ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಒಂದೆನಿಸಿರುವ ಭಾರತ ತಂಡದಲ್ಲಿ ಹಲವು ಆಟಗಾರರು ಗಾಯದ ಸಮಸ್ಯೆ ಎದುರಿಸಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಮೊಣಕೈ ಗಾಯಕ್ಕೆ ಒಳಗಾದ ಆಲ್–ರೌಂಡರ್ ವಿಜಯ್ ಶಂಕರ್ ವಿಶ್ರಾಂತಿ ಪಡೆದರು. ಐಪಿಎಲ್ ಟೂರ್ನಿಯಿಂದಲೂ ಭುಜನದ ನೋವು ಅನುಭವಿಸುತ್ತಿರುವ ಕೇದರ್ ಜಾಧವ್, ಕಿವೀಸ್ ಹಾಗೂ ಬಾಂಗ್ಲಾದೇಶ ತಂಡಗಳ ವಿರುದ್ಧದ ಅಭ್ಯಾಸ ಪಂದ್ಯಗಳಲ್ಲಿ ಮೈದಾನಕ್ಕಿಳಿಯಲಿಲ್ಲ.