<p><strong>ಬೆಂಗಳೂರು: </strong>ಮಯಂಕ್ ಅಗರವಾಲ್ ಮತ್ತು ಮನೀಷ್ ಪಾಂಡೆ ಅವರು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಆಯೋಜಿಸಲಿರುವ ಮಹಾರಾಜ ಟ್ರೋಫಿ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಕ್ರಮವಾಗಿ ಕಲ್ಯಾಣಿ ಬೆಂಗಳೂರು ಬ್ಲಾಸ್ಟರ್ಸ್ ಮತ್ತು ಗುಲ್ಬರ್ಗಾ ಮಿಸ್ಟಿಕ್ಸ್ ತಂಡದ ಪರ ಕಣಕ್ಕಿಳಿಯಲಿದ್ದಾರೆ.</p>.<p>ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಡ್ರಾಫ್ಟ್ ಮೂಲಕ ಆಟಗಾರರನ್ನು ಆಯ್ಕೆ ಮಾಡಲಾಯಿತು.ಆಗಸ್ಟ್ 7ರಿಂದ ಮೈಸೂರಿನಲ್ಲಿ ಟೂರ್ನಿ ಆರಂಭವಾಗಲಿದೆ.</p>.<p>ಬ್ಯಾಟರ್ ಕರುಣ್ ನಾಯರ್ ಮೈಸೂರು ವಾರಿಯರ್ಸ್, ಆಲ್ರೌಂಡರ್ ಕೆ.ಗೌತಮ್ ಶಿವಮೊಗ್ಗ ಸ್ಟ್ರೈಕರ್ಸ್, ಅಭಿನವ್ ಮನೋಹರ್ ಮಂಗಳೂರು ಯುನೈಟೆಡ್ ಮತ್ತು ವೇಗದ ಬೌಲರ್ ಅಭಿಮನ್ಯು ಮಿಥುನ್ ಹುಬ್ಬಳ್ಳಿ ಟೈಗರ್ಸ್ ಪಾಲಾದರು.</p>.<p>ಆರೂ ತಂಡಗಳ ಮಾಲೀಕರು ಮೊದಲಿಗೆ ಕೋಚ್ಗಳನ್ನು ಆಯ್ಕೆ ಮಾಡಿಕೊಂಡರು. ಬಳಿಕ ಆಟಗಾರರ ಆಯ್ಕೆ ನಡೆಯಿತು. ಆಟಗಾರರನ್ನು ಎ,ಬಿ.ಸಿ,ಡಿ ಗುಂಪುಗಳಾಗಿ ವರ್ಗೀಕರಿಸಲಾಗಿತ್ತು. ಎ ಗುಂಪಿನಲ್ಲಿ ಭಾರತ ಮತ್ತು ಐಪಿಎಲ್ ತಂಡದಲ್ಲಿ ಆಡಿದವರು, ಬಿ ಗುಂಪಿನಲ್ಲಿ ರಾಜ್ಯ ತಂಡ ಪ್ರತಿನಿಧಿಸಿದವರು, ಸಿ ಗುಂಪಿನಲ್ಲಿ 19, 24, 25 ವರ್ಷದೊಳಗಿನ ರಾಜ್ಯ ತಂಡವನ್ನು ಪ್ರತಿನಿಧಿಸಿದವರು ಹಾಗೂ ಇನ್ನುಳಿದ ಆಟಗಾರರು ಡಿ ಗುಂಪಿನಲ್ಲಿ ಇದ್ದರು.</p>.<p>ಡ್ರಾಫ್ಟ್ನಲ್ಲಿ ಒಟ್ಟು 740 ಆಟಗಾರರಿದ್ದರು. ‘ಎ’ ಗುಂಪಿನಲ್ಲಿ 14, ‘ಬಿ’ಯಲ್ಲಿ 32, ‘ಸಿ’ಯಲ್ಲಿ 111 ಮತ್ತು ಡಿ ಗುಂಪಿನಲ್ಲಿ 583 ಆಟಗಾರರು ಲಭ್ಯ ಇದ್ದರು.</p>.<p>ಟೂರ್ನಿಯ ಉದ್ಘಾಟನೆಯು ಮೈಸೂರಿನಲ್ಲಿ ನಡೆಯಲಿದ್ದು ಒಟ್ಟು 18 ಪಂದ್ಯಗಳು ಅಲ್ಲಿ ನಡೆಯಲಿವೆ. ಆಗಸ್ಟ್ 26ರಂದು ಫೈನಲ್ ಸೇರಿದಂತೆ 16 ಪಂದ್ಯಗಳು ಬೆಂಗಳೂರಿನಲ್ಲಿ ನಡೆಯಲಿವೆ.</p>.<p>ಈ ಸಂದರ್ಭದಲ್ಲಿ ಕೆಎಸ್ಸಿಎ ಅಧ್ಯಕ್ಷ ರೋಜರ್ ಬಿನ್ನಿ, ಉಪಾಧ್ಯಕ್ಷ ಜೆ.ಅಭಿರಾಮ್, ಕಾರ್ಯದರ್ಶಿ ಸಂತೋಷ್ ಮೆನನ್, ಜಂಟಿ ಕಾರ್ಯದರ್ಶಿ ಶಾವೀರ್ ತಾರಾಪುರೆ, ಖಜಾಂಚಿ ವಿನಯ್ ಮೃತ್ಯುಂಜಯ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಮಯಂಕ್ ಅಗರವಾಲ್ ಮತ್ತು ಮನೀಷ್ ಪಾಂಡೆ ಅವರು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಆಯೋಜಿಸಲಿರುವ ಮಹಾರಾಜ ಟ್ರೋಫಿ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಕ್ರಮವಾಗಿ ಕಲ್ಯಾಣಿ ಬೆಂಗಳೂರು ಬ್ಲಾಸ್ಟರ್ಸ್ ಮತ್ತು ಗುಲ್ಬರ್ಗಾ ಮಿಸ್ಟಿಕ್ಸ್ ತಂಡದ ಪರ ಕಣಕ್ಕಿಳಿಯಲಿದ್ದಾರೆ.</p>.<p>ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಡ್ರಾಫ್ಟ್ ಮೂಲಕ ಆಟಗಾರರನ್ನು ಆಯ್ಕೆ ಮಾಡಲಾಯಿತು.ಆಗಸ್ಟ್ 7ರಿಂದ ಮೈಸೂರಿನಲ್ಲಿ ಟೂರ್ನಿ ಆರಂಭವಾಗಲಿದೆ.</p>.<p>ಬ್ಯಾಟರ್ ಕರುಣ್ ನಾಯರ್ ಮೈಸೂರು ವಾರಿಯರ್ಸ್, ಆಲ್ರೌಂಡರ್ ಕೆ.ಗೌತಮ್ ಶಿವಮೊಗ್ಗ ಸ್ಟ್ರೈಕರ್ಸ್, ಅಭಿನವ್ ಮನೋಹರ್ ಮಂಗಳೂರು ಯುನೈಟೆಡ್ ಮತ್ತು ವೇಗದ ಬೌಲರ್ ಅಭಿಮನ್ಯು ಮಿಥುನ್ ಹುಬ್ಬಳ್ಳಿ ಟೈಗರ್ಸ್ ಪಾಲಾದರು.</p>.<p>ಆರೂ ತಂಡಗಳ ಮಾಲೀಕರು ಮೊದಲಿಗೆ ಕೋಚ್ಗಳನ್ನು ಆಯ್ಕೆ ಮಾಡಿಕೊಂಡರು. ಬಳಿಕ ಆಟಗಾರರ ಆಯ್ಕೆ ನಡೆಯಿತು. ಆಟಗಾರರನ್ನು ಎ,ಬಿ.ಸಿ,ಡಿ ಗುಂಪುಗಳಾಗಿ ವರ್ಗೀಕರಿಸಲಾಗಿತ್ತು. ಎ ಗುಂಪಿನಲ್ಲಿ ಭಾರತ ಮತ್ತು ಐಪಿಎಲ್ ತಂಡದಲ್ಲಿ ಆಡಿದವರು, ಬಿ ಗುಂಪಿನಲ್ಲಿ ರಾಜ್ಯ ತಂಡ ಪ್ರತಿನಿಧಿಸಿದವರು, ಸಿ ಗುಂಪಿನಲ್ಲಿ 19, 24, 25 ವರ್ಷದೊಳಗಿನ ರಾಜ್ಯ ತಂಡವನ್ನು ಪ್ರತಿನಿಧಿಸಿದವರು ಹಾಗೂ ಇನ್ನುಳಿದ ಆಟಗಾರರು ಡಿ ಗುಂಪಿನಲ್ಲಿ ಇದ್ದರು.</p>.<p>ಡ್ರಾಫ್ಟ್ನಲ್ಲಿ ಒಟ್ಟು 740 ಆಟಗಾರರಿದ್ದರು. ‘ಎ’ ಗುಂಪಿನಲ್ಲಿ 14, ‘ಬಿ’ಯಲ್ಲಿ 32, ‘ಸಿ’ಯಲ್ಲಿ 111 ಮತ್ತು ಡಿ ಗುಂಪಿನಲ್ಲಿ 583 ಆಟಗಾರರು ಲಭ್ಯ ಇದ್ದರು.</p>.<p>ಟೂರ್ನಿಯ ಉದ್ಘಾಟನೆಯು ಮೈಸೂರಿನಲ್ಲಿ ನಡೆಯಲಿದ್ದು ಒಟ್ಟು 18 ಪಂದ್ಯಗಳು ಅಲ್ಲಿ ನಡೆಯಲಿವೆ. ಆಗಸ್ಟ್ 26ರಂದು ಫೈನಲ್ ಸೇರಿದಂತೆ 16 ಪಂದ್ಯಗಳು ಬೆಂಗಳೂರಿನಲ್ಲಿ ನಡೆಯಲಿವೆ.</p>.<p>ಈ ಸಂದರ್ಭದಲ್ಲಿ ಕೆಎಸ್ಸಿಎ ಅಧ್ಯಕ್ಷ ರೋಜರ್ ಬಿನ್ನಿ, ಉಪಾಧ್ಯಕ್ಷ ಜೆ.ಅಭಿರಾಮ್, ಕಾರ್ಯದರ್ಶಿ ಸಂತೋಷ್ ಮೆನನ್, ಜಂಟಿ ಕಾರ್ಯದರ್ಶಿ ಶಾವೀರ್ ತಾರಾಪುರೆ, ಖಜಾಂಚಿ ವಿನಯ್ ಮೃತ್ಯುಂಜಯ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>