‘ಧೋನಿ ಅವರಿಗೆ ಅಪಾರವಾದ ಅಭಿಮಾನಿ ಬಳಗವಿದೆ. ಯುವ ಸಾಧಕರಿಗೆ ಅವರು ಮೈಲುಗಲ್ಲಾಗಿದ್ದಾರೆ. 2007ರಲ್ಲಿ ವಿಶ್ವ ಟ್ವೆಂಟಿ–20 ಮತ್ತು 2011ರಲ್ಲಿ ಏಕದಿನ ವಿಶ್ವಕಪ್ ಗೆದ್ದುಕೊಟ್ಟ ನಾಯಕ. ಭಾರತ ಕ್ರಿಕೆಟ್ ಕಂಡ ಅದ್ವಿತೀಯ ನಾಯಕರಾಗಿದ್ದಾರೆ. ಯಾವಾಗ ನಿವೃತ್ತಿ ಹೇಳಬೇಕು ಎಂಬುದು ಅವರಿಗೆ ಚೆನ್ನಾಗಿ ಗೊತ್ತಿದೆ. ಸರಿಯಾದ ಸಮಯಕ್ಕೆ, ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ’ ಎಂದು ಆನಂದ್ ಹೇಳಿದರು.