<p><strong>ಬೆಂಗಳೂರು</strong>: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯತ್ತಿರುವ ರಣಜಿ ಟ್ರೋಫಿ ಸಿ ಗುಂಪಿನ ಪಂದ್ಯದಲ್ಲಿ ಆತಿಥೇಯ ಕರ್ನಾಟಕ ತಂಡವು ಜಯಗಳಿಸಲು 122 ರನ್ಗಳ ಗುರಿಯನ್ನು ಛತ್ತೀಸಗಢ ತಂಡವು ನೀಡಿದೆ.</p>.<p>ಪಂದ್ಯದ ಕೊನೆಯ ದಿನವಾದ ಶುಕ್ರವಾರ ಛತ್ತೀಸಗಢ ತಂಡವು ಎರಡನೇ ಇನಿಂಗ್ಸ್ನಲ್ಲಿ 77.5 ಓವರ್ಗಳಲ್ಲಿ 177 ರನ್ ಗಳಿಸಿತು. ಕರ್ನಾಟಕ ತಂಡವು ಮೊದಲ ಇನಿಂಗ್ಸ್ನಲ್ಲಿ 55 ರನ್ಗಳ ಅಲ್ಪಮುನ್ನಡೆ ಸಾಧಿಸಿತ್ತು. ಮೂರನೇ ದಿನದಾಟದ ಕೊನೆಗೆ ಛತ್ತೀಸಗಢ ತಂಡವು ಎರಡು ವಿಕೆಟ್ಗಳಿಗೆ 35 ರನ್ ಗಳಿಸಿತ್ತು.</p>.<p>ಆದರೆ ಶುಕ್ರವಾರ ಕರ್ನಾಟಕದ ಮಧ್ಯಮವೇಗಿ ವೈಶಾಖ ವಿಜಯಕುಮಾರ್ (59ಕ್ಕೆ5) ಉತ್ತಮ ಬೌಲಿಂಗ್ ಮಾಡಿ ಛತ್ತೀಸಗಢ ತಂಡದ ಬ್ಯಾಟರ್ಗಳಿಗೆ ಕಡಿವಾಣ ಹಾಕಿದರು.</p>.<p>ಪ್ರವಾಸಿ ತಂಡದ ಅಮನದೀಪ್ ಖರೆ (50; 111ಎ) ಮತ್ತು ಮಯಂಕ್ ವರ್ಮಾ (46; 128ಎ) ಅವರು ಇನಿಂಗ್ಸ್ ಬೆಳೆಸಲು ಪ್ರಯತ್ನಿಸಿದರು. ಆದರೆ, ಚಹಾ ವಿರಾಮಕ್ಕೆ ಇನ್ನೂ ಕೆಲವು ನಿಮಿಷಗಳು ಬಾಕಿಯಿರುವಾಗಲೇ ಛತ್ತೀಸಗಢ ಆಲೌಟ್ ಆಯಿತು.</p>.<p>ಕರ್ನಾಟಕದ ಆಫ್ಸ್ಪಿನ್ನರ್ ಕೆ. ಗೌತಮ್ ಎರಡು, ಶ್ರೇಯಸ್ ಗೋಪಾಲ್, ವಿದ್ವತ್ ಕಾವೇರಪ್ಪ ಹಾಗೂ ವಿ. ಕೌಶಿಕ್ ತಲಾ ಒಂದು ವಿಕೆಟ್ ಗಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯತ್ತಿರುವ ರಣಜಿ ಟ್ರೋಫಿ ಸಿ ಗುಂಪಿನ ಪಂದ್ಯದಲ್ಲಿ ಆತಿಥೇಯ ಕರ್ನಾಟಕ ತಂಡವು ಜಯಗಳಿಸಲು 122 ರನ್ಗಳ ಗುರಿಯನ್ನು ಛತ್ತೀಸಗಢ ತಂಡವು ನೀಡಿದೆ.</p>.<p>ಪಂದ್ಯದ ಕೊನೆಯ ದಿನವಾದ ಶುಕ್ರವಾರ ಛತ್ತೀಸಗಢ ತಂಡವು ಎರಡನೇ ಇನಿಂಗ್ಸ್ನಲ್ಲಿ 77.5 ಓವರ್ಗಳಲ್ಲಿ 177 ರನ್ ಗಳಿಸಿತು. ಕರ್ನಾಟಕ ತಂಡವು ಮೊದಲ ಇನಿಂಗ್ಸ್ನಲ್ಲಿ 55 ರನ್ಗಳ ಅಲ್ಪಮುನ್ನಡೆ ಸಾಧಿಸಿತ್ತು. ಮೂರನೇ ದಿನದಾಟದ ಕೊನೆಗೆ ಛತ್ತೀಸಗಢ ತಂಡವು ಎರಡು ವಿಕೆಟ್ಗಳಿಗೆ 35 ರನ್ ಗಳಿಸಿತ್ತು.</p>.<p>ಆದರೆ ಶುಕ್ರವಾರ ಕರ್ನಾಟಕದ ಮಧ್ಯಮವೇಗಿ ವೈಶಾಖ ವಿಜಯಕುಮಾರ್ (59ಕ್ಕೆ5) ಉತ್ತಮ ಬೌಲಿಂಗ್ ಮಾಡಿ ಛತ್ತೀಸಗಢ ತಂಡದ ಬ್ಯಾಟರ್ಗಳಿಗೆ ಕಡಿವಾಣ ಹಾಕಿದರು.</p>.<p>ಪ್ರವಾಸಿ ತಂಡದ ಅಮನದೀಪ್ ಖರೆ (50; 111ಎ) ಮತ್ತು ಮಯಂಕ್ ವರ್ಮಾ (46; 128ಎ) ಅವರು ಇನಿಂಗ್ಸ್ ಬೆಳೆಸಲು ಪ್ರಯತ್ನಿಸಿದರು. ಆದರೆ, ಚಹಾ ವಿರಾಮಕ್ಕೆ ಇನ್ನೂ ಕೆಲವು ನಿಮಿಷಗಳು ಬಾಕಿಯಿರುವಾಗಲೇ ಛತ್ತೀಸಗಢ ಆಲೌಟ್ ಆಯಿತು.</p>.<p>ಕರ್ನಾಟಕದ ಆಫ್ಸ್ಪಿನ್ನರ್ ಕೆ. ಗೌತಮ್ ಎರಡು, ಶ್ರೇಯಸ್ ಗೋಪಾಲ್, ವಿದ್ವತ್ ಕಾವೇರಪ್ಪ ಹಾಗೂ ವಿ. ಕೌಶಿಕ್ ತಲಾ ಒಂದು ವಿಕೆಟ್ ಗಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>