ಘೇಂಡಾಮೃಗಗಳ ಹತ್ಯೆ ಮತ್ತು ಕೊಂಬುಗಳ ಕಳ್ಳಸಾಗಣೆಗೆ ಕಡಿವಾಣ ಹಾಕುವ ಸಲುವಾಗಿ ಅಸ್ಸಾಂ ಸರ್ಕಾರದ ವಶದಲ್ಲಿದ್ದ 2,479 ಕೊಂಬುಗಳನ್ನು ಸಿಎಂ ಹಿಮಂತ ಬಿಸ್ವ ಶರ್ಮಾ ನೇತೃತ್ವದಲ್ಲಿ ಇತ್ತೀಚೆಗೆ ಸುಡಲಾಯಿತು. ವನ್ಯಜೀವಿಗಳ ಬೇಟೆಯನ್ನು ಕೊನೆಗೊಳಿಸುವ ಪ್ರಧಾನಿ ನರೇಂದ್ರ ಮೋದಿ ಅವರ ದೃಷ್ಟಿಕೋನವನ್ನು ತಾವು ಅನುಸರಿಸಿರುವುದಾಗಿ ಶರ್ಮಾ ಟ್ವೀಟ್ ಮಾಡಿದ್ದರು.