ನವದೆಹಲಿ: ಮೊಣಕಾಲು ನೋವಿನಿಂದ ಬಳಲುತ್ತಿದ್ದ ಭಾರತ ಕ್ರಿಕೆಟ್ ತಂಡದ ವೇಗಿ ಟಿ. ನಟರಾಜನ್ ಮಂಗಳವಾರ ಶಸ್ತ್ರಚಿಕಿತ್ಸೆಗೆ ಒಳಗಾದರು. ನೋವಿನ ಹಿನ್ನೆಲೆಯಲ್ಲಿ ಅವರು ಈ ಬಾರಿಯ ಐಪಿಎಲ್ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ.
ಐಪಿಎಲ್ನಲ್ಲಿನಟರಾಜನ್ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಪ್ರತಿನಿಧಿಸುತ್ತಾರೆ.
ಈ ವರ್ಷದ ಆರಂಭದಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಸರಣಿಯಲ್ಲಿ ಅವರು ಗಾಯಗೊಂಡಿದ್ದರು.
‘ನಾನು ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ವೈದ್ಯಕೀಯ ತಂಡಕ್ಕೆ ಕೃತಜ್ಞನಾಗಿದ್ದೇನೆ. ಶುಭಕೋರಿದ ಬಿಸಿಸಿಐಗೂ ಋಣಿಯಾಗಿದ್ದೇನೆ‘ ಎಂದು ನಟರಾಜನ್ ಟ್ವೀಟ್ ಮಾಡಿದ್ದಾರೆ.
ಯಾರ್ಕರ್ ಪರಿಣತ ನಟರಾಜನ್ ಈ ಬಾರಿಯ ಐಪಿಎಲ್ನಲ್ಲಿ ಕೇವಲ ಎರಡು ಪಂದ್ಯಗಳನ್ನು ಆಡಿದ್ದರು.
Today, I underwent knee surgery- and am grateful for the expertise, attention and kindness of the medical team, surgeons, doctors, nurses and staff. I’m grateful to @bcci and to all that have wished well for me. pic.twitter.com/Z6pmqzfaFj