ನಿಯಮ ಉಲ್ಲಂಘನೆ ಆರೋಪ: ಬಿಸಿಸಿಐನ ಕ್ರಿಕೆಟ್ ಆಯ್ಕೆ ಸಮಿತಿಗೆ ಕಪಿಲ್ ರಾಜೀನಾಮೆ

ನವದೆಹಲಿ: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಕ್ರಿಕೆಟ್ ಆಯ್ಕೆ ಸಮಿತಿಗೆ ಕಪಿಲ್ ದೇವ್ ರಾಜೀನಾಮೆ ನೀಡಿದ್ದಾರೆ.
ಕಪಿಲ್ ದೇವ್ ನೇತೃತ್ವದ ಕ್ರಿಕೆಟ್ ಆಯ್ಕೆ ಸಮಿತಿ ಭಾರತ ತಂಡದ ಕೋಚ್ ಆಯ್ಕೆ ಮಾಡಿತ್ತು. ಈ ಆಯ್ಕೆ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಿ ಆಯ್ಕೆ ಸಮಿತಿಯಲ್ಲಿದ್ದ ಕಪಿಲ್ ದೇವ್, ಅನ್ಷುಮನ್ ಗಾಯಕವಾಡ್ ಮತ್ತು ಶಾಂತಾ ರಂಗಸ್ವಾಮಿ ವಿರುದ್ಧ ಬಿಸಿಸಿಐಗೆ ದೂರ ನೀಡಲಾಗಿತ್ತು.
ಈ ದೂರಿನ ಅನ್ವಯ ಬಿಸಿಸಿಐನ ನೀತಿ ಅಧಿಕಾರಿ ಡಿ.ಕೆ. ಜೈನ್ ಅವರು ಕಪಿಲ್ ದೇವ್ ಸೇರಿದಂತೆ ಮೂವರಿಗೆ ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ಕಪಿಲ್ ದೇವ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.
ಮಧ್ಯಪ್ರದೇಶ ಕ್ರಿಕೆಟ್ ಸಂಸ್ಥೆಯ ಆಜೀವ ಸದಸ್ಯ ಸಂಜೀವ್ ಗುಪ್ತಾ ಅವರು ದೂರು ನೀಡಿದ್ದರು.
‘ಕಪಿಲ್ ದೇವ್ ಅವರು ಕ್ರಿಕೆಟ್ ವೀಕ್ಷಕ ವಿವರಣೆಗಾರರಾಗಿದ್ದಾರೆ. ಫ್ಲಡ್ಲೈಟ್ ಕಂಪನಿಯ ಮಾಲೀಕ ಮತ್ತು ಭಾರತೀಯ ಕ್ರಿಕೆಟಿಗರ ಸಂಸ್ಥೆಯ ಸದಸ್ಯರಾಗಿದ್ದಾರೆ. ಅನ್ಷುಮನ್ ಅವರು ಸ್ವಂತ ತರಬೇತಿ ಅಕಾಡೆಮಿ ಹೊಂದಿದ್ದಾರೆ. ಬಿಸಿಸಿಐ ಮಾನ್ಯತಾ ಸಮಿತಿಯ ಸದಸ್ಯರಾಗಿದ್ದಾರೆ. ಭಾರತ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಶಾಂತಾ ಅವರು ಐಸಿಎನಲ್ಲಿದ್ದಾರೆ’ ಎಂದು ಗುಪ್ತಾ ದೂರಿದ್ದಾರೆ.
ಈಚೆಗೆ ಭಾರತ ತಂಡಕ್ಕೆ ರವಿಶಾಸ್ತ್ರಿ ಅವರನ್ನು ಮುಖ್ಯ ಕೋಚ್ ಆಗಿ ಕಪಿಲ್ ದೇವ್ ನೇತೃತ್ವದ ಸಮಿತಿಯು ಆಯ್ಕೆ ಮಾಡಿತ್ತು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.