ಅಬುಧಾಬಿ:ಮೊದಲ ಪಂದ್ಯದಲ್ಲಿ ಸೋಲಿನ ಕಹಿ ಅನುಭವಿಸಿರುವ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಬುಧವಾರ ಕೋಲ್ಕತ್ತ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ.
ಉಭಯ ತಂಡಗಳು ಗೆಲುವು ದಾಖಲಿಸಿ ಪಾಯಿಂಟ್ ಪಟ್ಟಿ ಸೇರುವ ತವಕದಲ್ಲಿವೆ. ಈಗಾಗಲೇ ಮುಂಬೈ ಇಂಡಿಯನ್ಸ್ ಮೊದಲ ಪಂದ್ಯದಲ್ಲಿ ಸೋಲು ಅನುಭವಿಸಿದೆ.
ಕೆಕೆಆರ್ನಲ್ಲಿರುವ ಯುವ ಬ್ಯಾಟ್ಸ್ಮನ್ ಶುಭಮನ್ ಗಿಲ್, ಆ್ಯಂಡ್ರೆ ರಸೆಲ್, ನಾಯಕ ದಿನೇಶ್ ಕಾರ್ತಿಕ್ , ನಿತೀಶ್ ರಾಣಾ, ರಾಹುಲ್ ತ್ರಿಪಾಠಿ ತಮ್ಮ ಭುಜಬಲ ಮೆರೆಯುವ ತವಕದಲ್ಲಿದ್ದಾರೆ. ಆಲ್ರೌಂಡರ್ ಸುನೀಲ್ ನಾರಾಯಣ್, ಮಧ್ಯಮವೇಗಿ ಕನ್ನಡಿಗ ಪ್ರಸಿದ್ಧ ಕೃಷ್ಣ, ಪ್ಯಾಟ್ ಕಮಿನ್ಸ್ ಎದುರಾಳಿ ಬ್ಯಾಟಿಂಗ್ ಪಡೆಗೆ ಬಿಸಿ ಮುಟ್ಟಿಸುವ ಸಿದ್ಧತೆಯಲ್ಲಿದ್ದಾರೆ.
ಮುಂಬೈ ಇಂಡಿಯನ್ಸ್ ತಂಡದಲ್ಲಿ ರೋಹಿತ್ ಶರ್ಮಾ , ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಸೌರಭ್ ತಿವಾರಿ, ಕ್ವಿಂಟನ್ ಡಿ ಕಾಕ್, ಕೀರನ್ ಪೊಲಾರ್ಡ್ ಮತ್ತು ಸೂರ್ಯಕುಮಾರ್ ಯಾದವ್ ರನ್ ಹೊಳೆ ಹರಿಸಬಲ್ಲ ಸಮರ್ಥರು. ಬೌಲಿಂಗ್ನಲ್ಲಿ ಜಸ್ಪ್ರೀತ್ ಬೂಮ್ರಾ, ಟ್ರೆಂಟ್ ಬೌಲ್ಟ್, ಸ್ಪಿನ್ನರ್ ಕೃಣಾಲ್ ಪಾಂಡ್ಯ ಅವರು ಪಂದ್ಯ ಗೆಲ್ಲಿಸಿಕೊಡಬಲ್ಲ ಶಕ್ತಿಯುಳ್ಳರಾಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.