಪಾಯಿತೇ ಎಂಬ ಪ್ರಶ್ನೆಗೆ ಉತ್ತರಿಸಿದ ಕಪಿಲ್, ಅದನ್ನು ನಾನು ಹೇಗೆ ಹೇಳಲಿ? ಅದನ್ನು ನಿರ್ಧರಿಸುವ ಜವಾಬ್ದಾರಿ ಹೊತ್ತವರು ಬೇರೆಯವರಿದ್ದಾರೆ ಎಂದಿದ್ದಾರೆ.</p><p>ಪರ್ತ್ ಟೆಸ್ಟ್ನಲ್ಲಿ ಬೂಮ್ರಾ ನಾಯಕತ್ವದಲ್ಲಿ ಪಂದ್ಯ ಗೆದ್ದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಒಂದು ಪ್ರದರ್ಶನದಿಂದ ಒಬ್ಬರು ಉತ್ತಮ. ಮತ್ತೊಬ್ಬರು ಕಳಪೆ ಎಂದು ನಿರ್ಧರಿಸಲು ಸಾಧ್ಯವಿಲ್ಲ ಎಂದಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿ ಮತ್ತು ಸದ್ಯ ಆಸ್ಟ್ರೇಲಿಯಾ ಪ್ರವಾಸದಲ್ಲೂ ಕಳಪೆ ಬ್ಯಾಟಿಂಗ್ ಮೂಲಕ ಟೀಕೆಗೆ ಗುರಿಯಾಗಿರುವ ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಬೆಂಬಲಕ್ಕೆ ಮಾಜಿ ಕ್ರಿಕೆಟಿಗ ಕಪಿಲ್ ದೇವ್ ನಿಂತಿದ್ದಾರೆ.</p><p>ತಮ್ಮ ವೃತ್ತಿಜೀವನದ ಈ ಹಂತದಲ್ಲಿ ರೋಹಿತ್ ಶರ್ಮಾ ಏನನ್ನೂ ಸಾಬೀತುಮಾಡುವ ಅಗತ್ಯವಿಲ್ಲ ಎಂದಿದ್ಧಾರೆ. ಕಮ್ಬ್ಯಾಕ್ ಆಗುವ ರೋಹಿತ್ ಶರ್ಮಾ ಅವರ ಸಾಮರ್ಥ್ಯದ ಬಗ್ಗೆ ಅನುಮಾನಪಡುವುದು ಬೇಡ ಎಂದು ಅವರು ಹೇಳಿದ್ದಾರೆ.</p><p>ಅಡಿಲೇಡ್ ಟೆಸ್ಟ್ನಲ್ಲಿ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ದ ರೋಹಿತ್, ಎರಡೂ ಇನಿಂಗ್ಸ್ಗಳಲ್ಲಿ ಕ್ರಮವಾಗಿ 3 ಮತ್ತು 6 ರನ್ ಗಳಿಸಿದ್ದರು. ಎರಡೂವರೆ ದಿನಗಳಲ್ಲಿ ಮುಗಿದ ಈ ಪಂದ್ಯದಲ್ಲಿ ಭಾರತ 10 ವಿಕೆಟ್ಗಳ ಹೀನಾಯ ಸೋಲು ಕಂಡಿತ್ತು. ಹೀಗಾಗಿ, ರೋಹಿತ್ ಶರ್ಮಾ ಅವರ ಕಳಪೆ ಪ್ರದರ್ಶನ ಭಾರಿ ಟೀಕೆಗೆ ಗುರಿಯಾಗಿತ್ತು.</p><p>‘ರೋಹಿತ್ ಏನನ್ನೂ ಸಾಬೀತುಮಾಡುವ ಅಗತ್ಯವಿಲ್ಲ. ಹಲವು ವರ್ಷಗಳಿಂದ ಅವರು ತಂಡಕ್ಕಾಗಿ ಆಡಿದ್ದಾರೆ. ಕಮ್ಬ್ಯಾಕ್ ಆಗುವ ಅವರ ಸಾಮರ್ಥ್ಯದ ಬಗ್ಗೆ ಅನುಮಾನಪಡುವುದು ಬೇಡ. ಅವರು ಫಾರ್ಮ್ಗೆ ಮರಳಲಿದ್ದಾರೆ ಎಂಬ ನಂಬಿಕೆ ಇದೆ. ಅದುವೇ ಮುಖ್ಯ’ಎಂದಿದ್ದಾರೆ.</p><p>2ನೇ ಮಗುವಿನ ತಂದೆಯಾಗಿರುವ ರೋಹಿತ್ ಶರ್ಮಾ, ಪಿತೃತ್ವ ರಜೆಯಲ್ಲಿದ್ದ ಕಾರಣ ಪರ್ತ್ ಡೆಸ್ಟ್ನಲ್ಲಿ ಆಡಿರಲಿಲ್ಲ. ವೇಗಿ ಜಸ್ಪ್ರೀತ್ ಬೂಮ್ರಾ ತಂಡ ಮುನ್ನಡೆಸಿದ್ದರು.</p><p> ಓಪನರ್ ಆಗಿ ಆಡುತ್ತಿದ್ದ ರೋಹಿತ್, ಪರ್ತ್ ಟೆಸ್ಟ್ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಕೆ.ಎಲ್. ರಾಹುಲ್ ಅವರಿಗೆ ಅಡಿಲೇಡ್ ಟೆಸ್ಟ್ನಲ್ಲಿ ಓಪನರ್ ಸ್ಥಾನ ಬಿಟ್ಟುಕೊಟ್ಟು 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು.</p><p>‘6 ತಿಂಗಳ ಹಿಂದೆ ಟಿ–20 ವಿಶ್ವಕಪ್ ಗೆದ್ದದ್ದನ್ನು ನೋಡಿರುವವರು ಒಂದೆರಡು ಪ್ರದರ್ಶನಗಳಿಂದ ನಾಯಕತ್ವದ ಬಗ್ಗೆ ಅನುಮಾನ ವ್ಯಕ್ತಪಡಿಸಲಾರರು. ಅವರು ಕಮ್ಬ್ಯಾಕ್ ಮಾಡುತ್ತಾರೆ. ಅವರ ಆಟದ ಬಗ್ಗೆ ನಂಬಿಕೆ ಇಡೋಣ’ಎಂದಿದ್ದಾರೆ.</p><p>ಹರ್ಷಿತ್ ರಾಣಾ ಸೇರ್ಪಡೆ ತಪ್ಪಾಯಿತೇ ಎಂಬ ಪ್ರಶ್ನೆಗೆ ಉತ್ತರಿಸಿದ ಕಪಿಲ್, ಅದನ್ನು ನಾನು ಹೇಗೆ ಹೇಳಲಿ? ಅದನ್ನು ನಿರ್ಧರಿಸುವ ಜವಾಬ್ದಾರಿ ಹೊತ್ತವರು ಬೇರೆಯವರಿದ್ದಾರೆ ಎಂದಿದ್ದಾರೆ.</p><p>ಪರ್ತ್ ಟೆಸ್ಟ್ನಲ್ಲಿ ಬೂಮ್ರಾ ನಾಯಕತ್ವದಲ್ಲಿ ಪಂದ್ಯ ಗೆದ್ದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಒಂದು ಪ್ರದರ್ಶನದಿಂದ ಒಬ್ಬರು ಉತ್ತಮ. ಮತ್ತೊಬ್ಬರು ಕಳಪೆ ಎಂದು ನಿರ್ಧರಿಸಲು ಸಾಧ್ಯವಿಲ್ಲ ಎಂದಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>