<p><strong>ಕೋಲ್ಕತ್ತ:</strong> ಇಲ್ಲಿನ ಈಡೆನ್ ಗಾರ್ಡನ್ಸ್ ಕ್ರಿಕೆಟ್ ಮೈದಾನದಲ್ಲಿ ನಿನ್ನೆ (ಮೇ 20) ಮುಕ್ತಾಯಗೊಂಡ ಇಂಡಿಯನ್ ಪ್ರೀಮಿಯರ್ ಲೀಗ್ನ ನಿರ್ಣಾಯಕ ಪಂದ್ಯದಲ್ಲಿ ಕೆಕೆಆರ್ ತಂಡವು ಮುಂಬೈ ಇಂಡಿಯನ್ಸ್ ಅನ್ನು ಮಣಿಸಿ, ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ. </p><p>ಪಂದ್ಯದಲ್ಲಿ ಮಿಂಚಿನ ಬ್ಯಾಟಿಂಗ್ ಪ್ರದರ್ಶಿಸಿದ ಕನ್ನಡಿಗ ಮನೀಶ್ ಪಾಂಡೆ ಅವರು ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದುಕೊಂಡರು. ಅವರು, ಆರಂಭಿಕ ಆಘಾತದಿಂದ ಸಂಕಷ್ಟದಲ್ಲಿದ್ದ ಕೋಲ್ಕತ್ತ ನೈಟ್ ರೈಡರ್ಸ್ ತಂಡದ ಪರ 33 ಎಸೆತಗಳಲ್ಲಿ 6 ಬೌಂಡರಿ ಸಹಿತ ಸಮಯೋಚಿತ 45 ರನ್ ಸಿಡಿಸಿ ಆಸರೆಯಾದರು. </p>.<p><strong>ರೋಹಿತ್–ಕೊಹ್ಲಿ ಸಾಲಿಗೆ ಸೇರಿದ ಮನೀಶ್</strong></p><p>ಇನ್ನೂ ಈ ಪಂದ್ಯದ ಮೂಲಕ ಕನ್ನಡಿಗ ಮನೀಶ್ ಪಾಂಡೆ ಅವರು ಐಪಿಎಲ್ ಮೊದಲ ಆವೃತ್ತಿಯಿಂದ ಇಲ್ಲಿಯವರೆಗೂ ಪ್ರತೀ ಸೀಸನ್ ಅಲ್ಲೂ ಬ್ಯಾಟ್ ಮಾಡಿದ ಮೂರನೇ ಆಟಗಾರ ಎಂಬ ಸಾಧನೆ ಮಾಡಿದರು. ಇದಕ್ಕೂ ಮೊದಲು ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಮಾತ್ರ ಈ ಸಾಧನೆ ಮಾಡಿದ್ದರು. 2008ರ ಉದ್ಘಾಟನಾ ಆವೃತ್ತಿಯಿಂದ ಇಲ್ಲಿಯವರೆಗೂ ಐಪಿಎಲ್ ಆಡುತ್ತಿರುವ ಎಂ.ಎಸ್. ಧೋನಿ ಅವರು ಈ ಆವೃತ್ತಿಯಲ್ಲಿ ಗಾಯದ ಸಮಸ್ಯೆಯಿಂದಾಗಿ ಮೈದಾನಕ್ಕೆ ಇಳಿದಿರಲಿಲ್ಲ. ಹಾಗಾಗಿ, ಎಲ್ಲಾ ಆವೃತ್ತಿಯಲ್ಲೂ ಬ್ಯಾಟಿಂಗ್ ಮಾಡಿದ ಮೂರನೇ ಆಟಗಾರ ಎಂಬ ದಾಖಲೆನ್ನು ಪಾಂಡೆ ತಮ್ಮದಾಗಿಸಿಕೊಂಡರು. </p><p>ಐಪಿಎಲ್ ಇತಿಹಾಸದಲ್ಲಿ ಮೊದಲ ಶತಕ ಸಿಡಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆ ಹೊಂದಿರುವ ಮನೀಶ್ ಪಾಂಡೆ, ತಮ್ಮ 36ನೇ ವಯಸ್ಸಿನಲ್ಲಿಯೂ ಅಂತಹದ್ದೇ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ತಂಡದ ಸಂಕಷ್ಟದ ಸಂದರ್ಭದಲ್ಲಿ ಸಮಯೋಚಿತ ಬ್ಯಾಟಿಂಗ್ ಪ್ರದರ್ಶಿಸಿದ ಅವರು, ಮುಂಬೈ ಬೌಲರ್ಗಳ ಮೇಲೆ ಸವಾರಿ ಮಾಡಿದರು. ಬೌಂಡರಿ ಹೊರತುಪಡಿಸಿ, ಡಾಟ್ ಬಾಲ್ಗಳನ್ನು ಕಡಿಮೆ ಮಾಡಲು , ಅತ್ಯುತ್ತಮವಾಗಿ ಒಂದು ಹಾಗೂ ಎರಡು ರನ್ ಕದಿಯುವ ಮೂಲಕ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಇಲ್ಲಿನ ಈಡೆನ್ ಗಾರ್ಡನ್ಸ್ ಕ್ರಿಕೆಟ್ ಮೈದಾನದಲ್ಲಿ ನಿನ್ನೆ (ಮೇ 20) ಮುಕ್ತಾಯಗೊಂಡ ಇಂಡಿಯನ್ ಪ್ರೀಮಿಯರ್ ಲೀಗ್ನ ನಿರ್ಣಾಯಕ ಪಂದ್ಯದಲ್ಲಿ ಕೆಕೆಆರ್ ತಂಡವು ಮುಂಬೈ ಇಂಡಿಯನ್ಸ್ ಅನ್ನು ಮಣಿಸಿ, ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ. </p><p>ಪಂದ್ಯದಲ್ಲಿ ಮಿಂಚಿನ ಬ್ಯಾಟಿಂಗ್ ಪ್ರದರ್ಶಿಸಿದ ಕನ್ನಡಿಗ ಮನೀಶ್ ಪಾಂಡೆ ಅವರು ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದುಕೊಂಡರು. ಅವರು, ಆರಂಭಿಕ ಆಘಾತದಿಂದ ಸಂಕಷ್ಟದಲ್ಲಿದ್ದ ಕೋಲ್ಕತ್ತ ನೈಟ್ ರೈಡರ್ಸ್ ತಂಡದ ಪರ 33 ಎಸೆತಗಳಲ್ಲಿ 6 ಬೌಂಡರಿ ಸಹಿತ ಸಮಯೋಚಿತ 45 ರನ್ ಸಿಡಿಸಿ ಆಸರೆಯಾದರು. </p>.<p><strong>ರೋಹಿತ್–ಕೊಹ್ಲಿ ಸಾಲಿಗೆ ಸೇರಿದ ಮನೀಶ್</strong></p><p>ಇನ್ನೂ ಈ ಪಂದ್ಯದ ಮೂಲಕ ಕನ್ನಡಿಗ ಮನೀಶ್ ಪಾಂಡೆ ಅವರು ಐಪಿಎಲ್ ಮೊದಲ ಆವೃತ್ತಿಯಿಂದ ಇಲ್ಲಿಯವರೆಗೂ ಪ್ರತೀ ಸೀಸನ್ ಅಲ್ಲೂ ಬ್ಯಾಟ್ ಮಾಡಿದ ಮೂರನೇ ಆಟಗಾರ ಎಂಬ ಸಾಧನೆ ಮಾಡಿದರು. ಇದಕ್ಕೂ ಮೊದಲು ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಮಾತ್ರ ಈ ಸಾಧನೆ ಮಾಡಿದ್ದರು. 2008ರ ಉದ್ಘಾಟನಾ ಆವೃತ್ತಿಯಿಂದ ಇಲ್ಲಿಯವರೆಗೂ ಐಪಿಎಲ್ ಆಡುತ್ತಿರುವ ಎಂ.ಎಸ್. ಧೋನಿ ಅವರು ಈ ಆವೃತ್ತಿಯಲ್ಲಿ ಗಾಯದ ಸಮಸ್ಯೆಯಿಂದಾಗಿ ಮೈದಾನಕ್ಕೆ ಇಳಿದಿರಲಿಲ್ಲ. ಹಾಗಾಗಿ, ಎಲ್ಲಾ ಆವೃತ್ತಿಯಲ್ಲೂ ಬ್ಯಾಟಿಂಗ್ ಮಾಡಿದ ಮೂರನೇ ಆಟಗಾರ ಎಂಬ ದಾಖಲೆನ್ನು ಪಾಂಡೆ ತಮ್ಮದಾಗಿಸಿಕೊಂಡರು. </p><p>ಐಪಿಎಲ್ ಇತಿಹಾಸದಲ್ಲಿ ಮೊದಲ ಶತಕ ಸಿಡಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆ ಹೊಂದಿರುವ ಮನೀಶ್ ಪಾಂಡೆ, ತಮ್ಮ 36ನೇ ವಯಸ್ಸಿನಲ್ಲಿಯೂ ಅಂತಹದ್ದೇ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ತಂಡದ ಸಂಕಷ್ಟದ ಸಂದರ್ಭದಲ್ಲಿ ಸಮಯೋಚಿತ ಬ್ಯಾಟಿಂಗ್ ಪ್ರದರ್ಶಿಸಿದ ಅವರು, ಮುಂಬೈ ಬೌಲರ್ಗಳ ಮೇಲೆ ಸವಾರಿ ಮಾಡಿದರು. ಬೌಂಡರಿ ಹೊರತುಪಡಿಸಿ, ಡಾಟ್ ಬಾಲ್ಗಳನ್ನು ಕಡಿಮೆ ಮಾಡಲು , ಅತ್ಯುತ್ತಮವಾಗಿ ಒಂದು ಹಾಗೂ ಎರಡು ರನ್ ಕದಿಯುವ ಮೂಲಕ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>