<p><strong>ತಿರುವನಂತಪುರ:</strong> ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಇಂದು ಕೇರಳ ರಾಜಧಾನಿಯಲ್ಲಿ ನಡೆಯಲಿದೆ.</p>.<p>ತಿರುವನಂತಪುರಕ್ಕೆ ಬಂದ ಟೀಮ್ ಇಂಡಿಯಾ ಆಟಗಾರರಿಗೆ ಭರ್ಜರಿ ಸ್ವಾಗತ ದೊರೆತಿದೆ. ಸ್ಥಳೀಯರು ಆಟಗಾರರನ್ನು ಸ್ವಾಗತಿಸಿರುವ ವಿಡಿಯೊವನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಟ್ವೀಟ್ ಮಾಡಿದೆ.</p>.<p>ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು ನಗರದಲ್ಲಿ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದಾರೆ. ಗ್ರೀನ್ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದ ಹೊರಭಾಗದಲ್ಲಿ ಕೊಹ್ಲಿ ಅವರ ಬೃಹದಾಕಾರದ ಕಟೌಟ್ ಹಾಕಲಾಗಿದೆ. ಈ ಕುರಿತ ಚಿತ್ರವನ್ನು ಕ್ರಿಕೆಟ್ ಅಭಿಮಾನಿಗಳು ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ.</p>.<p>ದಕ್ಷಿಣ ಆಫ್ರಿಕಾ ತಂಡವು ಭಾನುವಾರವೇ ತಿರುವನಂತಪುರಕ್ಕೆ ಬಂದಿತ್ತು. ರೋಹಿತ್ ಬಳಗ ಸೋಮವಾರ ನಗರಕ್ಕೆ ಬಂದಿದೆ.</p>.<p>ದಕ್ಷಿಣ ಆಫ್ರಿಕಾ ವಿರುದ್ಧದ ಉಳಿದ ಎರಡು ಟಿ20 ಪಂದ್ಯಗಳು ಗುವಾಹಟಿಯಲ್ಲಿ (ಅಕ್ಟೋಬರ್ 2) ಮತ್ತು ಇಂದೋರ್ನಲ್ಲಿ (ಅಕ್ಟೋಬರ್ 4) ನಡೆಯಲಿವೆ. ನಂತರ ಉಭಯ ತಂಡಗಳು ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಸೆಣಸಲಿವೆ.</p>.<p>ಇತ್ತೀಚೆಗೆ ಕೊನೆಗೊಂಡ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯನ್ನು ಭಾರತ ತಂಡವು 2–1 ಅಂತರದಿಂದ ಗೆದ್ದುಕೊಂಡಿದೆ. ಇದೀಗ ದಕ್ಷಿಣ ಆಫ್ರಿಕಾ ವಿರುದ್ಧವೂ ಉತ್ತಮ ಪ್ರದರ್ಶನ ನೀಡಿ ಟಿ20 ವಿಶ್ವಕಪ್ಗೆ ಸಿದ್ಧವಾಗುವ ತವಕದಲ್ಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಇಂದು ಕೇರಳ ರಾಜಧಾನಿಯಲ್ಲಿ ನಡೆಯಲಿದೆ.</p>.<p>ತಿರುವನಂತಪುರಕ್ಕೆ ಬಂದ ಟೀಮ್ ಇಂಡಿಯಾ ಆಟಗಾರರಿಗೆ ಭರ್ಜರಿ ಸ್ವಾಗತ ದೊರೆತಿದೆ. ಸ್ಥಳೀಯರು ಆಟಗಾರರನ್ನು ಸ್ವಾಗತಿಸಿರುವ ವಿಡಿಯೊವನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಟ್ವೀಟ್ ಮಾಡಿದೆ.</p>.<p>ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು ನಗರದಲ್ಲಿ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದಾರೆ. ಗ್ರೀನ್ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದ ಹೊರಭಾಗದಲ್ಲಿ ಕೊಹ್ಲಿ ಅವರ ಬೃಹದಾಕಾರದ ಕಟೌಟ್ ಹಾಕಲಾಗಿದೆ. ಈ ಕುರಿತ ಚಿತ್ರವನ್ನು ಕ್ರಿಕೆಟ್ ಅಭಿಮಾನಿಗಳು ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ.</p>.<p>ದಕ್ಷಿಣ ಆಫ್ರಿಕಾ ತಂಡವು ಭಾನುವಾರವೇ ತಿರುವನಂತಪುರಕ್ಕೆ ಬಂದಿತ್ತು. ರೋಹಿತ್ ಬಳಗ ಸೋಮವಾರ ನಗರಕ್ಕೆ ಬಂದಿದೆ.</p>.<p>ದಕ್ಷಿಣ ಆಫ್ರಿಕಾ ವಿರುದ್ಧದ ಉಳಿದ ಎರಡು ಟಿ20 ಪಂದ್ಯಗಳು ಗುವಾಹಟಿಯಲ್ಲಿ (ಅಕ್ಟೋಬರ್ 2) ಮತ್ತು ಇಂದೋರ್ನಲ್ಲಿ (ಅಕ್ಟೋಬರ್ 4) ನಡೆಯಲಿವೆ. ನಂತರ ಉಭಯ ತಂಡಗಳು ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಸೆಣಸಲಿವೆ.</p>.<p>ಇತ್ತೀಚೆಗೆ ಕೊನೆಗೊಂಡ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯನ್ನು ಭಾರತ ತಂಡವು 2–1 ಅಂತರದಿಂದ ಗೆದ್ದುಕೊಂಡಿದೆ. ಇದೀಗ ದಕ್ಷಿಣ ಆಫ್ರಿಕಾ ವಿರುದ್ಧವೂ ಉತ್ತಮ ಪ್ರದರ್ಶನ ನೀಡಿ ಟಿ20 ವಿಶ್ವಕಪ್ಗೆ ಸಿದ್ಧವಾಗುವ ತವಕದಲ್ಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>