<p><strong>ಹುಬ್ಬಳ್ಳಿ:</strong> ಹನ್ನೊಂದು ವರ್ಷಗಳ ನಂತರ ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯ ಫೈನಲ್ ಪ್ರವೇಶಿಸಿರುವ ಕರ್ನಾಟಕ ತಂಡ, ಮಂಗಳವಾರ ಆರಂಭವಾಗುವ ಫೈನಲ್ಗೆ ಪೂರ್ವಭಾವಿಯಾಗಿ ಇಲ್ಲಿನ ರಾಜನಗರದ ಕ್ರೀಡಾಂಗಣದಲ್ಲಿ ಭಾನುವಾರ ಅಭ್ಯಾಸ ನಡೆಸಿತು.</p>.<p>ಭಾನುವಾರ ಬೆಳಿಗ್ಗೆ ನಗರಕ್ಕೆ ಬಂದ ತಂಡವನ್ನು ವಿಮಾನ ನಿಲ್ದಾಣದಲ್ಲಿ ಕೆಎಸ್ಸಿಎ ಧಾರವಾಡ ವಲಯದ ನಿಮಂತ್ರಕ ವೀರಣ್ಣ ಸವಡಿ, ಅಧ್ಯಕ್ಷ ಅಲ್ತಾಫ್ ಕಿತ್ತೂರು, ಕೆಎಸ್ಸಿಎ ವ್ಯವಸ್ಥಾಪನಕ ಸಮಿತಿ ಸದಸ್ಯ ಅವಿನಾಶ ವೈದ್ಯ ಬರಮಾಡಿಕೊಂಡರು.</p>.<p>ಮಧ್ಯಾಹ್ನ ಕ್ರೀಡಾಂಗಣಕ್ಕೆ ಬಂದ ಆಟಗಾರರು ಕೆಲಹೊತ್ತು ವಾರ್ಮ್ಅಪ್ ಮಾಡಿದರು. ನಂತರ ಫುಟ್ಬಾಲ್ ಆಡಿದರು. ಉತ್ತರಾಖಂಡ ಎದುರಿನ ಸೆಮಿಫೈನಲ್ ಪಂದ್ಯದಲ್ಲಿ ಫೀಲ್ಡಿಂಗ್ ವೇಳೆ ಕೈಬೆರಳಿಗೆ ಗಾಯಮಾಡಿಕೊಂಡಿದ್ದ ನಾಯಕ ದೇವದತ್ತ ಪಡಿಕ್ಕಲ್ ಅವರೂ ಅಭ್ಯಾಸದಲ್ಲಿ ಪಾಲ್ಗೊಂಡರು.</p>.<p>ಮಯಂಕ್ ಅಗರವಾಲ್, ಸ್ಮರಣ್ ಆರ್., ಕರುಣ್ ನಾಯರ್ ಅವರು ಬ್ಯಾಟಿಂಗ್ ಅಭ್ಯಾಸ ನಡೆಸಿದರು. ಅವರು ಸ್ಥಳೀಯ ಕ್ಲಬ್ ಬೌಲರ್ಗಳ ವೇಗದ ಎಸೆತಗಳನ್ನು ಹೆಚ್ಚು ಎದುರಿಸಿದರು. ಆರಂಭ ಆಟಗಾರ ಕೆ.ಎಲ್.ರಾಹುಲ್, ವೇಗಿ ಪ್ರಸಿದ್ಧ ಕೃಷ್ಣ ಅವರು ಅಭ್ಯಾಸಕ್ಕೆ ಬರಲಿಲ್ಲ.</p>.<p>ಜಮ್ಮು ಮತ್ತು ಕಾಶ್ಮೀರ ತಂಡದ ಆಟಗಾರರು ಭಾನುವಾರ ಬೆಳಿಗ್ಗೆ ಮೂರು ಗಂಟೆಗೂ ಹೆಚ್ಚು ಕಾಲ ನೆಟ್ಸ್ನಲ್ಲಿ ಬೆವರು ಹರಿಸಿದರು. ಸೋಮವಾರ ಬೆಳಿಗ್ಗೆಯೂ ಎರಡೂ ತಂಡಗಳು ಅಭ್ಯಾಸ ನಡೆಸಲಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಹನ್ನೊಂದು ವರ್ಷಗಳ ನಂತರ ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯ ಫೈನಲ್ ಪ್ರವೇಶಿಸಿರುವ ಕರ್ನಾಟಕ ತಂಡ, ಮಂಗಳವಾರ ಆರಂಭವಾಗುವ ಫೈನಲ್ಗೆ ಪೂರ್ವಭಾವಿಯಾಗಿ ಇಲ್ಲಿನ ರಾಜನಗರದ ಕ್ರೀಡಾಂಗಣದಲ್ಲಿ ಭಾನುವಾರ ಅಭ್ಯಾಸ ನಡೆಸಿತು.</p>.<p>ಭಾನುವಾರ ಬೆಳಿಗ್ಗೆ ನಗರಕ್ಕೆ ಬಂದ ತಂಡವನ್ನು ವಿಮಾನ ನಿಲ್ದಾಣದಲ್ಲಿ ಕೆಎಸ್ಸಿಎ ಧಾರವಾಡ ವಲಯದ ನಿಮಂತ್ರಕ ವೀರಣ್ಣ ಸವಡಿ, ಅಧ್ಯಕ್ಷ ಅಲ್ತಾಫ್ ಕಿತ್ತೂರು, ಕೆಎಸ್ಸಿಎ ವ್ಯವಸ್ಥಾಪನಕ ಸಮಿತಿ ಸದಸ್ಯ ಅವಿನಾಶ ವೈದ್ಯ ಬರಮಾಡಿಕೊಂಡರು.</p>.<p>ಮಧ್ಯಾಹ್ನ ಕ್ರೀಡಾಂಗಣಕ್ಕೆ ಬಂದ ಆಟಗಾರರು ಕೆಲಹೊತ್ತು ವಾರ್ಮ್ಅಪ್ ಮಾಡಿದರು. ನಂತರ ಫುಟ್ಬಾಲ್ ಆಡಿದರು. ಉತ್ತರಾಖಂಡ ಎದುರಿನ ಸೆಮಿಫೈನಲ್ ಪಂದ್ಯದಲ್ಲಿ ಫೀಲ್ಡಿಂಗ್ ವೇಳೆ ಕೈಬೆರಳಿಗೆ ಗಾಯಮಾಡಿಕೊಂಡಿದ್ದ ನಾಯಕ ದೇವದತ್ತ ಪಡಿಕ್ಕಲ್ ಅವರೂ ಅಭ್ಯಾಸದಲ್ಲಿ ಪಾಲ್ಗೊಂಡರು.</p>.<p>ಮಯಂಕ್ ಅಗರವಾಲ್, ಸ್ಮರಣ್ ಆರ್., ಕರುಣ್ ನಾಯರ್ ಅವರು ಬ್ಯಾಟಿಂಗ್ ಅಭ್ಯಾಸ ನಡೆಸಿದರು. ಅವರು ಸ್ಥಳೀಯ ಕ್ಲಬ್ ಬೌಲರ್ಗಳ ವೇಗದ ಎಸೆತಗಳನ್ನು ಹೆಚ್ಚು ಎದುರಿಸಿದರು. ಆರಂಭ ಆಟಗಾರ ಕೆ.ಎಲ್.ರಾಹುಲ್, ವೇಗಿ ಪ್ರಸಿದ್ಧ ಕೃಷ್ಣ ಅವರು ಅಭ್ಯಾಸಕ್ಕೆ ಬರಲಿಲ್ಲ.</p>.<p>ಜಮ್ಮು ಮತ್ತು ಕಾಶ್ಮೀರ ತಂಡದ ಆಟಗಾರರು ಭಾನುವಾರ ಬೆಳಿಗ್ಗೆ ಮೂರು ಗಂಟೆಗೂ ಹೆಚ್ಚು ಕಾಲ ನೆಟ್ಸ್ನಲ್ಲಿ ಬೆವರು ಹರಿಸಿದರು. ಸೋಮವಾರ ಬೆಳಿಗ್ಗೆಯೂ ಎರಡೂ ತಂಡಗಳು ಅಭ್ಯಾಸ ನಡೆಸಲಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>