<p><strong>ನವದೆಹಲಿ:</strong> ಕಳೆದ ಬಾರಿ ಐಪಿಎಲ್ ಪಂದ್ಯದಲ್ಲಿ ಅನುಭವಿಸಿದ ಸೋಲು ಬಹಳಷ್ಟು ಕಲಿಸಿದೆ. ಆಡಳಿತ ಮಂಡಳಿಯಿಂದಲೂ ಸಾಕಷ್ಟು ಬೆಂಬಲ ದೊರೆಯಿತು. ಹೀಗಾಗಿಯೇ ಈ ಬಾರಿ ನಾವು ಗೆಲುವು ಸಾಧಿಸಲು ಸಾಧ್ಯವಾಯಿತು ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕಿ ಸ್ಮೃತಿ ಮಂದಾನ ಹೇಳಿದ್ದಾರೆ. </p><p>ಭಾನುವಾರ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ನಲ್ಲಿ 8 ವಿಕೆಟ್ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರ್ಸಿಬಿ ತಂಡ ಜಯಭೇರಿ ಬಾರಿಸಿತು. ಗೆಲುವಿನ ಬಳಿಕ ಸ್ಮೃತಿ ಮಂದಾನ ಮಾತನಾಡಿ ಖುಷಿ ಹಂಚಿಕೊಂಡರು.</p><p>‘ಕಳೆದ ವರ್ಷ ಆಟಗಾರ್ತಿಯರಾಗಿ, ನಾಯಕಿಯಾಗಿ ಮತ್ತು ತಂಡವಾಗಿ ಬಹಳಷ್ಟು ವಿಷಯಗಳನ್ನು ಕಲಿತಿದ್ದೇವೆ. ನಮ್ಮ ತಂಡದ ಬಗ್ಗೆ ಹೆಮ್ಮೆ ಪಡುತ್ತೇನೆ. ಹಲವು ಏರಿಳಿತಗಳನ್ನು ಅನುಭವಿಸಿದ್ದೇವೆ, ದೆಹಲಿಯಲ್ಲಿಯೇ ಎರಡು ಪಂದ್ಯದಲ್ಲಿ ಸೋಲು ಕಂಡಿದ್ದೆವು. ಇವೆಲ್ಲದರ ನಡುವೆಯೂ ಗೆಲುವು ಸಾಧಿಸಿರುವುದು ಖುಷಿ ನೀಡಿದೆ’ ಎಂದರು. </p><p>‘ಟ್ರೋಫಿ ಗೆದ್ದಿದ್ದು ನಾನೊಬ್ಬನೇ ಅಲ್ಲ, ತಂಡವೇ ಗೆದ್ದಿದೆ. ಫ್ರಾಂಚೈಸಿಯಾಗಿ ಆರ್ಸಿಬಿ ಗೆಲ್ಲುವುದು ನಿಜಕ್ಕೂ ವಿಶೇಷ. ಈ ಗೆಲುವು ಖಂಡಿತವಾಗಿಯೂ ಟಾಪ್ ಐದರಲ್ಲಿ ಒಂದಾಗಿದೆ. ಕಪ್ ಯಾವಾಗಲೂ ಬರುತ್ತದೆ. ಆದರೆ ಈ ಬಾರಿ ನಾನು ‘ಈ ಸಲ ಕಪ್ ನಮ್ದು’ ಎಂದು ಹೇಳಲು ಬಯಸುತ್ತೇನೆ’ ಎಂದು ಹರ್ಷ ವ್ಯಕ್ತಪಡಿಸಿದರು.<strong><br></strong></p><p>ಆರ್ಸಿಬಿ ಪುರುಷರ ತಂಡವು 16 ವರ್ಷಗಳಿಂದ ಪ್ರಶಸ್ತಿ ಜಯಿಸುವ ಕನಸು ಈಡೇರಿಲ್ಲ. ಆದರೆ ಇದೀಗ ಸ್ಮೃತಿ ಮಂದಾನ ನಾಯಕತ್ವದ ಮಹಿಳಾ ತಂಡವು ಡಬ್ಲ್ಯುಪಿಎಲ್ನ ಎರಡನೇ ಆವೃತ್ತಿಯಲ್ಲಿಯೇ ಪ್ರಶಸ್ತಿ ಜಯಿಸಿದೆ. </p>.WPL 2024 | ಆರ್ಸಿಬಿ ಕನಸು ನನಸಾಗಿಸಿದ ವನಿತೆಯರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕಳೆದ ಬಾರಿ ಐಪಿಎಲ್ ಪಂದ್ಯದಲ್ಲಿ ಅನುಭವಿಸಿದ ಸೋಲು ಬಹಳಷ್ಟು ಕಲಿಸಿದೆ. ಆಡಳಿತ ಮಂಡಳಿಯಿಂದಲೂ ಸಾಕಷ್ಟು ಬೆಂಬಲ ದೊರೆಯಿತು. ಹೀಗಾಗಿಯೇ ಈ ಬಾರಿ ನಾವು ಗೆಲುವು ಸಾಧಿಸಲು ಸಾಧ್ಯವಾಯಿತು ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕಿ ಸ್ಮೃತಿ ಮಂದಾನ ಹೇಳಿದ್ದಾರೆ. </p><p>ಭಾನುವಾರ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ನಲ್ಲಿ 8 ವಿಕೆಟ್ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರ್ಸಿಬಿ ತಂಡ ಜಯಭೇರಿ ಬಾರಿಸಿತು. ಗೆಲುವಿನ ಬಳಿಕ ಸ್ಮೃತಿ ಮಂದಾನ ಮಾತನಾಡಿ ಖುಷಿ ಹಂಚಿಕೊಂಡರು.</p><p>‘ಕಳೆದ ವರ್ಷ ಆಟಗಾರ್ತಿಯರಾಗಿ, ನಾಯಕಿಯಾಗಿ ಮತ್ತು ತಂಡವಾಗಿ ಬಹಳಷ್ಟು ವಿಷಯಗಳನ್ನು ಕಲಿತಿದ್ದೇವೆ. ನಮ್ಮ ತಂಡದ ಬಗ್ಗೆ ಹೆಮ್ಮೆ ಪಡುತ್ತೇನೆ. ಹಲವು ಏರಿಳಿತಗಳನ್ನು ಅನುಭವಿಸಿದ್ದೇವೆ, ದೆಹಲಿಯಲ್ಲಿಯೇ ಎರಡು ಪಂದ್ಯದಲ್ಲಿ ಸೋಲು ಕಂಡಿದ್ದೆವು. ಇವೆಲ್ಲದರ ನಡುವೆಯೂ ಗೆಲುವು ಸಾಧಿಸಿರುವುದು ಖುಷಿ ನೀಡಿದೆ’ ಎಂದರು. </p><p>‘ಟ್ರೋಫಿ ಗೆದ್ದಿದ್ದು ನಾನೊಬ್ಬನೇ ಅಲ್ಲ, ತಂಡವೇ ಗೆದ್ದಿದೆ. ಫ್ರಾಂಚೈಸಿಯಾಗಿ ಆರ್ಸಿಬಿ ಗೆಲ್ಲುವುದು ನಿಜಕ್ಕೂ ವಿಶೇಷ. ಈ ಗೆಲುವು ಖಂಡಿತವಾಗಿಯೂ ಟಾಪ್ ಐದರಲ್ಲಿ ಒಂದಾಗಿದೆ. ಕಪ್ ಯಾವಾಗಲೂ ಬರುತ್ತದೆ. ಆದರೆ ಈ ಬಾರಿ ನಾನು ‘ಈ ಸಲ ಕಪ್ ನಮ್ದು’ ಎಂದು ಹೇಳಲು ಬಯಸುತ್ತೇನೆ’ ಎಂದು ಹರ್ಷ ವ್ಯಕ್ತಪಡಿಸಿದರು.<strong><br></strong></p><p>ಆರ್ಸಿಬಿ ಪುರುಷರ ತಂಡವು 16 ವರ್ಷಗಳಿಂದ ಪ್ರಶಸ್ತಿ ಜಯಿಸುವ ಕನಸು ಈಡೇರಿಲ್ಲ. ಆದರೆ ಇದೀಗ ಸ್ಮೃತಿ ಮಂದಾನ ನಾಯಕತ್ವದ ಮಹಿಳಾ ತಂಡವು ಡಬ್ಲ್ಯುಪಿಎಲ್ನ ಎರಡನೇ ಆವೃತ್ತಿಯಲ್ಲಿಯೇ ಪ್ರಶಸ್ತಿ ಜಯಿಸಿದೆ. </p>.WPL 2024 | ಆರ್ಸಿಬಿ ಕನಸು ನನಸಾಗಿಸಿದ ವನಿತೆಯರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>