‘ಕೆಎಸ್ಸಿಎ ಜೊತೆಗೆ ತಮಿಳುನಾಡು, ಸೌರಾಷ್ಟ್ರ, ಗುಜರಾತ್, ಹರಿಯಾಣ, ಮಧ್ಯಪ್ರದೇಶ ಮತ್ತು ಗೋವಾ ರಾಜ್ಯ ಸಂಸ್ಥೆಗಳೂ ಜೊಹ್ರಿ ಅವರನ್ನು ಅಮಾನತುಗೊಳಿಸುವಂತೆ ಆಗ್ರಹಿಸಿವೆ. ಈ ಸಂಬಂಧ ಸಿಒಎ ಮುಖ್ಯಸ್ಥ ವಿನೋದ್ ರಾಯ್ ಅವರಿಗೆ ಈ ಸಂಸ್ಥೆಗಳು ಪ್ರತ್ಯೇಕವಾಗಿ ಪತ್ರ ಬರೆದಿವೆ’ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.