<p><strong>ದುಬೈ:</strong> ‘ಐಪಿಎಲ್ ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ಎದುರಾಳಿ ತಂಡದ ವಿರುದ್ಧ ಗೆಲುವು ಸಾಧಿಸುವ ಹಂತದಲ್ಲಿ ಪದೇ ಪದೇ ಸೋಲೊಪ್ಪಿಕೊಳ್ಳುತ್ತಿರುವುದು ಬೇಸರ ಮೂಡಿಸಿದೆ’ ಎಂದು ತಂಡ ಮುಖ್ಯ ಕೋಚ್ ಅನಿಲ್ ಕುಂಬ್ಳೆ ಹೇಳಿದ್ದಾರೆ.</p>.<p>ಮಂಗಳವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಐಪಿಎಲ್ ಟೂರ್ನಿಯ 32ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ 2 ರನ್ಗಳ ಅಂತರದಲ್ಲಿ ಹೀನಾಯ ಸೋಲು ಕಂಡಿತ್ತು.</p>.<p>ಪಂದ್ಯ ಮುಗಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜಸ್ಥಾನ್ ವಿರುದ್ಧ ಗೆಲ್ಲುವಂತಹ ಪಂದ್ಯವನ್ನು ಪಂಜಾಬ್ ಕಿಂಗ್ಸ್ ಕೈಚೆಲ್ಲಿದೆ. 12 ಎಸೆತಗಳಿಗೆ ಕೇವಲ 8 ರನ್ ಗಳಿಸಲು ನಮ್ಮ ಬ್ಯಾಟ್ಸ್ಮನ್ಗಳು ವಿಫಲರಾಗಿದ್ದಾರೆ. ಜತೆಗೆ, ಗೆಲ್ಲುವ ಪಂದ್ಯಗಳನ್ನು ಪದೇ ಪದೇ ಸೋಲುತ್ತಿರುವುದು ನಮಗೆ ಒಂದು ರೀತಿ ನುಂಗಲಾರದ ತುತ್ತಾಗಿದೆ’ ಎಂದು ಅನಿಲ್ ಕುಂಬ್ಳೆ ತಿಳಿಸಿದ್ದಾರೆ.</p>.<p>‘ಕೆ.ಎಲ್.ರಾಹುಲ್ ಹಾಗೂ ಮಯಂಕ್ ಅಗರ್ವಾಲ್ ಉತ್ತಮ ಜೊತೆಯಾಟವಾಡಿದರು. ಹಾಗಾಗಿ ನಾವು 19 ಓವರ್ಗಳಲ್ಲಿ ಗುರಿ ಮುಟ್ಟುತ್ತೇವೆ ಎಂದು ಭರವಸೆ ಇತ್ತು. ಆದರೆ, ಪಂದ್ಯ ಕೊನೆಯ ಎರಡು ಎಸೆತಗಳವರೆಗೂ ಹೋಯಿತು. ಇದು ನಿಜಕ್ಕೂ ಕಠಿಣವಾಗಿರುತ್ತದೆ. ನಮ್ಮ ನಿರೀಕ್ಷೆ ಅನಿರೀಕ್ಷಿತವಾಗಿ ಸಾಧ್ಯವಾಗಲಿಲ್ಲ’ ಎಂದು ಹೇಳಿಕೊಂಡಿದ್ದಾರೆ.</p>.<p>ಇದೇ ವೇಳೆ ರಾಯಲ್ಸ್ ತಂಡದ ಲೆಗ್ ಸ್ಪಿನ್ನರ್ ಲೆಗ್ ಸ್ಪಿನ್ನರ್ ಕಾರ್ತಿಕ್ ತ್ಯಾಗಿ ಅವರ ಪ್ರದರ್ಶನಕ್ಕೆ ಕುಂಬ್ಳೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.</p>.<p>ಪಂಜಾಬ್ ಇದುವರೆಗೆ ಆಡಿರುವ 9 ಪಂದ್ಯಗಳಲ್ಲಿ 3ರಲ್ಲಿ ಗೆದ್ದಿದ್ದು, 6 ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಪಾಯಿಂಟ್ಸ್ ಟೇಬಲ್ನಲ್ಲಿ 7ನೇ ಸ್ಥಾನಕ್ಕೆ ಕುಸಿದಿದೆ. ಹಾಗಾಗಿ ತಂಡದ ಆಟಗಾರರು ತಪ್ಪುಗಳನ್ನು ಪುನರಾರ್ತಿಸುತ್ತಿರುವ ಬಗ್ಗೆ ಟೀಕೆಗಳು ಕೇಳಿಬರುವುದು ಸಹಜ. ಆದರೆ, ಈ ಸೋಲಿನಿಂದ ಮುಂದಿನ ಐದು ಪಂದ್ಯಗಳ ಮೇಲೆ ನಕಾರಾತ್ಮಕ ಪ್ರಭಾವ ಬೀರದಂತೆ ನಾವು ಎಚ್ಚರ ವಹಿಸಿಬೇಕಿದೆ’ ಎಂದು ಕುಂಬ್ಳೆ ಸಲಹೆ ನೀಡಿದ್ದಾರೆ.</p>.<p>ಪಂಜಾಬ್ ವಿರುದ್ಧ ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ಸ್ 20 ಓವರ್ಗಳಲ್ಲಿ 185 ರನ್ ಗಳಿಸಿ ಆಲೌಟ್ ಆಗಿತ್ತು. ಈ ಮೊತ್ತ ಬೆನ್ನತ್ತಿದ ಪಂಜಾಬ್ ನಿಗದಿತ ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 183 ರನ್ ಗಳಿಸಿ, 2 ರನ್ ಅಂತರದಿಂದ ಸೋಲೊಪ್ಪಿಕೊಡಿತ್ತು.</p>.<p><strong>ಇದನ್ನೂ ಓದಿ... <a href="https://www.prajavani.net/sports/cricket/ipl-2021-one-sunrisers-hyderabad-player-found-covid-positive-868909.html" target="_blank">IPL 2021: ಸನ್ರೈಸರ್ಸ್ ಆಟಗಾರನಿಗೆ ಕೋವಿಡ್; ಇಂದಿನ ಪಂದ್ಯದ ಮೇಲೆ ಕರಿನೆರಳು</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದುಬೈ:</strong> ‘ಐಪಿಎಲ್ ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ಎದುರಾಳಿ ತಂಡದ ವಿರುದ್ಧ ಗೆಲುವು ಸಾಧಿಸುವ ಹಂತದಲ್ಲಿ ಪದೇ ಪದೇ ಸೋಲೊಪ್ಪಿಕೊಳ್ಳುತ್ತಿರುವುದು ಬೇಸರ ಮೂಡಿಸಿದೆ’ ಎಂದು ತಂಡ ಮುಖ್ಯ ಕೋಚ್ ಅನಿಲ್ ಕುಂಬ್ಳೆ ಹೇಳಿದ್ದಾರೆ.</p>.<p>ಮಂಗಳವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಐಪಿಎಲ್ ಟೂರ್ನಿಯ 32ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ 2 ರನ್ಗಳ ಅಂತರದಲ್ಲಿ ಹೀನಾಯ ಸೋಲು ಕಂಡಿತ್ತು.</p>.<p>ಪಂದ್ಯ ಮುಗಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜಸ್ಥಾನ್ ವಿರುದ್ಧ ಗೆಲ್ಲುವಂತಹ ಪಂದ್ಯವನ್ನು ಪಂಜಾಬ್ ಕಿಂಗ್ಸ್ ಕೈಚೆಲ್ಲಿದೆ. 12 ಎಸೆತಗಳಿಗೆ ಕೇವಲ 8 ರನ್ ಗಳಿಸಲು ನಮ್ಮ ಬ್ಯಾಟ್ಸ್ಮನ್ಗಳು ವಿಫಲರಾಗಿದ್ದಾರೆ. ಜತೆಗೆ, ಗೆಲ್ಲುವ ಪಂದ್ಯಗಳನ್ನು ಪದೇ ಪದೇ ಸೋಲುತ್ತಿರುವುದು ನಮಗೆ ಒಂದು ರೀತಿ ನುಂಗಲಾರದ ತುತ್ತಾಗಿದೆ’ ಎಂದು ಅನಿಲ್ ಕುಂಬ್ಳೆ ತಿಳಿಸಿದ್ದಾರೆ.