<p><strong>ಕೋಲ್ಕತ್ತ:</strong>ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳುಇಲ್ಲಿನ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಆಡಬೇಕಿದ್ದ ಏಕದಿನ ಪಂದ್ಯವನ್ನು ಸರ್ಕಾರದ ಗಮನಕ್ಕೆ ತರದೆ ರದ್ದು ಮಾಡಿರುವುದಕ್ಕೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಕೋವಿಡ್–19 ಭೀತಿಯಿಂದಾಗಿ ಏಕದಿನ ಕ್ರಿಕೆಟ್ ಸರಣಿಯ ಎರಡು ಮತ್ತು ಮೂರನೇ ಪಂದ್ಯಗಳನ್ನು ರದ್ದು ಮಾಡುವ ನಿರ್ಧಾರವನ್ನು ಬಿಸಿಸಿಐ ಕೈಗೊಂಡಿತ್ತು.ರದ್ದಾದ ಪಂದ್ಯಗಳು ಲಖನೌ (ಮಾರ್ಚ್ 15) ಹಾಗೂ ಕೋಲ್ಕತ್ತದಲ್ಲಿ (ಮಾರ್ಚ್ 18) ಆಯೋಜನೆಗೊಂಡಿದ್ದವು.</p>.<p>ಧರ್ಮಶಾಲಾದಲ್ಲಿ ನಡೆಯಬೇಕಿದ್ದ ಮೊದಲ ಪಂದ್ಯವು ಮಳೆಯಿಂದಾಗಿ ರದ್ದಾಗಿತ್ತು.</p>.<p><strong>ಇದನ್ನೂ ಓದಿ:</strong><a href="https://cms.prajavani.net/sports/cricket/cricket-ipl-start-postponed-as-india-odi-series-with-s-africa-called-off-712053.html" itemprop="url">ಕೊರೊನಾ ಸೋಂಕು ಭೀತಿ: ಭಾರತ–ದಕ್ಷಿಣ ಆಫ್ರಿಕಾ ಕ್ರಿಕೆಟ್ ಸರಣಿ ರದ್ದು </a></p>.<p>ಕೋಲ್ಕತ್ತ ಪಂದ್ಯದರದ್ದುಸಂಬಂಧ ಮಾತನಾಡಿರುವ ಮಮತಾ, ‘ಸರ್ಕಾರದೊಂದಿಗೆಗಂಗೂಲಿ ಅವರಿಗೆ ಉತ್ತಮ ಸಂಬಂಧವಿದೆ. ಆದರೂ,ಅವರು ನಮಗೆ ಒಂದೇ ಒಂದು ಮಾತು ಹೇಳಿಲ್ಲ. ಕೋಲ್ಕತ್ತದಲ್ಲಿ ಪಂದ್ಯ ಆಯೋಜಿಸಲಾಗಿದೆ ಎಂದ ಮೇಲೆ, ಕೋಲ್ಕತ್ತ ಪೊಲೀಸರಿಗಾದರೂ ಈ ಬಗ್ಗೆ ಮಾಹಿತಿ ನೀಡಬೇಕಿತ್ತು’ ಎಂದಿದ್ದಾರೆ.</p>.<p>‘ನಾನು ಇದನ್ನು ಗೌರವದಿಂದಲೇ ಕೇಳುತ್ತಿದ್ದೇನೆ. ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಅಥವಾ ಗೃಹ ಇಲಾಖೆ ಕಾರ್ಯದರ್ಶಿ ಇಲ್ಲವೇ ಪೊಲೀಸ್ ಆಯುಕ್ತರು ಅಥವಾ ಸರ್ಕಾರದ ಯಾರೊಬ್ಬರಿಗೂ ಯಾಕೆ ಈ ಬಗ್ಗೆ ಮಾಹಿತಿ ನೀಡಲಿಲ್ಲ?’ ಎಂದು ಪ್ರಶ್ನಿಸಿದ್ದಾರೆ.</p>.<p>‘ನೀವು ನಿರ್ಧಾರ ತೆಗೆದುಕೊಂಡ ನಂತರ ನಮಗೆ ತಿಳಿಸಿದರೆ ಹೇಗೆ? ನೀವು ಈ ಪರಿಸ್ಥಿತಿಯಲ್ಲಿದ್ದರೆ (ನಮ್ಮ ಸ್ಥಿತಿಯಲ್ಲಿ ಇದ್ದಿದ್ದರೆ) ಏನು ಮಾಡುತ್ತಿದ್ದೀರಿ?’ ಎಂದು ಕೇಳಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://cms.prajavani.net/sports/cricket/coronaviras-effecs-ipl-2020-to-start-from-april-15-instead-of-march-29-said-bcci-711970.html" itemprop="url">ಕೊರೊನಾ ಸೋಂಕು ಹರಡುವ ಭೀತಿ: ಐಪಿಎಲ್ ಮುಂದೂಡಿದ ಬಿಸಿಸಿಐ </a></p>.