ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಷ್ಯಾ ಕಪ್ ಕ್ರಿಕೆಟ್: ಭಾರತಕ್ಕೆ ಲಕ್ಷ್ಮಣ್ ಹಂಗಾಮಿ ಕೋಚ್

Last Updated 24 ಆಗಸ್ಟ್ 2022, 16:09 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಅವರನ್ನು ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಆಡಲಿರುವ ಭಾರತ ತಂಡಕ್ಕೆ ಹಂಗಾಮಿ ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿದೆ.

ರಾಹುಲ್ ದ್ರಾವಿಡ್ ಅವರಿಗೆ ಕೋವಿಡ್ ಆಗಿರುವುದರಿಂದ ಟೂರ್ನಿಗೆ ತೆರಳುತ್ತಿಲ್ಲ. ಅವರ ಸ್ಥಾನಕ್ಕೆ ಲಕ್ಷ್ಮಣ್ ಅವರನ್ನು ನೇಮಕ ಮಾಡಲಾಗಿದೆ.

‘ಜಿಂಬಾಬ್ವೆಯಲ್ಲಿ ಈಚೆಗೆ ನಡೆದ ಏಕದಿನ ಸರಣಿಯಲ್ಲಿ ಆಡಿದ ಭಾರತ ತಂಡಕ್ಕೂ ಲಕ್ಷ್ಮಣ್ ಕೋಚ್ ಆಗಿ ತೆರಳಿದ್ದರು. ಇದೀಗ ದ್ರಾವಿಡ್ ಅವರು ಕೋವಿಡ್‌ ನಿಂದಾಗಿ ತಂಡದೊಂದಿಗೆ ತೆರಳುತ್ತಿಲ್ಲ. ಲಕ್ಷ್ಮಣ್ ಅವರನ್ನು ಹಂಗಾಮಿಯಾಗಿ ನೇಮಕ ಮಾಡಲಾಗಿದೆ’ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ತಿಳಿಸಿದ್ದಾರೆ.

‘ದ್ರಾವಿಡ್ ಅವರು ಕೋವಿಡ್‌ನಿಂದ ಚೇತರಿಸಿಕೊಂಡ ನಂತರ ಹಾಗೂ ನೆಗೆಟಿವ್ ವರದಿ ಬಂದ ನಂತರ ದುಬೈಗೆ ತೆರಳುವರು. ತಂಡವನ್ನು ಸೇರಿಕೊಳ್ಳುವರು’ ಎಂದು ಬಿಸಿಸಿಐ ವೈದ್ಯಕೀಯ ಸಮಿತಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT