<p><strong>ಬೆಂಗಳೂರು</strong>: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಮಾದರಿಯಲ್ಲಿಯೇ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು ಐವರು ಸದಸ್ಯರ ಕ್ರಿಕೆಟ್ ಸಲಹಾ ಸಮಿತಿ (ಸಿಎಸಿ)ಯನ್ನು ನೇಮಕ ಮಾಡಿದೆ.</p>.<p>ಈ ಸಮಿತಿಯಲ್ಲಿ ಭಾರತ ತಂಡದ ಮಾಜಿ ಆಟಗಾರರಾದ ಅನಿಲ್ ಕುಂಬ್ಳೆ, ಜಾವಗಲ್ ಶ್ರೀನಾಥ್, ಸುನೀಲ್ ಜೋಶಿ, ವಿಜಯ್ ಭಾರದ್ವಾಜ್ ಮತ್ತು ಜಯಶ್ರೀ ದೊರೈಸ್ವಾಮಿ ಅವರಿದ್ದಾರೆ. </p>.<p>ಸಂಸ್ಥೆಯ ನೂತನ ಆಡಳಿತ ಸಮಿತಿಯ ಸಭೆಯು ಮಂಗಳವಾರ ನಡೆಯಿತು. ಇದರಲ್ಲಿ ಸೀನಿಯರ್ ಮತ್ತು ವಿವಿಧ ವಯೋಮಿತಿಯ ತಂಡಗಳ ಆಯ್ಕೆ ಸಮಿತಿಗಳನ್ನೂ ನೇಮಕ ಮಾಡಲಾಯಿತು. </p>.<p>ಪುರುಷರ ಸೀನಿಯರ್ ಮತ್ತು 23 ವರ್ಷದೊಳಗಿನವರ ಸಮಿತಿಯ ಮುಖ್ಯಸ್ಥರಾಗಿ ಕರ್ನಾಟಕ ತಂಡದ ಮಾಜಿ ಆಟಗಾರ ಅಮಿತ್ ವರ್ಮಾ ಅವರನ್ನು ನೇಮಕ ಮಾಡಲಾಯಿತು. </p>.<p>23 ವರ್ಷದೊಳಗಿನವರ ತಂಡದ ತರಬೇತುದಾರರಾಗಿ ಗಣೇಶ್ ಸತೀಶ್ ಮತ್ತು ದೀಪಕ್ ಚೌಗುಲೆ ಅವರನ್ನು ನೇಮಕ ಮಾಡಲಾಯಿತು. ಇದಕ್ಕೂ ಮುನ್ನ ಸೋಮಶೇಖರ್ ಶಿರಗುಪ್ಪಿ ಮತ್ತು ಎಸ್.ಆರ್. ದೀಪು ಅವರು ಈ ಸ್ಥಾನಗಳಲ್ಲಿದ್ದರು. ಇದೇ ಸಂದರ್ಭದಲ್ಲಿ ವಿನಯ್ ಮೃತ್ಯುಂಜಯ ಅವರನ್ನು ಕೆಎಸ್ಸಿಎ ವಕ್ತಾರರನ್ನಾಗಿ ನೇಮಿಸಲಾಯಿತು. </p>.<p>‘ಮಹಿಳಾ ಆಯ್ಕೆ ಸಮಿತಿಯ ನೇಮಕದ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ. ಶೀಘ್ರದಲ್ಲಿಯೇ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ವಿನಯ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><strong>ಸಮಿತಿಗಳು ಹೀಗಿವೆ: </strong></p>.<p>ಕ್ರಿಕೆಟ್ ಸಲಹಾ ಸಮಿತಿ: ಅನಿಲ್ ಕುಂಬ್ಳೆ, ಜಾವಗಲ್ ಶ್ರೀನಾಥ್, ಸುನಿಲ್ ಜೋಶಿ, ವಿಜಯ್ ಭಾರದ್ವಾಜ್, ಜಯಶ್ರೀ ದೊರೈಸ್ವಾಮಿ</p>.<p>ಪುರುಷರು: ಸೀನಿಯರ್ ಮತ್ತು 23 ವರ್ಷದೊಳಗಿನವರ ಆಯ್ಕೆ ಸಮಿತಿ: ಅಮಿತ್ ವರ್ಮಾ (ಮುಖ್ಯಸ್ಥ), ಎಸ್. ಪ್ರಕಾಶ್, ತೇಜಪಾಲ್ ಕೊಠಾರಿ, ಸುನಿಲ್ ರಾಜು. </p>.<p>ಜೂನಿಯರ್ ಸಮಿತಿಗಳು (19, 16 ಮತ್ತು 14 ವರ್ಷದವರು): ಜಿ.ಕೆ. ಅನಿಲ್ ಕುಮಾರ್ (ಮುಖ್ಯಸ್ಥ), ಸಿ. ರಾಘವೇಂದ್ರ, ಜಿ.ಎನ್. ಉಮೇಶ್, ಡಿ.ಎಸ್. ಅನಂತ್</p>.