</p>.<p>‘ಕೆ.ಎಲ್.ರಾಹುಲ್ ಹಾಗೂ ಮಯಂಕ್ ಅಗರ್ವಾಲ್ ಉತ್ತಮ ಜೊತೆಯಾಟವಾಡಿದರು. ಹಾಗಾಗಿ ನಾವು 19 ಓವರ್ಗಳಲ್ಲಿ ಗುರಿ ಮುಟ್ಟುತ್ತೇವೆ ಎಂದು ಭರವಸೆ ಇತ್ತು. ಆದರೆ, ಪಂದ್ಯ ಕೊನೆಯ ಎರಡು ಎಸೆತಗಳವರೆಗೂ ಹೋಯಿತು. ಇದು ನಿಜಕ್ಕೂ ಕಠಿಣವಾಗಿರುತ್ತದೆ. ನಮ್ಮ ನಿರೀಕ್ಷೆ ಅನಿರೀಕ್ಷಿತವಾಗಿ ಸಾಧ್ಯವಾಗಲಿಲ್ಲ’ ಎಂದು ಹೇಳಿಕೊಂಡಿದ್ದಾರೆ.</p>.<p>ಇದೇ ವೇಳೆ ರಾಯಲ್ಸ್ ತಂಡದ ಲೆಗ್ ಸ್ಪಿನ್ನರ್ ಲೆಗ್ ಸ್ಪಿನ್ನರ್ ಕಾರ್ತಿಕ್ ತ್ಯಾಗಿ ಅವರ ಪ್ರದರ್ಶನಕ್ಕೆ ಕುಂಬ್ಳೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.</p>.<p>ಪಂಜಾಬ್ ಇದುವರೆಗೆ ಆಡಿರುವ 9 ಪಂದ್ಯಗಳಲ್ಲಿ 3ರಲ್ಲಿ ಗೆದ್ದಿದ್ದು, 6 ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಪಾಯಿಂಟ್ಸ್ ಟೇಬಲ್ನಲ್ಲಿ 7ನೇ ಸ್ಥಾನಕ್ಕೆ ಕುಸಿದಿದೆ. ಹಾಗಾಗಿ ತಂಡದ ಆಟಗಾರರು ತಪ್ಪುಗಳನ್ನು ಪುನರಾರ್ತಿಸುತ್ತಿರುವ ಬಗ್ಗೆ ಟೀಕೆಗಳು ಕೇಳಿಬರುವುದು ಸಹಜ. ಆದರೆ, ಈ ಸೋಲಿನಿಂದ ಮುಂದಿನ ಐದು ಪಂದ್ಯಗಳ ಮೇಲೆ ನಕಾರಾತ್ಮಕ ಪ್ರಭಾವ ಬೀರದಂತೆ ನಾವು ಎಚ್ಚರ ವಹಿಸಿಬೇಕಿದೆ’ ಎಂದು ಕುಂಬ್ಳೆ ಸಲಹೆ ನೀಡಿದ್ದಾರೆ.</p>.<p>ಪಂಜಾಬ್ ವಿರುದ್ಧ ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ಸ್ 20 ಓವರ್ಗಳಲ್ಲಿ 185 ರನ್ ಗಳಿಸಿ ಆಲೌಟ್ ಆಗಿತ್ತು. ಈ ಮೊತ್ತ ಬೆನ್ನತ್ತಿದ ಪಂಜಾಬ್ ನಿಗದಿತ ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 183 ರನ್ ಗಳಿಸಿ, 2 ರನ್ ಅಂತರದಿಂದ ಸೋಲೊಪ್ಪಿಕೊಡಿತ್ತು.</p>.<p><strong>ಇದನ್ನೂ ಓದಿ... <a href="https://www.prajavani.net/sports/cricket/ipl-2021-one-sunrisers-hyderabad-player-found-covid-positive-868909.html" target="_blank">IPL 2021: ಸನ್ರೈಸರ್ಸ್ ಆಟಗಾರನಿಗೆ ಕೋವಿಡ್; ಇಂದಿನ ಪಂದ್ಯದ ಮೇಲೆ ಕರಿನೆರಳು</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>