ಮುಂಬೈ:ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ ಹಾಗೂ ಕೆ.ಎಲ್. ರಾಹುಲ್ ಅವರು ಮಹಿಳೆಯರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ‘ಕಾಫಿ ವಿತ್ ಕರಣ್’ ಕಾರ್ಯಕ್ರಮದ ನಿರ್ಮಾಪಕ, ನಿರೂಪಕ ಕರಣ್ ಜೋಹರ್ ಕ್ಷಮೆ ಕೋರಿದ್ದಾರೆ.
‘ಆ ದಿನದ ಚರ್ಚೆಯನ್ನು ನಾನು ಸಮರ್ಥಿಸಿಕೊಳ್ಳುವುದಿಲ್ಲ. ಎಲ್ಲೆ ಮೀರಿದ ಹೇಳಿಕೆಗಳು ಎಂದು ಟೀಕೆಗಳು ಕೇಳಿಬಂದಿವೆ’ ಎಂದು ಕರಣ್ ಇ.ಟಿ.ನೌ ಸಂದರ್ಶನದಲ್ಲಿ ಹೇಳಿದ್ದಾರೆ.
‘ಆ ಘಟನೆ ನನ್ನ ಕಾರ್ಯಕ್ರಮದಲ್ಲಿ ಆಗಿರುವುದರಿಂದ ಕ್ಷಮೆ ಕೋರುತ್ತೇನೆ’ ಎಂದು ಅವರು ನುಡಿದಿದ್ದಾರೆ.