ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪನಾಯಕನಾಗಿ ಕೆ.ಎಲ್. ರಾಹುಲ್ ಅವರನ್ನು ನೇಮಕ ಮಾಡಿ: ಗವಾಸ್ಕರ್ 

Last Updated 16 ಸೆಪ್ಟೆಂಬರ್ 2021, 17:13 IST
ಅಕ್ಷರ ಗಾತ್ರ

ನವದೆಹಲಿ: ಟಿ–20 ವಿಶ್ವಕಪ್ ಬಳಿಕ ಟಿ–20 ನಾಯಕತ್ವವನ್ನು ತ್ಯಜಿಸುವುದಾಗಿ ವಿರಾಟ್ ಕೊಹ್ಲಿ ಘೋಷಿಸಿದ ನಂತರ ರೋಹಿತ್ ಶರ್ಮಾ ನಾಯಕತ್ವ ವಹಿಸಿಕೊಳ್ಳುವ ಹಾದಿಯಲ್ಲಿದ್ದಾರೆ. ಈ ಮಧ್ಯೆ, ಭಾರತ ಕ್ರಿಕೆಟ್ ತಂಡದ ಉಪನಾಯಕನಾಗಿ ಕೆ.ಎಲ್. ರಾಹುಲ್ ಅವರು ನೇಮಕವಾಗಬೇಕೆಂದು ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

‘ಟಿ–20 ನಾಯಕನನ್ನು ಬದಲಾವಣೆ ಮಾಡುತ್ತಿರುವ ಬಿಸಿಸಿಐನ ಮುಂದಾಲೋಚನೆ ಸರಿಯಾಗಿಯೇ ಇದೆ. ಭಾರತ ತಂಡಕ್ಕೆ ಹೊಸ ನಾಯಕನನ್ನು ರೂಪಿಸಲು ಪ್ರಯತ್ನಿಸುತ್ತಿದ್ದರೆ ಕೆ.ಎಲ್. ರಾಹುಲ್ ಅವರನ್ನು ಪರಿಗಣಿಸಬಹುದು. ಇಲ್ಲಿಯವರೆಗೂ ಅವರು ಉತ್ತಮವಾಗಿ ಬ್ಯಾಟಿಂಗ್ ಮಾಡಿದ್ದಾರೆ. ಇಂಗ್ಲೆಂಡ್‌ನಲ್ಲೂ ಅವರ ಪ್ರದರ್ಶನ ಗಮನ ಸೆಳೆದಿತ್ತು. ಐಪಿಎಲ್ ಮತ್ತು 50 ಓವರ್‌ಗಳ ಅಂತರರಾಷ್ಟ್ರೀಯ ಪಂದ್ಯಗಳಲ್ಲೂ ಅವರ ಪ್ರದರ್ಶನ ಚೆನ್ನಾಗಿದೆ ಹಾಗಾಗಿ, ಅವರನ್ನು ಉಪನಾಯಕನನ್ನಾಗಿ ಆಯ್ಕೆ ಮಾಡಬಹುದು’ ಎಂದು ಸ್ಫೋರ್ಟ್ಸ್‌ ಥಕ್ ಕಾರ್ಯಕ್ರಮದಲ್ಲಿ ಗವಾಸ್ಕರ್ ಹೇಳಿದ್ದಾರೆ.

ಐಪಿಎಲ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ನಾಯಕರಾಗಿ ತೋರಿದ ನಾಯಕತ್ವದ ಗುಣಕ್ಕಾಗಿ ಕರ್ನಾಟಕದ ಸೊಗಸಾದ ಬ್ಯಾಟ್ಸ್‌ಮನ್‌ ಕೆ.ಎಲ್. ರಾಹುಲ್ ಅವರನ್ನು ಗವಾಸ್ಕರ್ ಪ್ರಶಂಸಿಸಿದ್ದಾರೆ.

‘ಐಪಿಎಲ್‌ನಲ್ಲಿ ಅವರು ಉತ್ತಮ ನಾಯಕತ್ವದ ಗುಣಗಳನ್ನು ತೋರಿಸಿದ್ದಾರೆ. ನಾಯಕತ್ವದ ಹೊರೆ ತನ್ನ ಬ್ಯಾಟಿಂಗ್ ಮೇಲೆ ಪರಿಣಾಮ ಬೀರಲು ಅವರು ಬಿಡಲಿಲ್ಲ. ನಾಯಕನ ಆಯ್ಕೆ ವಿಷಯ ಬಂದಾಗ ಅವರ ಹೆಸರನ್ನು ಪರಿಗಣನೆಗೆ ತೆಗೆದುಕೊಳ್ಳಬಹುದು’ ಎಂದು ಗವಾಸ್ಕರ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT