<p><strong>ವಿಶಾಖಪಟ್ಟಣ:</strong> ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ, ಮೈದಾನದಲ್ಲಿ ಕ್ಷೇತ್ರರಕ್ಷಣೆಯ ವೇಳೆ ಸದಾ ಸಕ್ರಿಯರಾಗಿಯೇ ಇರುತ್ತಾರೆ. ಓರ್ವ ಅನುಭವಿ ಆಟಗಾರನಾಗಿ ನಾಯಕರೊಂದಿಗೆ ತಮ್ಮ ಸಲಹೆ ಸೂಚನೆಗಳನ್ನು ಹಂಚಿಕೊಳ್ಳಲು ಎಂದಿಗೂ ಹಿಂಜರಿಯುವುದಿರಲ್ಲ.</p><p>ಪ್ರಸ್ತುತ ವಿಶಾಖಪಟ್ಟಣದಲ್ಲಿ ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ಶನಿವಾರ ನಡೆದ ಮೂರನೇ ಏಕದಿನ ಪಂದ್ಯದ ವೇಳೆ ಇಂತಹದೊಂದು ಘಟನೆ ಎದುರಾಗಿತ್ತು. </p><p>ಆದರೆ ಕೊಹ್ಲಿ ಅವರ ಸಲಹೆಯನ್ನು ಕ್ಯಾಪ್ಟನ್ ಕೆ.ಎಲ್. ರಾಹುಲ್ ಪುರಸ್ಕರಿಸಲಿಲ್ಲ. ಈ ವೇಳೆ ಮಗದೋರ್ವ ಮಾಜಿ ನಾಯಕ ರೋಹಿತ್ ಶರ್ಮಾ ಅವರ ರಿಯಾಕ್ಷನ್ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿವೆ. </p><p><strong>ಏನಿದು ಘಟನೆ?</strong></p><p>ಭಾರತದ ಕ್ಷೇತ್ರರಕ್ಷಣೆ ವೇಳೆ ಈ ಘಟನೆ ನಡೆದಿತ್ತು. ಸ್ಲಿಪ್ನಲ್ಲಿ ಎರಡು ಫೀಲ್ಡರ್ಗಳನ್ನು ಇರಿಸುವಂತೆ ಕೊಹ್ಲಿ ಸಲಹೆ ಕೊಡುತ್ತಾರೆ. ಆದರೆ ಕೊಹ್ಲಿ ಸಲಹೆ ನಿರಾಕರಿಸಿದ ರಾಹುಲ್, ತಮ್ಮ ಸ್ಥಾನಕ್ಕೆ ಮರಳುವಂತೆ ಸೂಚಿಸುತ್ತಾರೆ. ಬಳಿಕ ಬಲಗಡೆ ತಿರುಗಿ ರೋಹಿತ್ ಅವರಲ್ಲಿ ಮುಂದೆ ಬರುವಂತೆ ಸನ್ನೆ ಮಾಡುತ್ತಾರೆ. </p><p>ಅಲ್ಲದೇ ಹತ್ತಿರದಲ್ಲಿ ಇವನ್ನೆಲ್ಲ ಗಮನಿಸುತ್ತಲೇ ಇದ್ದ ರೋಹಿತ್ ಶರ್ಮಾ ನಗುಮುಖದಿಂದಲೇ ಕಾಣಿಸುತ್ತಾರೆ. </p><p>ಅಂದ ಹಾಗೆ ಕನ್ನಡಿಗ ಕೆ.ಎಲ್. ರಾಹುಲ್ ನಾಯಕತ್ವದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಒಂಬತ್ತು ವಿಕೆಟ್ ಅಂತರದ ಗೆಲುವು ದಾಖಲಿಸಿದ ಭಾರತ, ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1ರ ಅಂತರದಲ್ಲಿ ವಶಪಡಿಸಿಕೊಂಡಿತ್ತು. </p>.ರೋಹಿತ್ ತಬ್ಬಿಕೊಂಡ ವಿರಾಟ್, ಕೋಚ್ ಗಂಭೀರ್ರನ್ನು ಕಡೆಗಣಿಸಿದ್ದಾರೆಯೇ?.Rohit Sharma| 20,000 ರನ್ ಮೈಲಿಗಲ್ಲು: ಸಚಿನ್, ಕೊಹ್ಲಿ ಸಾಲಿಗೆ ರೋಹಿತ್ ಶರ್ಮಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಶಾಖಪಟ್ಟಣ:</strong> ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ, ಮೈದಾನದಲ್ಲಿ ಕ್ಷೇತ್ರರಕ್ಷಣೆಯ ವೇಳೆ ಸದಾ ಸಕ್ರಿಯರಾಗಿಯೇ ಇರುತ್ತಾರೆ. ಓರ್ವ ಅನುಭವಿ ಆಟಗಾರನಾಗಿ ನಾಯಕರೊಂದಿಗೆ ತಮ್ಮ ಸಲಹೆ ಸೂಚನೆಗಳನ್ನು ಹಂಚಿಕೊಳ್ಳಲು ಎಂದಿಗೂ ಹಿಂಜರಿಯುವುದಿರಲ್ಲ.</p><p>ಪ್ರಸ್ತುತ ವಿಶಾಖಪಟ್ಟಣದಲ್ಲಿ ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ಶನಿವಾರ ನಡೆದ ಮೂರನೇ ಏಕದಿನ ಪಂದ್ಯದ ವೇಳೆ ಇಂತಹದೊಂದು ಘಟನೆ ಎದುರಾಗಿತ್ತು. </p><p>ಆದರೆ ಕೊಹ್ಲಿ ಅವರ ಸಲಹೆಯನ್ನು ಕ್ಯಾಪ್ಟನ್ ಕೆ.ಎಲ್. ರಾಹುಲ್ ಪುರಸ್ಕರಿಸಲಿಲ್ಲ. ಈ ವೇಳೆ ಮಗದೋರ್ವ ಮಾಜಿ ನಾಯಕ ರೋಹಿತ್ ಶರ್ಮಾ ಅವರ ರಿಯಾಕ್ಷನ್ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿವೆ. </p><p><strong>ಏನಿದು ಘಟನೆ?</strong></p><p>ಭಾರತದ ಕ್ಷೇತ್ರರಕ್ಷಣೆ ವೇಳೆ ಈ ಘಟನೆ ನಡೆದಿತ್ತು. ಸ್ಲಿಪ್ನಲ್ಲಿ ಎರಡು ಫೀಲ್ಡರ್ಗಳನ್ನು ಇರಿಸುವಂತೆ ಕೊಹ್ಲಿ ಸಲಹೆ ಕೊಡುತ್ತಾರೆ. ಆದರೆ ಕೊಹ್ಲಿ ಸಲಹೆ ನಿರಾಕರಿಸಿದ ರಾಹುಲ್, ತಮ್ಮ ಸ್ಥಾನಕ್ಕೆ ಮರಳುವಂತೆ ಸೂಚಿಸುತ್ತಾರೆ. ಬಳಿಕ ಬಲಗಡೆ ತಿರುಗಿ ರೋಹಿತ್ ಅವರಲ್ಲಿ ಮುಂದೆ ಬರುವಂತೆ ಸನ್ನೆ ಮಾಡುತ್ತಾರೆ. </p><p>ಅಲ್ಲದೇ ಹತ್ತಿರದಲ್ಲಿ ಇವನ್ನೆಲ್ಲ ಗಮನಿಸುತ್ತಲೇ ಇದ್ದ ರೋಹಿತ್ ಶರ್ಮಾ ನಗುಮುಖದಿಂದಲೇ ಕಾಣಿಸುತ್ತಾರೆ. </p><p>ಅಂದ ಹಾಗೆ ಕನ್ನಡಿಗ ಕೆ.ಎಲ್. ರಾಹುಲ್ ನಾಯಕತ್ವದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಒಂಬತ್ತು ವಿಕೆಟ್ ಅಂತರದ ಗೆಲುವು ದಾಖಲಿಸಿದ ಭಾರತ, ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1ರ ಅಂತರದಲ್ಲಿ ವಶಪಡಿಸಿಕೊಂಡಿತ್ತು. </p>.ರೋಹಿತ್ ತಬ್ಬಿಕೊಂಡ ವಿರಾಟ್, ಕೋಚ್ ಗಂಭೀರ್ರನ್ನು ಕಡೆಗಣಿಸಿದ್ದಾರೆಯೇ?.Rohit Sharma| 20,000 ರನ್ ಮೈಲಿಗಲ್ಲು: ಸಚಿನ್, ಕೊಹ್ಲಿ ಸಾಲಿಗೆ ರೋಹಿತ್ ಶರ್ಮಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>