<p><strong>ಬೆಂಗಳೂರು:</strong> ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ 88ನೇ ವಾರ್ಷಿಕ ಸರ್ವಸದಸ್ಯರ ಸಭೆ ಮತ್ತು ಚುನಾವಣೆ ಪ್ರಕ್ರಿಯೆ ಭಾನುವಾರ ನಡೆಯಲಿದೆ. </p>.<p>ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬೆಳಿಗ್ಗೆ 10.30ರಿಂದ ಸಭೆ ನಡೆಯಲಿದೆ. 11 ರಿಂದ ರಾತ್ರಿ 7ರವರೆಗೆ ಚುನಾವಣೆ ಪ್ರಕ್ರಿಯೆ ನಡೆಯಲಿದೆ. ನಂತರ ಫಲಿತಾಂಶ ಪ್ರಕಟವಾಗಲಿದೆ.</p>.<p>ಎಜಿಎಂ ಮತ್ತು ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸುವವರು ತಮ್ಮ ಸದಸ್ಯತ್ವದ ಗುರುತಿನ ಚೀಟಿಯನ್ನು ತರಬೇಕು. ಒಟ್ಟು ಐವರು ಪದಾಧಿಕಾರಿಗಳು ಹಾಗೂ ಆಡಳಿತ ಸಮಿತಿಯ 11 ಸದಸ್ಯರ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. </p>.<p>ಅಧ್ಯಕ್ಷ ಸ್ಥಾನಕ್ಕಾಗಿ ಟೀಮ್ ಬ್ರಿಜೇಶ್ ಬಣದಿಂದ, ದಿ ಪ್ರಿಂಟರ್ಸ್ ಮೈಸೂರು ಪ್ರೈವೇಟ್ ಲಿಮಿಟೆಡ್ (ಪ್ರಜಾವಾಣಿ–ಡೆಕ್ಕನ್ ಹೆರಾಲ್ಡ್ ಪತ್ರಿಕಾ ಸಮೂಹ) ನಿರ್ದೇಶಕ ಕೆ.ಎನ್. ಶಾಂತಕುಮಾರ್ ಮತ್ತು ಟೀಮ್ ಗೇಮ್ ಚೇಂಜರ್ಸ್ ಬಣದಿಂದ, ಮಾಜಿ ಕ್ರಿಕೆಟಿಗ ಬಿ.ಕೆ. ವೆಂಕಟೇಶ್ ಪ್ರಸಾದ್ ಅವರು ಸ್ಪರ್ಧಿಸಿದ್ದಾರೆ. </p>.<div><div class="bigfact-title"><strong>ಗಾಲಿಕುರ್ಚಿ ವ್ಯವಸ್ಥೆ:</strong></div><div class="bigfact-description"> 12ನೇ ಸಂಖ್ಯೆಯ ಪ್ರವೇಶದ್ವಾರದಲ್ಲಿ ಗಾಲಿ ಕುರ್ಚಿ ಸೇವೆಯನ್ನು ಅಗತ್ಯವಿದ್ದವರಿಗೆ ನೀಡುವ ವ್ಯವಸ್ಥೆ ಮಾಡಲಾಗಿದೆ ಎಂದು ಕೆಎಸ್ಸಿಎ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. </div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ 88ನೇ ವಾರ್ಷಿಕ ಸರ್ವಸದಸ್ಯರ ಸಭೆ ಮತ್ತು ಚುನಾವಣೆ ಪ್ರಕ್ರಿಯೆ ಭಾನುವಾರ ನಡೆಯಲಿದೆ. </p>.<p>ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬೆಳಿಗ್ಗೆ 10.30ರಿಂದ ಸಭೆ ನಡೆಯಲಿದೆ. 11 ರಿಂದ ರಾತ್ರಿ 7ರವರೆಗೆ ಚುನಾವಣೆ ಪ್ರಕ್ರಿಯೆ ನಡೆಯಲಿದೆ. ನಂತರ ಫಲಿತಾಂಶ ಪ್ರಕಟವಾಗಲಿದೆ.</p>.<p>ಎಜಿಎಂ ಮತ್ತು ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸುವವರು ತಮ್ಮ ಸದಸ್ಯತ್ವದ ಗುರುತಿನ ಚೀಟಿಯನ್ನು ತರಬೇಕು. ಒಟ್ಟು ಐವರು ಪದಾಧಿಕಾರಿಗಳು ಹಾಗೂ ಆಡಳಿತ ಸಮಿತಿಯ 11 ಸದಸ್ಯರ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. </p>.<p>ಅಧ್ಯಕ್ಷ ಸ್ಥಾನಕ್ಕಾಗಿ ಟೀಮ್ ಬ್ರಿಜೇಶ್ ಬಣದಿಂದ, ದಿ ಪ್ರಿಂಟರ್ಸ್ ಮೈಸೂರು ಪ್ರೈವೇಟ್ ಲಿಮಿಟೆಡ್ (ಪ್ರಜಾವಾಣಿ–ಡೆಕ್ಕನ್ ಹೆರಾಲ್ಡ್ ಪತ್ರಿಕಾ ಸಮೂಹ) ನಿರ್ದೇಶಕ ಕೆ.ಎನ್. ಶಾಂತಕುಮಾರ್ ಮತ್ತು ಟೀಮ್ ಗೇಮ್ ಚೇಂಜರ್ಸ್ ಬಣದಿಂದ, ಮಾಜಿ ಕ್ರಿಕೆಟಿಗ ಬಿ.ಕೆ. ವೆಂಕಟೇಶ್ ಪ್ರಸಾದ್ ಅವರು ಸ್ಪರ್ಧಿಸಿದ್ದಾರೆ. </p>.<div><div class="bigfact-title"><strong>ಗಾಲಿಕುರ್ಚಿ ವ್ಯವಸ್ಥೆ:</strong></div><div class="bigfact-description"> 12ನೇ ಸಂಖ್ಯೆಯ ಪ್ರವೇಶದ್ವಾರದಲ್ಲಿ ಗಾಲಿ ಕುರ್ಚಿ ಸೇವೆಯನ್ನು ಅಗತ್ಯವಿದ್ದವರಿಗೆ ನೀಡುವ ವ್ಯವಸ್ಥೆ ಮಾಡಲಾಗಿದೆ ಎಂದು ಕೆಎಸ್ಸಿಎ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. </div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>