<p>ಕೋಚ್(23 ವರ್ಷದೊಳಗಿನ ಪುರುಷರ ತಂಡ): ಗಣೇಶ್ ಸತೀಶ್ ಮತ್ತು ದೀಪಕ್ ಚೌಗುಲೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಮಾದರಿಯಲ್ಲಿಯೇ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು ಐವರು ಸದಸ್ಯರ ಕ್ರಿಕೆಟ್ ಸಲಹಾ ಸಮಿತಿ (ಸಿಎಸಿ)ಯನ್ನು ನೇಮಕ ಮಾಡಿದೆ.</p>.<p>ಈ ಸಮಿತಿಯಲ್ಲಿ ಭಾರತ ತಂಡದ ಮಾಜಿ ಆಟಗಾರರಾದ ಅನಿಲ್ ಕುಂಬ್ಳೆ, ಜಾವಗಲ್ ಶ್ರೀನಾಥ್, ಸುನೀಲ್ ಜೋಶಿ, ವಿಜಯ್ ಭಾರದ್ವಾಜ್ ಮತ್ತು ಜಯಶ್ರೀ ದೊರೈಸ್ವಾಮಿ ಅವರಿದ್ದಾರೆ. </p>.<p>ಸಂಸ್ಥೆಯ ನೂತನ ಆಡಳಿತ ಸಮಿತಿಯ ಸಭೆಯು ಮಂಗಳವಾರ ನಡೆಯಿತು. ಇದರಲ್ಲಿ ಸೀನಿಯರ್ ಮತ್ತು ವಿವಿಧ ವಯೋಮಿತಿಯ ತಂಡಗಳ ಆಯ್ಕೆ ಸಮಿತಿಗಳನ್ನೂ ನೇಮಕ ಮಾಡಲಾಯಿತು. </p>.<p>ಪುರುಷರ ಸೀನಿಯರ್ ಮತ್ತು 23 ವರ್ಷದೊಳಗಿನವರ ಸಮಿತಿಯ ಮುಖ್ಯಸ್ಥರಾಗಿ ಕರ್ನಾಟಕ ತಂಡದ ಮಾಜಿ ಆಟಗಾರ ಅಮಿತ್ ವರ್ಮಾ ಅವರನ್ನು ನೇಮಕ ಮಾಡಲಾಯಿತು. </p>.<p>23 ವರ್ಷದೊಳಗಿನವರ ತಂಡದ ತರಬೇತುದಾರರಾಗಿ ಗಣೇಶ್ ಸತೀಶ್ ಮತ್ತು ದೀಪಕ್ ಚೌಗುಲೆ ಅವರನ್ನು ನೇಮಕ ಮಾಡಲಾಯಿತು. ಇದಕ್ಕೂ ಮುನ್ನ ಸೋಮಶೇಖರ್ ಶಿರಗುಪ್ಪಿ ಮತ್ತು ಎಸ್.ಆರ್. ದೀಪು ಅವರು ಈ ಸ್ಥಾನಗಳಲ್ಲಿದ್ದರು. ಇದೇ ಸಂದರ್ಭದಲ್ಲಿ ವಿನಯ್ ಮೃತ್ಯುಂಜಯ ಅವರನ್ನು ಕೆಎಸ್ಸಿಎ ವಕ್ತಾರರನ್ನಾಗಿ ನೇಮಿಸಲಾಯಿತು. </p>.<p>‘ಮಹಿಳಾ ಆಯ್ಕೆ ಸಮಿತಿಯ ನೇಮಕದ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ. ಶೀಘ್ರದಲ್ಲಿಯೇ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ವಿನಯ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><strong>ಸಮಿತಿಗಳು ಹೀಗಿವೆ: </strong></p>.<p>ಕ್ರಿಕೆಟ್ ಸಲಹಾ ಸಮಿತಿ: ಅನಿಲ್ ಕುಂಬ್ಳೆ, ಜಾವಗಲ್ ಶ್ರೀನಾಥ್, ಸುನಿಲ್ ಜೋಶಿ, ವಿಜಯ್ ಭಾರದ್ವಾಜ್, ಜಯಶ್ರೀ ದೊರೈಸ್ವಾಮಿ</p>.<p>ಪುರುಷರು: ಸೀನಿಯರ್ ಮತ್ತು 23 ವರ್ಷದೊಳಗಿನವರ ಆಯ್ಕೆ ಸಮಿತಿ: ಅಮಿತ್ ವರ್ಮಾ (ಮುಖ್ಯಸ್ಥ), ಎಸ್. ಪ್ರಕಾಶ್, ತೇಜಪಾಲ್ ಕೊಠಾರಿ, ಸುನಿಲ್ ರಾಜು. </p>.<p>ಜೂನಿಯರ್ ಸಮಿತಿಗಳು (19, 16 ಮತ್ತು 14 ವರ್ಷದವರು): ಜಿ.ಕೆ. ಅನಿಲ್ ಕುಮಾರ್ (ಮುಖ್ಯಸ್ಥ), ಸಿ. ರಾಘವೇಂದ್ರ, ಜಿ.ಎನ್. ಉಮೇಶ್, ಡಿ.ಎಸ್. ಅನಂತ್</p>.<p>ಕೋಚ್(23 ವರ್ಷದೊಳಗಿನ ಪುರುಷರ ತಂಡ): ಗಣೇಶ್ ಸತೀಶ್ ಮತ್ತು ದೀಪಕ್ ಚೌಗುಲೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>