ಬೆಂಗಳೂರು: ‘ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು (ಕೆಎಸ್ಸಿಎ), ಈ ವರ್ಷದ ಎಲ್ಲಾ ಕ್ರಿಕೆಟ್ ಚಟುವಟಿಕೆಗಳನ್ನು ರದ್ದು ಮಾಡಿರುವುದಾಗಿ ಕೆಲ ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗಿದೆ. ಅವು ಸತ್ಯಕ್ಕೆ ದೂರವಾದವು. ನಾವು ಇದುವರೆಗೂ ಅಂತಹ ತೀರ್ಮಾನವನ್ನು ತೆಗೆದುಕೊಂಡಿಲ್ಲ’ ಎಂದು ಕೆಎಸ್ಸಿಎ ವಕ್ತಾರ ವಿನಯ್ ಮೃತ್ಯುಂಜಯ ತಿಳಿಸಿದ್ದಾರೆ.