ರಾಜನಗರದ ಕೆಎಸ್ಸಿಎ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಧಾರವಾಡದ ಕ್ರಿಕೆಟ್ ಕ್ಲಬ್ ಆಫ್ ಕರ್ನಾಟಕ (ಸಿಸಿಕೆ) ‘ಎ’ ತಂಡ 43.3 ಓವರ್ಗಳಲ್ಲಿ 156 ರನ್ ಗಳಿಸಿತು. ಮಂದಬೆಳಕು ಹಾಗೂ ಮಳೆ ಅಡ್ಡಿಯಾದ್ದರಿಂದ 148 ರನ್ ಗಳಿಸುವ ಪರಿಷ್ಕೃತ ಗುರಿ ನೀಡಲಾಯಿತು. ಈ ಗುರಿಯನ್ನು ಬಿಡಿಕೆ 32.1 ಓವರ್ಗಳಲ್ಲಿ ತಲುಪಿತು. ಶಿಶಿರ್ ಭವಾನೆ (ಅಜೇಯ 60) ಬ್ಯಾಟಿಂಗ್ ಮೂಲಕ ಮಿಂಚಿದರು.