ತನಿಖೆ ಆರಂಭಿಸಿದ್ದ ವಿಶೇಷ ದಳವು ಪ್ರಶಸ್ತಿ ಸುತ್ತಿನ ಹಣಾಹಣಿಯಲ್ಲಿ ತಂಡವನ್ನು ಮುನ್ನಡೆಸಿದ್ದ ಕುಮಾರ ಸಂಗಕ್ಕಾರ, ಹಿರಿಯ ಆಟಗಾರ ಮಾಹೇಲ ಜಯವರ್ಧನೆ, ಆರಂಭಿಕ ಆಟಗಾರ ಉಪುಲ್ ತರಂಗ ಹಾಗೂ ಆಗ ತಂಡದ ಆಯ್ಕೆ ಸಮಿತಿ ಮುಖ್ಯಸ್ಥರಾಗಿದ್ದ ಅರವಿಂದ ಡಿಸಿಲ್ವಾ ಅವರ ವಿಚಾರಣೆ ನಡೆಸಿ ಹೇಳಿಕೆಗಳನ್ನು ದಾಖಲಿಸಿಕೊಂಡಿತ್ತು.