‘ಕುಡಿಯುವ ನೀರಿಗಾಗಿ ಮತ್ತೊಂದು ಕೊಳವೆಬಾವಿ ಕೊರೆಸಲಾಗಿದ್ದು, ಹೆಚ್ಚು ನೀರು ಬಂದಿದೆ. ಆದರೆ ಈ ಕೊಳವೆಬಾವಿಗೆ ಮೋಟರ್ ಬಿಟ್ಟಿಲ್ಲ. ಹೊಸ ಕೊಳವೆಬಾವಿಗೆ ಸಂಪರ್ಕ ಕಲ್ಪಿಸುವಂತೆ ಪಿಡಿಒ, ಗ್ರಾಮ ಪಂಚಾಯ್ತಿ ಅಧ್ಯಕ್ಷರಿಗೆ ಅನೇಕ ಬಾರಿ ಮನವಿ ಮಾಡಿದರೂ ಗಮನ ಹರಿಸಿಲ್ಲ. ಗ್ರಾಮಕ್ಕೆ ಶುದ್ಧ ಕುಡಿಯುವ ನೀರಿನ ಘಟಕ ಮಂಜೂರಾಗಿದ್ದರೂ ನಿರ್ಮಾಣ ಆಗಿಲ್ಲ. ಜನ ಕುಡಿಯುವ ನೀರಿಗಾಗಿ ಪರಿತಪಿಸುತ್ತಿದ್ದು, ರಾತ್ರಿ ವೇಳೆ ತೋಟಗಳಿಗೆ ಹೋಗಿ ನೀರು ತರುತ್ತಾರೆ. ಎತ್ತಿನ ಗಾಡಿ, ಬೈಕ್, ಟ್ರ್ಯಾಕ್ಟರ್ ಗಳಲ್ಲಿ ಡ್ರಂ ಇಟ್ಟುಕೊಂಡು ನೀರು ತರುತ್ತಿದ್ದಾರೆ’ ಎಂದು ಗ್ರಾಮಸ್ಥರಾದ ಟಿ.ಗೋವಿಂದಪ್ಪ, ನಾಗರಾಜ್, ಧನಂಜಯ, ಮಧು, ಶ್ರೀನಿವಾಸ್, ಈರಪ್ಪ, ರಂಗಮ್ಮ, ಚಿತ್ತಮ್ಮ, ಆಶಾ, ಜಯಮ್ಮ ದೂರಿದ್ದಾರೆ.‘ಚುನಾವಣೆಯ ಒಳಗೆ ನೀರಿನ ಸಮಸ್ಯೆ ಬಗೆಹರಿಸಬೇಕು. ಇಲ್ಲವಾದಲ್ಲಿ ನಾವು ಮತದಾನ ಮಾಡುವುದಿಲ್ಲ’ ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ.