‘ನಾವೀಗ ಸಂದಿಗ್ಧತೆಯ ಕಾಲಘಟ್ಟದಲ್ಲಿ ಬದುಕುತ್ತಿದ್ದೇವೆ. ಎಲ್ಲರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ನಾವು ಕೆಲವೊಂದು ಶಿಫಾರಸುಗಳನ್ನು ಮಾಡಿದ್ದೇವೆ. ಚೆಂಡಿನ ಮೇಲೆ ಎಂಜಲು ಲೇಪಿಸುವುದರಿಂದ ಕೊರೊನಾ ವೈರಸ್ನ ಸೋಂಕು ಹರಡುವ ಅಪಾಯ ಹೆಚ್ಚಿರುತ್ತದೆ. ಹೀಗಾಗಿ ಈ ಪದ್ಧತಿಗೆ ತಿಲಾಂಜಲಿ ಇಡಬೇಕೆಂದು ಸೂಚಿಸಿದ್ದೇವೆ’ ಎಂದು ಕುಂಬ್ಳೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.