ಬುಧವಾರ ಈ ಕುರಿತು ಪ್ರಕಟಣೆ ನೀಡಿರುವ ಕೆಎಸ್ಸಿಎ ವಕ್ತಾರ ವಿನಯ್ ಮೃತ್ಯುಂಜಯ, ‘ಸಂಸ್ಥೆಯ ಪದಾಧಿಕಾರಿಗಳ ಸಭೆ ನಡೆಯಿತು. ಈ ಸಂದರ್ಭದಲ್ಲಿ ಕೆಲವು ನಿರ್ಣಯಗಳನ್ನು ಕೈಗೊಳ್ಳಲಾಯಿತು. ಕ್ರಿಕೆಟಿಗರು, ಕೋಚ್ಗಳು, ನೆರವು ಸಿಬ್ಬಂದಿ ಮತ್ತು ಸಂಸ್ಥೆಗೆ ಸಂಬಂಧಿಸಿದ ಎಲ್ಲರ ಆರೋಗ್ಯ ರಕ್ಷಣೆಗೆ ಮೊದಲ ಆದ್ಯತೆ ನೀಡುತ್ತೇವೆ. ಪೂರ್ಣಪ್ರಮಾಣದಲ್ಲಿ ಕ್ರಿಕೆಟ್ ಚಟುವಟಿಕೆಗಳನ್ನು ಆರಂಭಿಸಲು ಪರಿಷ್ಕೃತ ವೇಳಾಪಟ್ಟಿಯನ್ನು ಸಿದ್ಧಗೊಳಿಸುತ್ತೇವೆ. ಉತ್ತಮವಾದ ಯೋಜನೆಯೊಂದಿಗೆ ಕಾರ್ಯಾರಂಭ ಮಾಡಲಾಗುವುದು’ ಎಂದಿದ್ಧಾರೆ.