ಭಾನುವಾರ, ಏಪ್ರಿಲ್ 2, 2023
24 °C

IND vs NZ: ಲಖನೌ ಪಿಚ್‌ ಕ್ಯುರೇಟರ್ ವಜಾ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಭಾರತ– ನ್ಯೂಜಿಲೆಂಡ್ ನಡುವಣ ಎರಡನೇ ಟಿ20 ಕ್ರಿಕೆಟ್‌ ಪಂದ್ಯಕ್ಕೆ ಆತಿಥ್ಯ ವಹಿಸಿದ್ದ ಇಲ್ಲಿನ ಏಕನಾ ಕ್ರೀಡಾಂಗಣದ ಪಿಚ್‌ ಕ್ಯುರೇಟರ್‌ ಅನ್ನು ವಜಾಗೊಳಿಸಲಾಗಿದೆ.

ಪಂದ್ಯಕ್ಕೆ ಸಿದ್ಧಪಡಿಸಿದ್ದ ಪಿಚ್‌ ಬಗ್ಗೆ ಭಾರತ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅಸಮಾಧಾನ ವ್ಯಕ್ತಪಡಿಸಿದ್ದರು. ಟಿ20 ಪಂದ್ಯಕ್ಕೆ ಯೋಗ್ಯವಾದ ಪಿಚ್‌ ಇದಲ್ಲ ಎಂದಿದ್ದರು.

‘ಪಿಚ್‌ ಸಿದ್ಧಪಡಿಸಿದ್ದ ಕ್ಯುರೇಟರ್‌ ಅನ್ನು ವಜಾಗೊಳಿಸಲಾಗಿದ್ದು, ಅವರ ಜಾಗದಲ್ಲಿ ಸಂಜೀವ್‌ ಕುಮಾರ್‌ ಅಗರವಾಲ್‌ ಅವರನ್ನು ನೇಮಿಸಲಾಗಿದೆ’ ಎಂದು ಉತ್ತರ ಪ್ರದೇಶ ಕ್ರಿಕೆಟ್‌ ಸಂಸ್ಥೆ ಮೂಲಗಳು ಹೇಳಿವೆ.

‘ದೇಸಿ ಕ್ರಿಕೆಟ್‌ ಪಂದ್ಯಗಳಿಗೆ ಇಲ್ಲಿನ ಎಲ್ಲ ಪಿಚ್‌ಗಳನ್ನು ಬಳಸಲಾಗಿತ್ತು. ಅಂತರರಾಷ್ಟ್ರೀಯ ಪಂದ್ಯಕ್ಕಾಗಿ ಒಂದು ಅಥವಾ ಎರಡು ಪಿಚ್‌ಗಳನ್ನು ಮೀಸಲಿಡಬೇಕಿತ್ತು. ಅತಿಯಾಗಿ ಪಂದ್ಯಗಳನ್ನು ಆಡಿಸಿದ್ದರಿಂದ ಪಿಚ್‌ ತನ್ನ ಸ್ವರೂಪ ಕಳೆದುಕೊಂಡಿತ್ತು. ಅದನ್ನು ಸರಿಪಡಿಸಲು ಸಾಕಷ್ಟು ಕಾಲಾವಕಾಶ ಲಭಿಸಲಿಲ್ಲ’ ಎಂದು ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು