<p><strong>ಬೆಂಗಳೂರು</strong>: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು ಇದೇ ಮೊದಲ ಬಾರಿಗೆ ಮಹಿಳೆಯರಿಗಾಗಿ ‘ಮಹಾರಾಣಿ ಟ್ರೋಫಿ‘ ಲೀಗ್ ಕ್ರಿಕೆಟ್ ಟೂರ್ನಿಯ ಆಯೋಜಿಸಲು ಸಿದ್ದತೆ ನಡೆಸಿದೆ. </p>.<p>ಈ ಆರಂಭಿಕ ಟಿ20 ಲೀಗ್ನಲ್ಲಿ ಐದು ತಂಡಗಳು ಭಾಗವಹಿಸುವ ನಿರೀಕ್ಷೆ ಇದೆ. ಟೂರ್ನಿಯ ಪಂದ್ಯಗಳನ್ನು ನಗರದ ಹೊರವಲಯದಲ್ಲಿರುವ ಆಲೂರಿನ ಕೆಎಸ್ಸಿಎ ಕ್ರೀಡಾಂಗಣದಲ್ಲಿ ನಡೆಸಲಾಗುವುದು. ಫೈನಲ್ ಮಾತ್ರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಸಲಾಗುವುದು ಎಂದು ಸಂಸ್ಥೆಯ ಉನ್ನತ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ. </p>.<p>‘ಭಾನುವಾರದಿಂದ ಟೂರ್ನಿಯ ಕೆಲವು ಫ್ರ್ಯಾಂಚೈಸಿಗಳು ಪ್ರತಿಭಾಶೋಧ ಆರಂಭಿಸಲಿವೆ. ಅದಕ್ಕಾಗಿ ಟ್ರಯಲ್ಸ್ಗಳನ್ನು ಆಯೋಜಿಸಲಾಗುತ್ತಿದೆ. ಪುರುಷರ ವಿಭಾಗದಲ್ಲಿ ಗ್ರಾಮಾಂತರ ಪ್ರದೇಶದ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲು ಮಹಾರಾಜ ಟ್ರೋಫಿ ಟೂರ್ನಿಯು ಕೆಲವು ವರ್ಷಗಳಿಂದ ನಡೆಯುತ್ತಿದೆ. ರಾಜ್ಯದ ಮಹಿಳಾ ಕ್ರಿಕೆಟ್ ಪ್ರತಿಭಾನ್ವಿತರಿಗೂ ಅವಕಾಶ ಕೊಡುವ ಉದ್ದೇಶದಿಂದ ಈ ಟೂರ್ನಿ ಆರಂಭಿಸಲಾಗುತ್ತಿದೆ‘ ಎಂದು ಮೂಲಗಳು ತಿಳಿಸಿವೆ. </p>.<p>ರಾಜನುಕುಂಟೆಯಲ್ಲಿರುವ ಜಸ್ಟ್ ಕ್ರಿಕೆಟ್ ಅಕಾಡೆಮಿಯಲ್ಲಿ ಭಾನುವಾರ ಮೈಸೂರು ವಾರಿಯರ್ಸ್ ತಂಡವು ಪ್ರತಿಭಾ ಶೋಧ ಆಯೋಜಿಸಿದೆ. </p>.<p>ಪುರುಷರಿಗಾಗಿ ‘ಮಹಾರಾಜ ಟ್ರೋಫಿ’ ಕ್ರಿಕೆಟ್ ಟೂರ್ನಿಯು ಆಗಸ್ಟ್ 11ರಿಂದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು ಇದೇ ಮೊದಲ ಬಾರಿಗೆ ಮಹಿಳೆಯರಿಗಾಗಿ ‘ಮಹಾರಾಣಿ ಟ್ರೋಫಿ‘ ಲೀಗ್ ಕ್ರಿಕೆಟ್ ಟೂರ್ನಿಯ ಆಯೋಜಿಸಲು ಸಿದ್ದತೆ ನಡೆಸಿದೆ. </p>.<p>ಈ ಆರಂಭಿಕ ಟಿ20 ಲೀಗ್ನಲ್ಲಿ ಐದು ತಂಡಗಳು ಭಾಗವಹಿಸುವ ನಿರೀಕ್ಷೆ ಇದೆ. ಟೂರ್ನಿಯ ಪಂದ್ಯಗಳನ್ನು ನಗರದ ಹೊರವಲಯದಲ್ಲಿರುವ ಆಲೂರಿನ ಕೆಎಸ್ಸಿಎ ಕ್ರೀಡಾಂಗಣದಲ್ಲಿ ನಡೆಸಲಾಗುವುದು. ಫೈನಲ್ ಮಾತ್ರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಸಲಾಗುವುದು ಎಂದು ಸಂಸ್ಥೆಯ ಉನ್ನತ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ. </p>.<p>‘ಭಾನುವಾರದಿಂದ ಟೂರ್ನಿಯ ಕೆಲವು ಫ್ರ್ಯಾಂಚೈಸಿಗಳು ಪ್ರತಿಭಾಶೋಧ ಆರಂಭಿಸಲಿವೆ. ಅದಕ್ಕಾಗಿ ಟ್ರಯಲ್ಸ್ಗಳನ್ನು ಆಯೋಜಿಸಲಾಗುತ್ತಿದೆ. ಪುರುಷರ ವಿಭಾಗದಲ್ಲಿ ಗ್ರಾಮಾಂತರ ಪ್ರದೇಶದ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲು ಮಹಾರಾಜ ಟ್ರೋಫಿ ಟೂರ್ನಿಯು ಕೆಲವು ವರ್ಷಗಳಿಂದ ನಡೆಯುತ್ತಿದೆ. ರಾಜ್ಯದ ಮಹಿಳಾ ಕ್ರಿಕೆಟ್ ಪ್ರತಿಭಾನ್ವಿತರಿಗೂ ಅವಕಾಶ ಕೊಡುವ ಉದ್ದೇಶದಿಂದ ಈ ಟೂರ್ನಿ ಆರಂಭಿಸಲಾಗುತ್ತಿದೆ‘ ಎಂದು ಮೂಲಗಳು ತಿಳಿಸಿವೆ. </p>.<p>ರಾಜನುಕುಂಟೆಯಲ್ಲಿರುವ ಜಸ್ಟ್ ಕ್ರಿಕೆಟ್ ಅಕಾಡೆಮಿಯಲ್ಲಿ ಭಾನುವಾರ ಮೈಸೂರು ವಾರಿಯರ್ಸ್ ತಂಡವು ಪ್ರತಿಭಾ ಶೋಧ ಆಯೋಜಿಸಿದೆ. </p>.<p>ಪುರುಷರಿಗಾಗಿ ‘ಮಹಾರಾಜ ಟ್ರೋಫಿ’ ಕ್ರಿಕೆಟ್ ಟೂರ್ನಿಯು ಆಗಸ್ಟ್ 11ರಿಂದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>