<p><strong>ಬೆಂಗಳೂರು</strong>: ತಿಂಗಳುಗಳ ಕಾಲ ಅನಿಶ್ಚಿತ ಪರಿಸ್ಥಿತಿಯ ನಂತರ ರಾಜ್ಯದ ಗೃಹ ಇಲಾಖೆಯು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಂತರರಾಷ್ಟ್ರೀಯ ಮತ್ತು ಐಪಿಎಲ್ ಪಂದ್ಯಗಳನ್ನು ನಡೆಸುವುದಕ್ಕೆ ಶನಿವಾರ ಷರತ್ತಿನೊಂದಿಗೆ ಅನುಮತಿ ನೀಡಿದೆ. </p><p>‘ಕ್ರಿಕೆಟ್ ಹೆಗ್ಗುರುತಾದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಂತರರಾಷ್ಟ್ರೀಯ ಮತ್ತು ಐಪಿಎಲ್ ಪಂದ್ಯಗಳನ್ನು ನಡೆಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ ಗೃಹ ಇಲಾಖೆ ಅನುಮತಿ ನೀಡಿದೆ ಎಂದು ತಿಳಿಸಲು ಸಂತಸವಾಗುತ್ತಿದೆ’ ಎಂದು ಕೆಎಸ್ಸಿಎ ವಕ್ತಾರ ವಿನಯ್ ಮೃತ್ಯುಂಜಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p><p>‘ಸರ್ಕಾರ ಮತ್ತು ಸಂಬಂಧಿಸಿದ ಅಧಿಕಾರಿಗಳು ನಿಗದಿಪಡಿಸಿರುವ ನಿಯಮ ಮತ್ತು ಷರತ್ತುಗಳಿಗೆ ಒಳಪಟ್ಟು ಅನುಮತಿ ನೀಡಲಾಗಿದೆ. ಈ ಎಲ್ಲ ಷರತ್ತುಗಳನ್ನು ಈಡೇರಿಸುವ ವಿಶ್ವಾಸವನ್ನು ಕೆಎಸ್ಸಿಎ ಹೊಂದಿದೆ’ ಎಂದು ಅವರು ಹೇಳಿದ್ದಾರೆ.</p><p>2025ರ ಜೂನ್ 3ರಂದು ಐಪಿಎಲ್ ಟ್ರೋಫಿ ಗೆದ್ದ ಆರ್ಸಿಬಿಯು, ಮರುದಿನ ಹಮ್ಮಿಕೊಂಡ ಸಂಭ್ರಮಾಚರಣೆಯ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗಡೆ ಕಾಲ್ತುಳಿತ ಸಂಭವಿಸಿ 11 ಮಂದಿ ಅಭಿಮಾನಿಗಳು ಮೃತಪಟ್ಟಿದ್ದರು. ನಂತರ ಇಲ್ಲಿ ಯಾವುದೇ ಪ್ರಮುಖ ಪಂದ್ಯ ನಡೆಸಲು ಅನುಮತಿ ಸಿಕ್ಕಿರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ತಿಂಗಳುಗಳ ಕಾಲ ಅನಿಶ್ಚಿತ ಪರಿಸ್ಥಿತಿಯ ನಂತರ ರಾಜ್ಯದ ಗೃಹ ಇಲಾಖೆಯು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಂತರರಾಷ್ಟ್ರೀಯ ಮತ್ತು ಐಪಿಎಲ್ ಪಂದ್ಯಗಳನ್ನು ನಡೆಸುವುದಕ್ಕೆ ಶನಿವಾರ ಷರತ್ತಿನೊಂದಿಗೆ ಅನುಮತಿ ನೀಡಿದೆ. </p><p>‘ಕ್ರಿಕೆಟ್ ಹೆಗ್ಗುರುತಾದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಂತರರಾಷ್ಟ್ರೀಯ ಮತ್ತು ಐಪಿಎಲ್ ಪಂದ್ಯಗಳನ್ನು ನಡೆಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ ಗೃಹ ಇಲಾಖೆ ಅನುಮತಿ ನೀಡಿದೆ ಎಂದು ತಿಳಿಸಲು ಸಂತಸವಾಗುತ್ತಿದೆ’ ಎಂದು ಕೆಎಸ್ಸಿಎ ವಕ್ತಾರ ವಿನಯ್ ಮೃತ್ಯುಂಜಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p><p>‘ಸರ್ಕಾರ ಮತ್ತು ಸಂಬಂಧಿಸಿದ ಅಧಿಕಾರಿಗಳು ನಿಗದಿಪಡಿಸಿರುವ ನಿಯಮ ಮತ್ತು ಷರತ್ತುಗಳಿಗೆ ಒಳಪಟ್ಟು ಅನುಮತಿ ನೀಡಲಾಗಿದೆ. ಈ ಎಲ್ಲ ಷರತ್ತುಗಳನ್ನು ಈಡೇರಿಸುವ ವಿಶ್ವಾಸವನ್ನು ಕೆಎಸ್ಸಿಎ ಹೊಂದಿದೆ’ ಎಂದು ಅವರು ಹೇಳಿದ್ದಾರೆ.</p><p>2025ರ ಜೂನ್ 3ರಂದು ಐಪಿಎಲ್ ಟ್ರೋಫಿ ಗೆದ್ದ ಆರ್ಸಿಬಿಯು, ಮರುದಿನ ಹಮ್ಮಿಕೊಂಡ ಸಂಭ್ರಮಾಚರಣೆಯ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗಡೆ ಕಾಲ್ತುಳಿತ ಸಂಭವಿಸಿ 11 ಮಂದಿ ಅಭಿಮಾನಿಗಳು ಮೃತಪಟ್ಟಿದ್ದರು. ನಂತರ ಇಲ್ಲಿ ಯಾವುದೇ ಪ್ರಮುಖ ಪಂದ್ಯ ನಡೆಸಲು ಅನುಮತಿ ಸಿಕ್ಕಿರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>