<p><strong>ನವದೆಹಲಿ: </strong>ಭಾರತ– ನ್ಯೂಜಿಲೆಂಡ್ ನಡುವಣ ಎರಡನೇ ಟಿ20 ಕ್ರಿಕೆಟ್ ಪಂದ್ಯಕ್ಕೆ ಆತಿಥ್ಯ ವಹಿಸಿದ್ದ ಇಲ್ಲಿನ ಏಕನಾ ಕ್ರೀಡಾಂಗಣದ ಪಿಚ್ ಕ್ಯುರೇಟರ್ ಅನ್ನು ವಜಾಗೊಳಿಸಲಾಗಿದೆ.</p>.<p>ಪಂದ್ಯಕ್ಕೆ ಸಿದ್ಧಪಡಿಸಿದ್ದ ಪಿಚ್ ಬಗ್ಗೆ ಭಾರತ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅಸಮಾಧಾನ ವ್ಯಕ್ತಪಡಿಸಿದ್ದರು. ಟಿ20 ಪಂದ್ಯಕ್ಕೆ ಯೋಗ್ಯವಾದ ಪಿಚ್ ಇದಲ್ಲ ಎಂದಿದ್ದರು.</p>.<p>‘ಪಿಚ್ ಸಿದ್ಧಪಡಿಸಿದ್ದ ಕ್ಯುರೇಟರ್ ಅನ್ನು ವಜಾಗೊಳಿಸಲಾಗಿದ್ದು, ಅವರ ಜಾಗದಲ್ಲಿ ಸಂಜೀವ್ ಕುಮಾರ್ ಅಗರವಾಲ್ ಅವರನ್ನು ನೇಮಿಸಲಾಗಿದೆ’ ಎಂದು ಉತ್ತರ ಪ್ರದೇಶ ಕ್ರಿಕೆಟ್ ಸಂಸ್ಥೆ ಮೂಲಗಳು ಹೇಳಿವೆ.</p>.<p>‘ದೇಸಿ ಕ್ರಿಕೆಟ್ ಪಂದ್ಯಗಳಿಗೆ ಇಲ್ಲಿನ ಎಲ್ಲ ಪಿಚ್ಗಳನ್ನು ಬಳಸಲಾಗಿತ್ತು. ಅಂತರರಾಷ್ಟ್ರೀಯ ಪಂದ್ಯಕ್ಕಾಗಿ ಒಂದು ಅಥವಾ ಎರಡು ಪಿಚ್ಗಳನ್ನು ಮೀಸಲಿಡಬೇಕಿತ್ತು. ಅತಿಯಾಗಿ ಪಂದ್ಯಗಳನ್ನು ಆಡಿಸಿದ್ದರಿಂದ ಪಿಚ್ ತನ್ನ ಸ್ವರೂಪ ಕಳೆದುಕೊಂಡಿತ್ತು. ಅದನ್ನು ಸರಿಪಡಿಸಲು ಸಾಕಷ್ಟು ಕಾಲಾವಕಾಶ ಲಭಿಸಲಿಲ್ಲ’ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಭಾರತ– ನ್ಯೂಜಿಲೆಂಡ್ ನಡುವಣ ಎರಡನೇ ಟಿ20 ಕ್ರಿಕೆಟ್ ಪಂದ್ಯಕ್ಕೆ ಆತಿಥ್ಯ ವಹಿಸಿದ್ದ ಇಲ್ಲಿನ ಏಕನಾ ಕ್ರೀಡಾಂಗಣದ ಪಿಚ್ ಕ್ಯುರೇಟರ್ ಅನ್ನು ವಜಾಗೊಳಿಸಲಾಗಿದೆ.</p>.<p>ಪಂದ್ಯಕ್ಕೆ ಸಿದ್ಧಪಡಿಸಿದ್ದ ಪಿಚ್ ಬಗ್ಗೆ ಭಾರತ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅಸಮಾಧಾನ ವ್ಯಕ್ತಪಡಿಸಿದ್ದರು. ಟಿ20 ಪಂದ್ಯಕ್ಕೆ ಯೋಗ್ಯವಾದ ಪಿಚ್ ಇದಲ್ಲ ಎಂದಿದ್ದರು.</p>.<p>‘ಪಿಚ್ ಸಿದ್ಧಪಡಿಸಿದ್ದ ಕ್ಯುರೇಟರ್ ಅನ್ನು ವಜಾಗೊಳಿಸಲಾಗಿದ್ದು, ಅವರ ಜಾಗದಲ್ಲಿ ಸಂಜೀವ್ ಕುಮಾರ್ ಅಗರವಾಲ್ ಅವರನ್ನು ನೇಮಿಸಲಾಗಿದೆ’ ಎಂದು ಉತ್ತರ ಪ್ರದೇಶ ಕ್ರಿಕೆಟ್ ಸಂಸ್ಥೆ ಮೂಲಗಳು ಹೇಳಿವೆ.</p>.<p>‘ದೇಸಿ ಕ್ರಿಕೆಟ್ ಪಂದ್ಯಗಳಿಗೆ ಇಲ್ಲಿನ ಎಲ್ಲ ಪಿಚ್ಗಳನ್ನು ಬಳಸಲಾಗಿತ್ತು. ಅಂತರರಾಷ್ಟ್ರೀಯ ಪಂದ್ಯಕ್ಕಾಗಿ ಒಂದು ಅಥವಾ ಎರಡು ಪಿಚ್ಗಳನ್ನು ಮೀಸಲಿಡಬೇಕಿತ್ತು. ಅತಿಯಾಗಿ ಪಂದ್ಯಗಳನ್ನು ಆಡಿಸಿದ್ದರಿಂದ ಪಿಚ್ ತನ್ನ ಸ್ವರೂಪ ಕಳೆದುಕೊಂಡಿತ್ತು. ಅದನ್ನು ಸರಿಪಡಿಸಲು ಸಾಕಷ್ಟು ಕಾಲಾವಕಾಶ ಲಭಿಸಲಿಲ್ಲ’ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>