<p>ಏಕದಿನ ಸರಣಿ ಮಾತ್ರವಲ್ಲದೆ, ಈ ಐಪಿಎಲ್ ಟೂರ್ನಿಯನ್ನೂ ಬಿಸಿಸಿಐ ಮುಂದೂಡಿದೆ.ಇದೇ 29ರಿಂದ ಐಪಿಎಲ್ ಆರಂಭವಾಗಬೇಕಿತ್ತು. ಆದರೆ, ಕೋವಿಡ್–19ರ ಭೀತಿಯಿಂದಾಗಿ ಮುಂದಿನ ತಿಂಗಳು 15ರ ವರೆಗೆ ಮುಂದೂಡಲಾಗಿದೆ.</p>.<p>ಕಳೆದ ವರ್ಷ ಡಿಸೆಂಬರ್ನಲ್ಲಿ ಚೀನಾದ ವುಹಾನ್ನಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡ ಕೊರೊನಾ ವೈರಸ್ ಸೋಂಕು, ಇದುವರೆಗೂ 100ಕ್ಕೂ ಹೆಚ್ಚು ದೇಶಗಳಿಗೆ ವ್ಯಾಪಿಸಿದೆ. ಪ್ರಪಂಚದಾದ್ಯಂತ ಸುಮಾರು 1,20,000 ಸಾವಿರ ಜನರಿಗೆ ಸೋಂಕು ಇರುವುದು ದೃಢವಾಗಿದ್ದು, ಜಾಗತಿಕವಾಗಿ 5,700ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ.</p>.<p>ಕೋವಿಡ್–19ಗೆದೇಶದಲ್ಲಿಯೂ ಇಬ್ಬರು ಬಲಿಯಾಗಿದ್ದು, ಸೋಂಕಿತರ ಸಂಖ್ಯೆ 110ಕ್ಕೆ ಏರಿಕೆಯಾಗಿದೆ.</p>.<p><strong>ಇದನ್ನೂ ಓದಿ:</strong><a href="http:// https://www.prajavani.net/stories/national/covid-corona-virus-india-karnataka-dehli-712620.html" target="_blank">ಕೋವಿಡ್-19: ಭಾರತದಲ್ಲಿ 110ಕ್ಕೆ ಏರಿದ ಸೋಂಕಿತರ ಸಂಖ್ಯೆ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong>ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳುಇಲ್ಲಿನ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಆಡಬೇಕಿದ್ದ ಏಕದಿನ ಪಂದ್ಯವನ್ನು ಸರ್ಕಾರದ ಗಮನಕ್ಕೆ ತರದೆ ರದ್ದು ಮಾಡಿರುವುದಕ್ಕೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಕೋವಿಡ್–19 ಭೀತಿಯಿಂದಾಗಿ ಏಕದಿನ ಕ್ರಿಕೆಟ್ ಸರಣಿಯ ಎರಡು ಮತ್ತು ಮೂರನೇ ಪಂದ್ಯಗಳನ್ನು ರದ್ದು ಮಾಡುವ ನಿರ್ಧಾರವನ್ನು ಬಿಸಿಸಿಐ ಕೈಗೊಂಡಿತ್ತು.ರದ್ದಾದ ಪಂದ್ಯಗಳು ಲಖನೌ (ಮಾರ್ಚ್ 15) ಹಾಗೂ ಕೋಲ್ಕತ್ತದಲ್ಲಿ (ಮಾರ್ಚ್ 18) ಆಯೋಜನೆಗೊಂಡಿದ್ದವು.</p>.<p>ಧರ್ಮಶಾಲಾದಲ್ಲಿ ನಡೆಯಬೇಕಿದ್ದ ಮೊದಲ ಪಂದ್ಯವು ಮಳೆಯಿಂದಾಗಿ ರದ್ದಾಗಿತ್ತು.</p>.<p><strong>ಇದನ್ನೂ ಓದಿ:</strong><a href="https://cms.prajavani.net/sports/cricket/cricket-ipl-start-postponed-as-india-odi-series-with-s-africa-called-off-712053.html" itemprop="url">ಕೊರೊನಾ ಸೋಂಕು ಭೀತಿ: ಭಾರತ–ದಕ್ಷಿಣ ಆಫ್ರಿಕಾ ಕ್ರಿಕೆಟ್ ಸರಣಿ ರದ್ದು </a></p>.<p>ಕೋಲ್ಕತ್ತ ಪಂದ್ಯದರದ್ದುಸಂಬಂಧ ಮಾತನಾಡಿರುವ ಮಮತಾ, ‘ಸರ್ಕಾರದೊಂದಿಗೆಗಂಗೂಲಿ ಅವರಿಗೆ ಉತ್ತಮ ಸಂಬಂಧವಿದೆ. ಆದರೂ,ಅವರು ನಮಗೆ ಒಂದೇ ಒಂದು ಮಾತು ಹೇಳಿಲ್ಲ. ಕೋಲ್ಕತ್ತದಲ್ಲಿ ಪಂದ್ಯ ಆಯೋಜಿಸಲಾಗಿದೆ ಎಂದ ಮೇಲೆ, ಕೋಲ್ಕತ್ತ ಪೊಲೀಸರಿಗಾದರೂ ಈ ಬಗ್ಗೆ ಮಾಹಿತಿ ನೀಡಬೇಕಿತ್ತು’ ಎಂದಿದ್ದಾರೆ.</p>.<p>‘ನಾನು ಇದನ್ನು ಗೌರವದಿಂದಲೇ ಕೇಳುತ್ತಿದ್ದೇನೆ. ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಅಥವಾ ಗೃಹ ಇಲಾಖೆ ಕಾರ್ಯದರ್ಶಿ ಇಲ್ಲವೇ ಪೊಲೀಸ್ ಆಯುಕ್ತರು ಅಥವಾ ಸರ್ಕಾರದ ಯಾರೊಬ್ಬರಿಗೂ ಯಾಕೆ ಈ ಬಗ್ಗೆ ಮಾಹಿತಿ ನೀಡಲಿಲ್ಲ?’ ಎಂದು ಪ್ರಶ್ನಿಸಿದ್ದಾರೆ.</p>.<p>‘ನೀವು ನಿರ್ಧಾರ ತೆಗೆದುಕೊಂಡ ನಂತರ ನಮಗೆ ತಿಳಿಸಿದರೆ ಹೇಗೆ? ನೀವು ಈ ಪರಿಸ್ಥಿತಿಯಲ್ಲಿದ್ದರೆ (ನಮ್ಮ ಸ್ಥಿತಿಯಲ್ಲಿ ಇದ್ದಿದ್ದರೆ) ಏನು ಮಾಡುತ್ತಿದ್ದೀರಿ?’ ಎಂದು ಕೇಳಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://cms.prajavani.net/sports/cricket/coronaviras-effecs-ipl-2020-to-start-from-april-15-instead-of-march-29-said-bcci-711970.html" itemprop="url">ಕೊರೊನಾ ಸೋಂಕು ಹರಡುವ ಭೀತಿ: ಐಪಿಎಲ್ ಮುಂದೂಡಿದ ಬಿಸಿಸಿಐ </a></p>.<p>ಏಕದಿನ ಸರಣಿ ಮಾತ್ರವಲ್ಲದೆ, ಈ ಐಪಿಎಲ್ ಟೂರ್ನಿಯನ್ನೂ ಬಿಸಿಸಿಐ ಮುಂದೂಡಿದೆ.ಇದೇ 29ರಿಂದ ಐಪಿಎಲ್ ಆರಂಭವಾಗಬೇಕಿತ್ತು. ಆದರೆ, ಕೋವಿಡ್–19ರ ಭೀತಿಯಿಂದಾಗಿ ಮುಂದಿನ ತಿಂಗಳು 15ರ ವರೆಗೆ ಮುಂದೂಡಲಾಗಿದೆ.</p>.<p>ಕಳೆದ ವರ್ಷ ಡಿಸೆಂಬರ್ನಲ್ಲಿ ಚೀನಾದ ವುಹಾನ್ನಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡ ಕೊರೊನಾ ವೈರಸ್ ಸೋಂಕು, ಇದುವರೆಗೂ 100ಕ್ಕೂ ಹೆಚ್ಚು ದೇಶಗಳಿಗೆ ವ್ಯಾಪಿಸಿದೆ. ಪ್ರಪಂಚದಾದ್ಯಂತ ಸುಮಾರು 1,20,000 ಸಾವಿರ ಜನರಿಗೆ ಸೋಂಕು ಇರುವುದು ದೃಢವಾಗಿದ್ದು, ಜಾಗತಿಕವಾಗಿ 5,700ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ.</p>.<p>ಕೋವಿಡ್–19ಗೆದೇಶದಲ್ಲಿಯೂ ಇಬ್ಬರು ಬಲಿಯಾಗಿದ್ದು, ಸೋಂಕಿತರ ಸಂಖ್ಯೆ 110ಕ್ಕೆ ಏರಿಕೆಯಾಗಿದೆ.</p>.<p><strong>ಇದನ್ನೂ ಓದಿ:</strong><a href="http:// https://www.prajavani.net/stories/national/covid-corona-virus-india-karnataka-dehli-712620.html" target="_blank">ಕೋವಿಡ್-19: ಭಾರತದಲ್ಲಿ 110ಕ್ಕೆ ಏರಿದ ಸೋಂಕಿತರ ಸಂಖ್ಯೆ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>