<p><strong>ಗುವಾಹಟಿ:</strong> ಭಾರತ ಹಾಗೂ ಬಾಂಗ್ಲಾದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧ ದಿನೇ ದಿನೇ ಹದಗೆಡುತ್ತಿದೆ. ಈ ಹಿನ್ನೆಲೆಯಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಕೊಲ್ಕತ್ತ ನೈಟ್ ರೈಡರ್ಸ್ ತಂಡದ ಪರ ಆಡಲು ಆಯ್ಕೆಯಾಗಿರುವ ಬಾಂಗ್ಲಾ ವೇಗಿ ಮುಸ್ತಾಫಿಜುರ್ ರೆಹಮಾನ್ ಅವರನ್ನು ತಂಡದಿಂದ ಕೈಬಿಡುವಂತೆ ಬಿಸಿಸಿಐ ಕೇಳಿಕೊಂಡಿದೆ. </p><p>ಇತ್ತೀಚೆಗೆ ಮುಕ್ತಾಯಗೊಂಡ ಐಪಿಎಲ್ 2026ನೇ ಸಾಲಿನ ಹರಾಜಿನಲ್ಲಿ, ಚೆನ್ನೈ ಸೂಪರ್ ಕಿಂಗ್ಸ್ ಮತ್ತು ದೆಹಲಿ ಕ್ಯಾಪಿಟಲ್ಸ್ ಫ್ರಾಂಚೈಸಿಗಳ ಜೊತೆ ತೀವ್ರ ಪೈಪೋಟಿ ನಡೆಸಿ ₹2 ಕೋಟಿ ಮೂಲ ಬೆಲೆ ಹೊಂದಿದ್ದ ಮುಸ್ತಾಫಿಜುರ್ ಅವರನ್ನು ಬರೋಬ್ಬರಿ ₹9.20 ಕೋಟಿ ಕೊಟ್ಟು ಶಾರುಕ್ ಖಾನ್ ಮಾಲೀಕತ್ವದ ಕೆಕೆಆರ್ ಫ್ರಾಂಚೈಸಿ ತನ್ನ ತೆಕ್ಕೆಗೆ ಸೇರಿಸಿಕೊಂಡಿತ್ತು.</p><p>ಇತ್ತೀಚೆಗೆ ಬಾಂಗ್ಲಾದೇಶದಲ್ಲಿ ರಾಜಕೀಯ ಅರಾಜಕತೆ ಸೃಷ್ಟಿಯಾಗಿದ್ದು, ಅಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಿರಂತರ ದಬ್ಬಾಳಿಕೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಐಪಿಎಲ್ ಆಡಲು ಆಯ್ಕೆಯಾಗಿರುವ ಮುಸ್ತಾಫಿಜುರ್ ಅವರನ್ನು ತಂಡದಿಂದ ಕೈಬಿಡುವಂತೆ ಹಿಂದೂಪರ ಸಂಘಟನೆಗಳು, ಸ್ವಾಮೀಜಿಗಳು ಹಾಗೂ ಬಿಜೆಪಿ ನಾಯಕರು ತೀವ್ರ ಒತ್ತಡ ಹೇರಿದ್ದರು.</p>.ಬಾಂಗ್ಲಾ ಕ್ರಿಕೆಟಿಗನ ಖರೀದಿ: ಶಾರುಖ್ ಬೆಂಬಲಕ್ಕೆ ನಿಂತ ವಿಪಕ್ಷಗಳು, BJP ವಿರೋಧ.KKR ಮಾಲೀಕ ಶಾರುಖ್ ಖಾನ್ ದೇಶದ್ರೋಹಿ ಎಂದು ಬಿಜೆಪಿ ನಾಯಕ ಆಕ್ರೋಶ.<p>ಇದೀಗ ಮುಸ್ತಾಫಿಜುರ್ ಅವರನ್ನು ಕೈಬಿಡುವಂತೆ ಬಿಸಿಸಿಐ ಕೆಕೆಆರ್ಗೆ ಸೂಚಿಸಿದ್ದು, ಅಗತ್ಯವಿದ್ದರೆ ಕೆಕೆಆರ್ ತಂಡಕ್ಕೆ ಬದಲಿ ಆಟಗಾರನನ್ನು ತೆಗೆದುಕೊಳ್ಳಲು ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ.</p><p>‘ಕೋಲ್ಕತ್ತಾ ನೈಟ್ ರೈಡರ್ಸ್ ತಂಡದಿಂದ ಮುಸ್ತಾಫಿಜುರ್ ರೆಹಮಾನ್ ಅವರನ್ನು ಬಿಡುಗಡೆ ಮಾಡುವಂತೆ ಬಿಸಿಸಿಐ ಕೇಳಿಕೊಂಡಿದೆ. ಅಗತ್ಯವಿದ್ದರೆ ಅವರು ಬದಲಿ ಆಟಗಾರನನ್ನು ಕೇಳಬಹುದು. ಅದಕ್ಕೆ ಬಿಸಿಸಿಐ ಅನುಮತಿ ನೀಡಲಿದೆ’ ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಶನಿವಾರ ಪಿಟಿಐಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ:</strong> ಭಾರತ ಹಾಗೂ ಬಾಂಗ್ಲಾದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧ ದಿನೇ ದಿನೇ ಹದಗೆಡುತ್ತಿದೆ. ಈ ಹಿನ್ನೆಲೆಯಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಕೊಲ್ಕತ್ತ ನೈಟ್ ರೈಡರ್ಸ್ ತಂಡದ ಪರ ಆಡಲು ಆಯ್ಕೆಯಾಗಿರುವ ಬಾಂಗ್ಲಾ ವೇಗಿ ಮುಸ್ತಾಫಿಜುರ್ ರೆಹಮಾನ್ ಅವರನ್ನು ತಂಡದಿಂದ ಕೈಬಿಡುವಂತೆ ಬಿಸಿಸಿಐ ಕೇಳಿಕೊಂಡಿದೆ. </p><p>ಇತ್ತೀಚೆಗೆ ಮುಕ್ತಾಯಗೊಂಡ ಐಪಿಎಲ್ 2026ನೇ ಸಾಲಿನ ಹರಾಜಿನಲ್ಲಿ, ಚೆನ್ನೈ ಸೂಪರ್ ಕಿಂಗ್ಸ್ ಮತ್ತು ದೆಹಲಿ ಕ್ಯಾಪಿಟಲ್ಸ್ ಫ್ರಾಂಚೈಸಿಗಳ ಜೊತೆ ತೀವ್ರ ಪೈಪೋಟಿ ನಡೆಸಿ ₹2 ಕೋಟಿ ಮೂಲ ಬೆಲೆ ಹೊಂದಿದ್ದ ಮುಸ್ತಾಫಿಜುರ್ ಅವರನ್ನು ಬರೋಬ್ಬರಿ ₹9.20 ಕೋಟಿ ಕೊಟ್ಟು ಶಾರುಕ್ ಖಾನ್ ಮಾಲೀಕತ್ವದ ಕೆಕೆಆರ್ ಫ್ರಾಂಚೈಸಿ ತನ್ನ ತೆಕ್ಕೆಗೆ ಸೇರಿಸಿಕೊಂಡಿತ್ತು.</p><p>ಇತ್ತೀಚೆಗೆ ಬಾಂಗ್ಲಾದೇಶದಲ್ಲಿ ರಾಜಕೀಯ ಅರಾಜಕತೆ ಸೃಷ್ಟಿಯಾಗಿದ್ದು, ಅಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಿರಂತರ ದಬ್ಬಾಳಿಕೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಐಪಿಎಲ್ ಆಡಲು ಆಯ್ಕೆಯಾಗಿರುವ ಮುಸ್ತಾಫಿಜುರ್ ಅವರನ್ನು ತಂಡದಿಂದ ಕೈಬಿಡುವಂತೆ ಹಿಂದೂಪರ ಸಂಘಟನೆಗಳು, ಸ್ವಾಮೀಜಿಗಳು ಹಾಗೂ ಬಿಜೆಪಿ ನಾಯಕರು ತೀವ್ರ ಒತ್ತಡ ಹೇರಿದ್ದರು.</p>.ಬಾಂಗ್ಲಾ ಕ್ರಿಕೆಟಿಗನ ಖರೀದಿ: ಶಾರುಖ್ ಬೆಂಬಲಕ್ಕೆ ನಿಂತ ವಿಪಕ್ಷಗಳು, BJP ವಿರೋಧ.KKR ಮಾಲೀಕ ಶಾರುಖ್ ಖಾನ್ ದೇಶದ್ರೋಹಿ ಎಂದು ಬಿಜೆಪಿ ನಾಯಕ ಆಕ್ರೋಶ.<p>ಇದೀಗ ಮುಸ್ತಾಫಿಜುರ್ ಅವರನ್ನು ಕೈಬಿಡುವಂತೆ ಬಿಸಿಸಿಐ ಕೆಕೆಆರ್ಗೆ ಸೂಚಿಸಿದ್ದು, ಅಗತ್ಯವಿದ್ದರೆ ಕೆಕೆಆರ್ ತಂಡಕ್ಕೆ ಬದಲಿ ಆಟಗಾರನನ್ನು ತೆಗೆದುಕೊಳ್ಳಲು ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ.</p><p>‘ಕೋಲ್ಕತ್ತಾ ನೈಟ್ ರೈಡರ್ಸ್ ತಂಡದಿಂದ ಮುಸ್ತಾಫಿಜುರ್ ರೆಹಮಾನ್ ಅವರನ್ನು ಬಿಡುಗಡೆ ಮಾಡುವಂತೆ ಬಿಸಿಸಿಐ ಕೇಳಿಕೊಂಡಿದೆ. ಅಗತ್ಯವಿದ್ದರೆ ಅವರು ಬದಲಿ ಆಟಗಾರನನ್ನು ಕೇಳಬಹುದು. ಅದಕ್ಕೆ ಬಿಸಿಸಿಐ ಅನುಮತಿ ನೀಡಲಿದೆ’ ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಶನಿವಾರ ಪಿಟಿಐಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>