ಕೋಲ್ಕತ್ತದ ಬ್ಯಾಟರ್ಗಳ ಪೈಕಿ ಆ್ಯಂಡ್ರೆ ರಸೆಲ್ ಅವರನ್ನು ಹೊರತುಪಡಿಸಿದರೆ ಉಳಿದ ಯಾರಿಗೂ ಸ್ಥಿರ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಬೌಲಿಂಗ್ ವಿಭಾಗದಲ್ಲಿ ಸ್ಪಿನ್ನರ್ ವರುಣ್ ಚಕ್ರವರ್ತಿ ಮತ್ತು ಮಧ್ಯಮ ವೇಗಿಗಳಾದ ಉಮೇಶ್ ಯಾದವ್ ಮತ್ತು ಪ್ಯಾಟ್ ಕಮಿನ್ಸ್ ಅವರಿಗೆ ಸಂಪೂರ್ಣವಾಗಿ ಸಾಮರ್ಥ್ಯ ಹೊರಗೆಡವಲು ಸಾಧ್ಯವಾಗಲಿಲ್ಲ. ನಾಯಕ ಶ್ರೇಯಸ್ ಅಯ್ಯರ್ ಫಾರ್ಮ್ನಲ್ಲಿಲ್ಲ ಎಂಬುದು ತಂಡದ ಚಿಂತೆಯನ್ನು ಹೆಚ್ಚಿಸಿದೆ. ನಿತೇಶ್ ರಾಣಾ, ವೆಂಕಟೇಶ್ ಅಯ್ಯರ್ ಮತ್ತು ಸ್ಯಾಮ್ ಬಿಲಿಂಗ್ಸ್ ಅವರಿಗೂ ನಿರೀಕ್ಷೆಗೆ ತಕ್ಕಂತೆ ಆಡಲು ಆಗಲಿಲ್ಲ.