<p><strong>ಬೆಂಗಳೂರು</strong>: ಕ್ರಿಕೆಟ್ ಚಟುವಟಿಕೆಗಳನ್ನು ಆರಂಭಿಸಲು ಯಾವುದೇ ತರಾತುರಿಯ ನಿರ್ಧಾರ ಕೈಗೊಳ್ಳುವುದಿಲ್ಲ. ಮೇ 31ರ ಕಾದು ನೋಡಲು ತೀರ್ಮಾನಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು ತಿಳಿಸಿದೆ.</p>.<p>ಬುಧವಾರ ಈ ಕುರಿತು ಪ್ರಕಟಣೆ ನೀಡಿರುವ ಕೆಎಸ್ಸಿಎ ವಕ್ತಾರ ವಿನಯ್ ಮೃತ್ಯುಂಜಯ, ‘ಸಂಸ್ಥೆಯ ಪದಾಧಿಕಾರಿಗಳ ಸಭೆ ನಡೆಯಿತು. ಈ ಸಂದರ್ಭದಲ್ಲಿ ಕೆಲವು ನಿರ್ಣಯಗಳನ್ನು ಕೈಗೊಳ್ಳಲಾಯಿತು. ಕ್ರಿಕೆಟಿಗರು, ಕೋಚ್ಗಳು, ನೆರವು ಸಿಬ್ಬಂದಿ ಮತ್ತು ಸಂಸ್ಥೆಗೆ ಸಂಬಂಧಿಸಿದ ಎಲ್ಲರ ಆರೋಗ್ಯ ರಕ್ಷಣೆಗೆ ಮೊದಲ ಆದ್ಯತೆ ನೀಡುತ್ತೇವೆ. ಪೂರ್ಣಪ್ರಮಾಣದಲ್ಲಿ ಕ್ರಿಕೆಟ್ ಚಟುವಟಿಕೆಗಳನ್ನು ಆರಂಭಿಸಲು ಪರಿಷ್ಕೃತ ವೇಳಾಪಟ್ಟಿಯನ್ನು ಸಿದ್ಧಗೊಳಿಸುತ್ತೇವೆ. ಉತ್ತಮವಾದ ಯೋಜನೆಯೊಂದಿಗೆ ಕಾರ್ಯಾರಂಭ ಮಾಡಲಾಗುವುದು’ ಎಂದಿದ್ಧಾರೆ.</p>.<p>‘ಇದೇ 31ರವರೆಗೆ ಆಟಗಾರರು, ಕೋಚ್ ಮತ್ತು ಸಿಬ್ಬಂದಿಗಳು ಈ ಕುರಿತು ಚರ್ಚಿಸುವಂತಿಲ್ಲ. ಆನ್ಲೈನ್ ಮೂಲಕ ಕ್ರಿಕೆಟ್ ಕೌಶಲ್ಯಗಳ ಕುರಿತು ಮಾರ್ಗದರ್ಶನ ನೀಡುವಂತೆ ವ್ಯವಸ್ಥಾಪಕರು, ಕೋಚ್ಗಳಿಗೆ ಮನವಿ ಮಾಡಿದ್ದೇವೆ. ತಂತ್ರಜ್ಞಾನವನ್ನು ಬಳಸಿಕೊಂಡು ಈ ಕಾರ್ಯ ಮಾಡುವಂತೆ ಹೇಳಲಾಗಿದೆ’ ಎಂದು ತಿಳಿಸಿದ್ದಾರೆ.</p>.<p>‘ಕೇಂದ್ರ ಹಾಗೂ ರಾಜ್ಯ ಸರ್ಕಾರ, ಐಸಿಸಿ, ಬಿಸಿಸಿಐ ಮತ್ತು ಸ್ಥಳೀಯ ಆಡಳಿತ ಸಂಸ್ಥೆಗಳ ಮಾರ್ಗದರ್ಶಿ ಸೂತ್ರಗಳನ್ನು ಪಾಲಿಸಲು ಬದ್ಧರಾಗಿದ್ದೇವೆ. ನಿಯಮಗಳ ಚೌಕಟ್ಟಿನಲ್ಲಿಯೇ ಕ್ರಿಕೆಟ್ ಚಟುವಟಿಕೆಗಳ ರೂಪುರೇಷೆ ಸಿದ್ಧಪಡಿಸಲಾಗುವುದು. ಅಲ್ಲದೇ 31ರವರೆಗೆ ನಮ್ಮ ಕ್ರೀಡಾ ಕೇಂದ್ರವನ್ನು ಬಂದ್ ಮಾಡಲಾಗಿದೆ’ ಎಂದು ವಿನಯ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕ್ರಿಕೆಟ್ ಚಟುವಟಿಕೆಗಳನ್ನು ಆರಂಭಿಸಲು ಯಾವುದೇ ತರಾತುರಿಯ ನಿರ್ಧಾರ ಕೈಗೊಳ್ಳುವುದಿಲ್ಲ. ಮೇ 31ರ ಕಾದು ನೋಡಲು ತೀರ್ಮಾನಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು ತಿಳಿಸಿದೆ.</p>.<p>ಬುಧವಾರ ಈ ಕುರಿತು ಪ್ರಕಟಣೆ ನೀಡಿರುವ ಕೆಎಸ್ಸಿಎ ವಕ್ತಾರ ವಿನಯ್ ಮೃತ್ಯುಂಜಯ, ‘ಸಂಸ್ಥೆಯ ಪದಾಧಿಕಾರಿಗಳ ಸಭೆ ನಡೆಯಿತು. ಈ ಸಂದರ್ಭದಲ್ಲಿ ಕೆಲವು ನಿರ್ಣಯಗಳನ್ನು ಕೈಗೊಳ್ಳಲಾಯಿತು. ಕ್ರಿಕೆಟಿಗರು, ಕೋಚ್ಗಳು, ನೆರವು ಸಿಬ್ಬಂದಿ ಮತ್ತು ಸಂಸ್ಥೆಗೆ ಸಂಬಂಧಿಸಿದ ಎಲ್ಲರ ಆರೋಗ್ಯ ರಕ್ಷಣೆಗೆ ಮೊದಲ ಆದ್ಯತೆ ನೀಡುತ್ತೇವೆ. ಪೂರ್ಣಪ್ರಮಾಣದಲ್ಲಿ ಕ್ರಿಕೆಟ್ ಚಟುವಟಿಕೆಗಳನ್ನು ಆರಂಭಿಸಲು ಪರಿಷ್ಕೃತ ವೇಳಾಪಟ್ಟಿಯನ್ನು ಸಿದ್ಧಗೊಳಿಸುತ್ತೇವೆ. ಉತ್ತಮವಾದ ಯೋಜನೆಯೊಂದಿಗೆ ಕಾರ್ಯಾರಂಭ ಮಾಡಲಾಗುವುದು’ ಎಂದಿದ್ಧಾರೆ.</p>.<p>‘ಇದೇ 31ರವರೆಗೆ ಆಟಗಾರರು, ಕೋಚ್ ಮತ್ತು ಸಿಬ್ಬಂದಿಗಳು ಈ ಕುರಿತು ಚರ್ಚಿಸುವಂತಿಲ್ಲ. ಆನ್ಲೈನ್ ಮೂಲಕ ಕ್ರಿಕೆಟ್ ಕೌಶಲ್ಯಗಳ ಕುರಿತು ಮಾರ್ಗದರ್ಶನ ನೀಡುವಂತೆ ವ್ಯವಸ್ಥಾಪಕರು, ಕೋಚ್ಗಳಿಗೆ ಮನವಿ ಮಾಡಿದ್ದೇವೆ. ತಂತ್ರಜ್ಞಾನವನ್ನು ಬಳಸಿಕೊಂಡು ಈ ಕಾರ್ಯ ಮಾಡುವಂತೆ ಹೇಳಲಾಗಿದೆ’ ಎಂದು ತಿಳಿಸಿದ್ದಾರೆ.</p>.<p>‘ಕೇಂದ್ರ ಹಾಗೂ ರಾಜ್ಯ ಸರ್ಕಾರ, ಐಸಿಸಿ, ಬಿಸಿಸಿಐ ಮತ್ತು ಸ್ಥಳೀಯ ಆಡಳಿತ ಸಂಸ್ಥೆಗಳ ಮಾರ್ಗದರ್ಶಿ ಸೂತ್ರಗಳನ್ನು ಪಾಲಿಸಲು ಬದ್ಧರಾಗಿದ್ದೇವೆ. ನಿಯಮಗಳ ಚೌಕಟ್ಟಿನಲ್ಲಿಯೇ ಕ್ರಿಕೆಟ್ ಚಟುವಟಿಕೆಗಳ ರೂಪುರೇಷೆ ಸಿದ್ಧಪಡಿಸಲಾಗುವುದು. ಅಲ್ಲದೇ 31ರವರೆಗೆ ನಮ್ಮ ಕ್ರೀಡಾ ಕೇಂದ್ರವನ್ನು ಬಂದ್ ಮಾಡಲಾಗಿದೆ’ ಎಂದು ವಿನಯ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>