<p><strong>ಕೊಲಂಬೊ: </strong>ವಿದೇಶಿ ಆಟಗಾರರ ಅಲಭ್ಯತೆಯ ಹಿನ್ನೆಲೆಯಲ್ಲಿ ಲಂಕಾ ಪ್ರೀಮಿಯರ್ ಲೀಗ್ ಟೂರ್ನಿಯನ್ನು ಶ್ರೀಲಂಕಾ ಕ್ರಿಕೆಟ್ (ಎಸ್ಎಲ್ಸಿ) ಮುಂದೂಡಿದೆ. ದ್ವೀಪರಾಷ್ಟ್ರದಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಏರುಗತಿಯಲ್ಲಿ ಸಾಗುತ್ತಿರುವುದರಿಂದ ಅನ್ಯದೇಶದಿಂದ ಆಗಮಿಸುವ ಆಟಗಾರರು 14 ದಿನಗಳ ಕ್ವಾರಂಟೈನ್ಗೆ ಒಳಗಾಗಬೇಕಾಗಿತ್ತು. ಹೀಗಾಗಿ ಆ ಆಟಗಾರರು ಟೂರ್ನಿಯಿಂದ ಹಿಂದೆ ಸರಿಯುವ ಸಾಧ್ಯತೆಯಿದೆ.</p>.<p>ಮೊದಲ ಬಾರಿ ನಿಗದಿಯಾಗಿರುವ ಈ ಟ್ವೆಂಟಿ–20 ಲೀಗ್ ಆಗಸ್ಟ್ 28ರಂದು ಆರಂಭವಾಗಬೇಕಿತ್ತು. ಆದರೆ ಇದಕ್ಕೆ ಅಲ್ಲಿಯ ಸರ್ಕಾರ ಹಾಗೂ ಆರೋಗ್ಯ ಸಚಿವಾಲಯದ ಅನುಮತಿ ಅಗತ್ಯವಿತ್ತು. ಆದರೆ 14 ದಿನಗಳ ಕ್ವಾರಂಟೈನ್ ಇರಬೇಕೆಂಬ ನಿಯಮವೇ ವಿದೇಶಿ ಆಟಗಾರರ ವಿಷಯದಲ್ಲಿ ಸಮಸ್ಯೆಯಾಗಿ ಪರಿಣಮಿಸಿದೆ.</p>.<p>‘ದೇಶದ ಆರೋಗ್ಯಾಧಿಕಾರಿಗಳೊಂದಿಗೆ ನಾವು ಚರ್ಚೆ ನಡೆಸಿದ್ದೇವೆ. ವಿದೇಶಿ ಆಟಗಾರರಿಗೆ 14 ದಿನಗಳ ಕ್ವಾರಂಟೈನ್ಕಡ್ಡಾಯವಾಗಿದೆ. ಹೀಗಾಗಿ ಈ ತಿಂಗಳ ಅಂತ್ಯದಲ್ಲಿ ಟೂರ್ನಿಯನ್ನು ನಡೆಸುವುದು ಕಷ್ಟ‘ ಎಂದು ಎಸ್ಎಲ್ಸಿ ಅಧ್ಯಕ್ಷ ಶಮ್ಮಿ ಸಿಲ್ವಾ ಅವರು ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.</p>.<p>‘ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮುಗಿದ ಬಳಿಕ ನವೆಂಬರ್ ಮಧ್ಯಂತರದಲ್ಲಿ ಟೂರ್ನಿಯನ್ನು ನಡೆಸುವೆವು‘ ಎಂದು ಸಿಲ್ವಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<p>ಐಪಿಎಲ್ ಟೂರ್ನಿಯು ಸೆಪ್ಟೆಂಬರ್ 19ರಿಂದ ನವೆಂಬರ್ 10ರವರೆಗೆ ಯುಎಇಯಲ್ಲಿ ನಿಗದಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲಂಬೊ: </strong>ವಿದೇಶಿ ಆಟಗಾರರ ಅಲಭ್ಯತೆಯ ಹಿನ್ನೆಲೆಯಲ್ಲಿ ಲಂಕಾ ಪ್ರೀಮಿಯರ್ ಲೀಗ್ ಟೂರ್ನಿಯನ್ನು ಶ್ರೀಲಂಕಾ ಕ್ರಿಕೆಟ್ (ಎಸ್ಎಲ್ಸಿ) ಮುಂದೂಡಿದೆ. ದ್ವೀಪರಾಷ್ಟ್ರದಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಏರುಗತಿಯಲ್ಲಿ ಸಾಗುತ್ತಿರುವುದರಿಂದ ಅನ್ಯದೇಶದಿಂದ ಆಗಮಿಸುವ ಆಟಗಾರರು 14 ದಿನಗಳ ಕ್ವಾರಂಟೈನ್ಗೆ ಒಳಗಾಗಬೇಕಾಗಿತ್ತು. ಹೀಗಾಗಿ ಆ ಆಟಗಾರರು ಟೂರ್ನಿಯಿಂದ ಹಿಂದೆ ಸರಿಯುವ ಸಾಧ್ಯತೆಯಿದೆ.</p>.<p>ಮೊದಲ ಬಾರಿ ನಿಗದಿಯಾಗಿರುವ ಈ ಟ್ವೆಂಟಿ–20 ಲೀಗ್ ಆಗಸ್ಟ್ 28ರಂದು ಆರಂಭವಾಗಬೇಕಿತ್ತು. ಆದರೆ ಇದಕ್ಕೆ ಅಲ್ಲಿಯ ಸರ್ಕಾರ ಹಾಗೂ ಆರೋಗ್ಯ ಸಚಿವಾಲಯದ ಅನುಮತಿ ಅಗತ್ಯವಿತ್ತು. ಆದರೆ 14 ದಿನಗಳ ಕ್ವಾರಂಟೈನ್ ಇರಬೇಕೆಂಬ ನಿಯಮವೇ ವಿದೇಶಿ ಆಟಗಾರರ ವಿಷಯದಲ್ಲಿ ಸಮಸ್ಯೆಯಾಗಿ ಪರಿಣಮಿಸಿದೆ.</p>.<p>‘ದೇಶದ ಆರೋಗ್ಯಾಧಿಕಾರಿಗಳೊಂದಿಗೆ ನಾವು ಚರ್ಚೆ ನಡೆಸಿದ್ದೇವೆ. ವಿದೇಶಿ ಆಟಗಾರರಿಗೆ 14 ದಿನಗಳ ಕ್ವಾರಂಟೈನ್ಕಡ್ಡಾಯವಾಗಿದೆ. ಹೀಗಾಗಿ ಈ ತಿಂಗಳ ಅಂತ್ಯದಲ್ಲಿ ಟೂರ್ನಿಯನ್ನು ನಡೆಸುವುದು ಕಷ್ಟ‘ ಎಂದು ಎಸ್ಎಲ್ಸಿ ಅಧ್ಯಕ್ಷ ಶಮ್ಮಿ ಸಿಲ್ವಾ ಅವರು ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.</p>.<p>‘ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮುಗಿದ ಬಳಿಕ ನವೆಂಬರ್ ಮಧ್ಯಂತರದಲ್ಲಿ ಟೂರ್ನಿಯನ್ನು ನಡೆಸುವೆವು‘ ಎಂದು ಸಿಲ್ವಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<p>ಐಪಿಎಲ್ ಟೂರ್ನಿಯು ಸೆಪ್ಟೆಂಬರ್ 19ರಿಂದ ನವೆಂಬರ್ 10ರವರೆಗೆ ಯುಎಇಯಲ್ಲಿ ನಿಗದಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>