ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕೇದಾರ್‌ ಶೀಘ್ರವೇ ಲಯ ಕಂಡುಕೊಳ್ಳುವರು’

Last Updated 18 ಏಪ್ರಿಲ್ 2019, 15:02 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ‘ಕೇದಾರ್‌ ಜಾಧವ್‌ ಅವರು ಈ ಬಾರಿಯ ಐಪಿಎಲ್‌ನ ಆರಂಭಿಕ ಪಂದ್ಯಗಳಲ್ಲಿ ನಿರೀಕ್ಷಿತ ಸಾಮರ್ಥ್ಯ ತೋರಿಲ್ಲ. ಮುಂದಿನ ಪಂದ್ಯಗಳಲ್ಲಿ ಅವರು ಖಂಡಿತವಾಗಿಯೂ ಲಯ ಕಂಡುಕೊಳ್ಳಲಿದ್ದಾರೆ’ ಎಂದು ಮಹಾರಾಷ್ಟ್ರ ರಣಜಿ ತಂಡದ ಮುಖ್ಯ ಕೋಚ್‌ ಸುರೇಂದ್ರ ಭಾವೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

‘ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದಲ್ಲಿರುವ ಕೇದಾರ್‌, ಈಗ ಆಟದ ಮೇಲೆ ಹೆಚ್ಚು ಗಮನ ಕೇಂದ್ರೀಕರಿಸಿದ್ದಾರೆ. ಮುಂದಿನ ಪಂದ್ಯಗಳಲ್ಲಿ ಖಂಡಿತವಾಗಿಯೂ ನೈಜ ಸಾಮರ್ಥ್ಯ ತೋರಲಿದ್ದಾರೆ. ಈ ಮೂಲಕ ಆತ್ಮವಿಶ್ವಾಸ ಹೆಚ್ಚಿಸಿಕೊಂಡು ವಿಶ್ವಕಪ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದು ಭಾವೆ ತಿಳಿಸಿದ್ದಾರೆ.

34 ವರ್ಷದ ಕೇದಾರ್‌, ಈ ಸಲದ ಲೀಗ್‌ನಲ್ಲಿ ಒಂಬತ್ತು ಪಂದ್ಯಗಳನ್ನು ಆಡಿದ್ದು 136ರನ್‌ ಗಳಿಸಿದ್ದಾರೆ.

‘ಪ್ರತಿ ಪಂದ್ಯದಲ್ಲೂ ತಂಡಕ್ಕೆ ಗೆಲುವು ತಂದುಕೊಡಬೇಕೆಂಬ ಹಂಬಲದೊಂದಿಗೆ ಕೇದಾರ್‌ ಕಣಕ್ಕಿಳಿಯುತ್ತಾರೆ. ಬ್ಯಾಟಿಂಗ್‌, ಬೌಲಿಂಗ್‌ ಮತ್ತು ಫೀಲ್ಡಿಂಗ್‌ನಲ್ಲಿ ಶ್ರೇಷ್ಠ ಸಾಮರ್ಥ್ಯ ತೋರುತ್ತಾರೆ. ಫಿಟ್‌ನೆಸ್‌ ಕಾಪಾಡಿಕೊಳ್ಳುವತ್ತಲೂ ಹೆಚ್ಚು ಗಮನ ಹರಿಸುತ್ತಾರೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT