ಶುಕ್ರವಾರ ಈ ಕುರಿತು ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ‘ಆಟಗಾರರಾದ ಸಿ.ಎಂ. ಗೌತಮ್, ಅಬ್ರಾರ್ ಖಾಜಿ, ಎಂ. ವಿಶ್ವನಾಥನ್, ನಿಶಾಂತ್ ಶೇಖಾವತ್ ಮತ್ತು ಕೋಚ್ ವಿನೂ ಪ್ರಸಾದ್ ಅವರನ್ನು ಅಮಾನತು ಮಾಡಲಾಗಿದೆ. ಇನ್ನೊಬ್ಬ ಆಟಗಾರ ಭಾವೇಶ್ ಗುಲೇಚಾ ಎಂಬುವವರು ತಮ್ಮನ್ನು ಸಂಪರ್ಕಿಸಿದ ಬುಕ್ಕಿಗಳ ಮಾಹಿತಿಯನ್ನು ಕೆಎಸ್ಸಿಎಗೆ ನೀಡಿರಲಿಲ್ಲ. ಆದ್ದರಿಂದ ಅವರನ್ನೂ ಅಮಾನತು ಮಾಡಲಾಗಿದೆ’ ಎಂದು ಉಲ್ಲೇಖಿಸಿದ್ದಾರೆ.