<p>ಈ ಬಾರಿಯ ಐಪಿಎಲ್ನಲ್ಲಿ ಆಡಿರುವ 5 ಪಂದ್ಯಗಳಲ್ಲಿ 4ರಲ್ಲಿ ಸೋಲು ಕಂಡಿರುವ ಕಿಂಗ್ಸ್ ಇಲವೆನ್ ಪಂಜಾಬ್ ತಂಡ ಪಾಯಿಂಟ್ಸ್ ಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕೆ ಕುಸಿದಿದೆ. ಈ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಕಿಂಗ್ಸ್ ತಂಡದ ಪ್ರಮುಖ ಬ್ಯಾಟ್ಸ್ಮನ್ ಮನ್ದೀಪ್ ಸಿಂಗ್, ಉಳಿದಿರುವ 9 ಪಂದ್ಯಗಳಲ್ಲಿ ಸಾಧ್ಯವಾದಷ್ಟು ಉತ್ತಮ ಪ್ರದರ್ಶನ ನೀಡಬೇಕಿದೆಎಂದು ಹೇಳಿದ್ದಾರೆ.</p>.<p>‘ಇಲ್ಲಿಂದ ಮುಂದೆ ಸಾಗುವುದು ಖಂಡಿತಾ ಕಠಿಣವಾಗಿದೆ. ಉಳಿದಿರುವ 9 ಪಂದ್ಯಗಳಲ್ಲಿ ನಾವು ಕನಿಷ್ಠ 7 ಗೆಲುವು ಸಾಧಿಸಬೇಕಿದೆ. ಇದು ಸವಾಲಿನ ಸಂಗತಿ. ಆದರೆ, ನಮ್ಮ ಪ್ರಮುಖ ಸಮಸ್ಯೆ ಬೌಲಿಂಗ್. ಬೌಲಿಂಗ್ನಲ್ಲಿ ಸುಧಾರಣೆ ಕಾಣಲು ಕಷ್ಟಪಡುತ್ತಿದ್ದೇವೆ. ಖಂಡಿತ ನಾವು ಚೇತರಿಕೆ ಕಾಣಲಿದ್ದು, ಉತ್ತಮ ಪ್ರದರ್ಶನ ನೀಡಲಿದ್ದೇವೆ’ ಎಂದಿದ್ದಾರೆ.</p>.<p>ಮಾಧ್ಯಮದವರೆದುರು ಮಾತನಾಡಿರುವ ಅವರು,‘ನಾವು ಹೋರಾಟದ ಮನಸ್ಥಿತಿಯನ್ನು ಕಾಪಾಡಿಕೊಂಡು ಮುನ್ನಡೆಯಬೇಕಿದೆ. ಈ ಸಮಯದಲ್ಲಿ ನಮಗೆ ಒಂದು ಗೆಲುವು ಅಗತ್ಯವಾಗಿದೆ ಎಂದು ನನಗನಿಸುತ್ತದೆ’ ಎಂದು ಅಭಿಪ್ರಾಯ ಪಟ್ಟಿದ್ದಾರೆ.</p>.<p>ಭಾನುವಾರ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ಕಿಂಗ್ಸ್ ವಿರುದ್ಧ ಪಂಜಾಬ್ 10 ವಿಕೆಟ್ ಅಂತರದ ಸೋಲು ಕಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ್ದ ಪಂಜಾಬ್ 178 ರನ್ ಗಳಿಸಿತ್ತು. ಈ ಗುರಿಯನ್ನು ಚೆನ್ನೈ ತಂಡ ಒಂದೂ ವಿಕೆಟ್ ಕಳೆದುಕೊಳ್ಳದೆ ದಾಟಿತ್ತು. ಹಿಂದಿನ ಪಂದ್ಯಗಳಲ್ಲಿ ವಿಫಲವಾಗಿದ್ದ ಕರುಣ್ ನಾಯರ್ ಬದಲು ಈ ಪಂದ್ಯದಲ್ಲಿ ಸ್ಥಾನ ಪಡೆದಿದ್ದ ಮನ್ದೀಪ್,ಕೇವಲ 16 ಎಸೆತಗಳಲ್ಲಿ 2 ಸಿಕ್ಸರ್ ಸಹಿತ 27 ರನ್ ಗಳಿಸಿ ಭರವಸೆ ಮೂಡಿಸಿದ್ದಾರೆ.</p>.<p>ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೂಪರ್ ಓವರ್ನಲ್ಲಿ ಸೋಲು ಕಂಡಿದ್ದ ಪಂಜಾಬ್, ಎರಡನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 97 ರನ್ ಅಂತರದ ಗೆಲುವು ಕಂಡಿತ್ತು. ಆದರೆ ಮೂರನೇ ಪಂದ್ಯದಲ್ಲಿ ಮತ್ತೆ ವಿಫಲವಾಗಿದ್ದ ಈ ತಂಡ ರಾಜಸ್ಥಾನ ರಾಯಲ್ಸ್ ವಿರುದ್ಧ 4 ವಿಕೆಟ್ ಗಳಿಂದ ಹಾಗೂ ನಾಲ್ಕನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 48 ರನ್ ಅಂತರದಿಂದ ಸೋಲು ಕಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಈ ಬಾರಿಯ ಐಪಿಎಲ್ನಲ್ಲಿ ಆಡಿರುವ 5 ಪಂದ್ಯಗಳಲ್ಲಿ 4ರಲ್ಲಿ ಸೋಲು ಕಂಡಿರುವ ಕಿಂಗ್ಸ್ ಇಲವೆನ್ ಪಂಜಾಬ್ ತಂಡ ಪಾಯಿಂಟ್ಸ್ ಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕೆ ಕುಸಿದಿದೆ. ಈ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಕಿಂಗ್ಸ್ ತಂಡದ ಪ್ರಮುಖ ಬ್ಯಾಟ್ಸ್ಮನ್ ಮನ್ದೀಪ್ ಸಿಂಗ್, ಉಳಿದಿರುವ 9 ಪಂದ್ಯಗಳಲ್ಲಿ ಸಾಧ್ಯವಾದಷ್ಟು ಉತ್ತಮ ಪ್ರದರ್ಶನ ನೀಡಬೇಕಿದೆಎಂದು ಹೇಳಿದ್ದಾರೆ.</p>.<p>‘ಇಲ್ಲಿಂದ ಮುಂದೆ ಸಾಗುವುದು ಖಂಡಿತಾ ಕಠಿಣವಾಗಿದೆ. ಉಳಿದಿರುವ 9 ಪಂದ್ಯಗಳಲ್ಲಿ ನಾವು ಕನಿಷ್ಠ 7 ಗೆಲುವು ಸಾಧಿಸಬೇಕಿದೆ. ಇದು ಸವಾಲಿನ ಸಂಗತಿ. ಆದರೆ, ನಮ್ಮ ಪ್ರಮುಖ ಸಮಸ್ಯೆ ಬೌಲಿಂಗ್. ಬೌಲಿಂಗ್ನಲ್ಲಿ ಸುಧಾರಣೆ ಕಾಣಲು ಕಷ್ಟಪಡುತ್ತಿದ್ದೇವೆ. ಖಂಡಿತ ನಾವು ಚೇತರಿಕೆ ಕಾಣಲಿದ್ದು, ಉತ್ತಮ ಪ್ರದರ್ಶನ ನೀಡಲಿದ್ದೇವೆ’ ಎಂದಿದ್ದಾರೆ.</p>.<p>ಮಾಧ್ಯಮದವರೆದುರು ಮಾತನಾಡಿರುವ ಅವರು,‘ನಾವು ಹೋರಾಟದ ಮನಸ್ಥಿತಿಯನ್ನು ಕಾಪಾಡಿಕೊಂಡು ಮುನ್ನಡೆಯಬೇಕಿದೆ. ಈ ಸಮಯದಲ್ಲಿ ನಮಗೆ ಒಂದು ಗೆಲುವು ಅಗತ್ಯವಾಗಿದೆ ಎಂದು ನನಗನಿಸುತ್ತದೆ’ ಎಂದು ಅಭಿಪ್ರಾಯ ಪಟ್ಟಿದ್ದಾರೆ.</p>.<p>ಭಾನುವಾರ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ಕಿಂಗ್ಸ್ ವಿರುದ್ಧ ಪಂಜಾಬ್ 10 ವಿಕೆಟ್ ಅಂತರದ ಸೋಲು ಕಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ್ದ ಪಂಜಾಬ್ 178 ರನ್ ಗಳಿಸಿತ್ತು. ಈ ಗುರಿಯನ್ನು ಚೆನ್ನೈ ತಂಡ ಒಂದೂ ವಿಕೆಟ್ ಕಳೆದುಕೊಳ್ಳದೆ ದಾಟಿತ್ತು. ಹಿಂದಿನ ಪಂದ್ಯಗಳಲ್ಲಿ ವಿಫಲವಾಗಿದ್ದ ಕರುಣ್ ನಾಯರ್ ಬದಲು ಈ ಪಂದ್ಯದಲ್ಲಿ ಸ್ಥಾನ ಪಡೆದಿದ್ದ ಮನ್ದೀಪ್,ಕೇವಲ 16 ಎಸೆತಗಳಲ್ಲಿ 2 ಸಿಕ್ಸರ್ ಸಹಿತ 27 ರನ್ ಗಳಿಸಿ ಭರವಸೆ ಮೂಡಿಸಿದ್ದಾರೆ.</p>.<p>ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೂಪರ್ ಓವರ್ನಲ್ಲಿ ಸೋಲು ಕಂಡಿದ್ದ ಪಂಜಾಬ್, ಎರಡನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 97 ರನ್ ಅಂತರದ ಗೆಲುವು ಕಂಡಿತ್ತು. ಆದರೆ ಮೂರನೇ ಪಂದ್ಯದಲ್ಲಿ ಮತ್ತೆ ವಿಫಲವಾಗಿದ್ದ ಈ ತಂಡ ರಾಜಸ್ಥಾನ ರಾಯಲ್ಸ್ ವಿರುದ್ಧ 4 ವಿಕೆಟ್ ಗಳಿಂದ ಹಾಗೂ ನಾಲ್ಕನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 48 ರನ್ ಅಂತರದಿಂದ ಸೋಲು ಕಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>