ಬೆಂಗಳೂರು: ಕರ್ನಾಟಕ ಕ್ರಿಕೆಟ್ ತಂಡದ ಆರ್. ಸಮರ್ಥ್ ಮತ್ತು ಬ್ಯಾಡ್ಮಿಂಟನ್ ಆಟಗಾರ್ತಿ ಉತ್ತರಾಪ್ರಕಾಶ್ ಅವರು ಶುಕ್ರವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಕರ್ನಾಟಕ ತಂಡದ ಆರಂಭಿಕ ಬ್ಯಾಟ್ಸ್ಮನ್ ಹೋದ ಋತುವಿನಲ್ಲಿ ಸೀಮಿತ ಓವರ್ಗಳ ಟೂರ್ನಿಯಲ್ಲಿ ನಾಯಕತ್ವ ವಹಿಸಿದ್ದರು. ಉತ್ತರಾ ಪ್ರಕಾಶ್ ಅವರು ಸದ್ಯ ಐಟಿಡಬ್ಲ್ಯು ಉದ್ಯೋಗಿಯಾಗಿದ್ದಾರೆ. ವಿವಾಹ ಸಮಾರಂಭದಲ್ಲಿ ಉಭಯ ಕುಟುಂಬಗಳ ಸದಸ್ಯರು ಹಾಜರಿದ್ದರು.