<p><strong>ಮುಂಬೈ</strong>: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಅವರ ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರು ನಡೆಸುತ್ತಿರುವ ಕೋವಿಡ್ ಪರಿಹಾರ ನಿಧಿ ಸಂಗ್ರಹ ಅಭಿಯಾನದಲ್ಲಿ ಸುಮಾರು ₹ 11 ಕೋಟಿ ಸಂಗ್ರಹವಾಗಿದೆ.</p>.<p>ಕೊಹ್ಲಿ ದಂಪತಿ ಆರಂಭದಲ್ಲಿ ₹ 2 ಕೋಟಿ ದೇಣಿಗೆ ನೀಡಿ ಅಭಿಯಾನ ಆರಂಭಿಸಿದ್ದರು. ಇಲ್ಲಿ ಸಂಗ್ರಹವಾದ ಮೊತ್ತವನ್ನು ಆ್ಯಕ್ಟ್ ಗ್ರ್ಯಾಂಟ್ಸ್ ಸಂಸ್ಥೆಗೆ ನೀಡಲಾಗುತ್ತದೆ. ಈ ಸಂಸ್ಥೆಯು ಆಮ್ಲಜನಕ, ವೈದ್ಯರ ಸೇವೆ, ಲಸಿಕೆ ಕುರಿತು ಜಾಗೃತಿ ಹಾಗೂ ಟೆಲಿ ಮೆಡಿಸಿನ್ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತದೆ.</p>.<p>ಒಂದು ವಾರದ ಅವಧಿಗೆ ನಡೆಯುತ್ತಿರುವ ಅಭಿಯಾನಕ್ಕೆ ಇನ್ನೂ ಎರಡು ದಿನ ಬಾಕಿ ಇದೆ. ಒಟ್ಟು ₹ 7 ಕೋಟಿ ಸಂಗ್ರಹಿಸುವ ಗುರಿ ಇಟ್ಟುಕೊಳ್ಳಲಾಗಿತ್ತು. ಆದರೆ ಆ ಮೊತ್ತವನ್ನು ದಾಟಿಅಭಿಯಾನ ಮುಂದುವರಿದಿದೆ.</p>.<p>ಇಸ್ಪೋರ್ಟ್ಸ್ ಸಂಸ್ಥೆಯಾದ ಎಂಪಿಎಲ್ ಕೂಡ ಕೋವಿಡ್ ಪರಿಹಾರ ನಿಧಿಗೆ ₹ 5 ಕೋಟಿ ನೀಡಿದೆ.</p>.<p>‘ನಿಧಿ ಸಂಗ್ರಹ ಅಭಿಯಾನಕ್ಕೆ ವ್ಯಾಪಕ ಸ್ಪಂದನೆ ವ್ಯಕ್ತವಾಗಿದೆ‘ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಅವರ ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರು ನಡೆಸುತ್ತಿರುವ ಕೋವಿಡ್ ಪರಿಹಾರ ನಿಧಿ ಸಂಗ್ರಹ ಅಭಿಯಾನದಲ್ಲಿ ಸುಮಾರು ₹ 11 ಕೋಟಿ ಸಂಗ್ರಹವಾಗಿದೆ.</p>.<p>ಕೊಹ್ಲಿ ದಂಪತಿ ಆರಂಭದಲ್ಲಿ ₹ 2 ಕೋಟಿ ದೇಣಿಗೆ ನೀಡಿ ಅಭಿಯಾನ ಆರಂಭಿಸಿದ್ದರು. ಇಲ್ಲಿ ಸಂಗ್ರಹವಾದ ಮೊತ್ತವನ್ನು ಆ್ಯಕ್ಟ್ ಗ್ರ್ಯಾಂಟ್ಸ್ ಸಂಸ್ಥೆಗೆ ನೀಡಲಾಗುತ್ತದೆ. ಈ ಸಂಸ್ಥೆಯು ಆಮ್ಲಜನಕ, ವೈದ್ಯರ ಸೇವೆ, ಲಸಿಕೆ ಕುರಿತು ಜಾಗೃತಿ ಹಾಗೂ ಟೆಲಿ ಮೆಡಿಸಿನ್ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತದೆ.</p>.<p>ಒಂದು ವಾರದ ಅವಧಿಗೆ ನಡೆಯುತ್ತಿರುವ ಅಭಿಯಾನಕ್ಕೆ ಇನ್ನೂ ಎರಡು ದಿನ ಬಾಕಿ ಇದೆ. ಒಟ್ಟು ₹ 7 ಕೋಟಿ ಸಂಗ್ರಹಿಸುವ ಗುರಿ ಇಟ್ಟುಕೊಳ್ಳಲಾಗಿತ್ತು. ಆದರೆ ಆ ಮೊತ್ತವನ್ನು ದಾಟಿಅಭಿಯಾನ ಮುಂದುವರಿದಿದೆ.</p>.<p>ಇಸ್ಪೋರ್ಟ್ಸ್ ಸಂಸ್ಥೆಯಾದ ಎಂಪಿಎಲ್ ಕೂಡ ಕೋವಿಡ್ ಪರಿಹಾರ ನಿಧಿಗೆ ₹ 5 ಕೋಟಿ ನೀಡಿದೆ.</p>.<p>‘ನಿಧಿ ಸಂಗ್ರಹ ಅಭಿಯಾನಕ್ಕೆ ವ್ಯಾಪಕ ಸ್ಪಂದನೆ ವ್ಯಕ್ತವಾಗಿದೆ‘ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>